<p><strong>ಮುಂಬೈ</strong>: ಕೇಂದ್ರ ಸರ್ಕಾರವು ಘೋಷಿಸಿರುವ ಆರ್ಥಿಕ ಉತ್ತೇಜನಾ ಕೊಡುಗೆಗಳು ಹೂಡಿಕೆದಾರರ ನಿರೀಕ್ಷೆಯನ್ನು ತಲುಪುವಲ್ಲಿ ವಿಫಲವಾಗಿವೆ. ಹೀಗಾಗಿ ಸೋಮವಾರ ಷೇರುಪೇಟೆಗಳಲ್ಲಿ ಭಾರಿ ಕುಸಿತ ಕಂಡುಬಂದಿತು.</p>.<p>ಹಣಕಾಸು ಮತ್ತು ವಾಹನ ವಯಲದ ಷೇರುಗಳು ಅತಿಯಾದ ಮಾರಾಟದ ಒತ್ತಡಕ್ಕೆ ಒಳಗಾದವು. ಇದು ಸೂಚ್ಯಂಕಗಳ ಇಳಿಕೆಗೆ ಕಾರಣವಾಯಿತು.</p>.<p>ಐದು ಕಂತುಗಳ ₹ 20 ಲಕ್ಷ ಕೋಟಿ ಮೊತ್ತದ ಆರ್ಥಿಕ ಕೊಡುಗೆಗಳಿಗೆ ದೇಶದ ಷೇರುಪೇಟೆಗಳು ಸಂತುಷ್ಟಗೊಂಡಿಲ್ಲ. ಇದರ ಜತೆಗೆ ಕೋವಿಡ್–19 ಪ್ರಕರಣಗಳು ಏರಿಕೆಯಾಗುತ್ತಲೇ ಇವೆ. ಹೀಗಾಗಿ ಜಾಗತಿಕ ಷೇರುಪೇಟೆಗಳಲ್ಲಿ ಸಕಾರಾತ್ಮಕ ವಹಿವಾಟು ನಡೆದರೂ ಅದರ ಪರಿಣಾಮ ದೇಶಿ ಷೇರುಪೇಟೆಗಳ ಮೇಲೆ ಆಗಲಿಲ್ಲ.</p>.<p>ಮುಂಬೈ ಷೇರುಪೇಟೆ (ಬಿಎಸ್ಇ) ಸಂವೇದಿ ಸೂಚ್ಯಂಕ 1,069 ಅಂಶಗಳ ಕುಸಿತ ಕಂಡು, 30,028 ಅಂಶಗಳಿಗೆ ಇಳಿಕೆಯಾಗಿದೆ. ಇದು ಆರು ವಾರಗಳ ಕನಿಷ್ಠ ಮಟ್ಟವಾಗಿದೆ.</p>.<p>ರಾಷ್ಟ್ರೀಯ ಷೇರುಪೇಟೆ (ಎನ್ಎಸ್ಇ) ಸೂಚ್ಯಂಕ ನಿಫ್ಟಿ 313 ಅಂಶ ಇಳಿಕೆ ಕಂಡು 8,823 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ.</p>.<p><strong>ಕರಗಿತು ₹3.65 ಲಕ್ಷ ಕೋಟಿ</strong></p>.<p>ಷೇರುಪೇಟೆಯಲ್ಲಿನ ನಕಾರಾತ್ಮಕ ವಹಿವಾಟಿನಿಂದಾಗಿ ಮಾರುಕಟ್ಟೆ ಮೌಲ್ಯದ ಲೆಕ್ಕದಲ್ಲಿ ಹೂಡಿಕೆದಾರರ ಸಂಪತ್ತು ಮೌಲ್ಯ ₹ 3.65 ಲಕ್ಷ ಕೋಟಿ ಕರಗಿದೆ.</p>.<p>ಷೇರುಪೇಟೆಯ ಬಂಡವಾಳ ಮೌಲ್ಯ ₹122.65 ಲಕ್ಷ ಕೋಟಿಗಳಿಂದ ₹119 ಲಕ್ಷ ಕೋಟಿಗಳಿಗೆ ಇಳಿಕೆಯಾಗಿದೆ.</p>.<p><strong>ರೂಪಾಯಿ 33 ಪೈಸೆ ಇಳಿಕೆ</strong></p>.<p>ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್ ಎದುರು ರೂಪಾಯಿ ಮೌಲ್ಯ 33 ಪೈಸೆ ಇಳಿಕೆಯಾಗಿ ಒಂದು ಡಾಲರ್ಗೆ ₹75.91ರಂತೆ ವಿನಿಮಯಗೊಂಡಿತು.</p>.<p>ಕಚ್ಚಾ ತೈಲ ದರ ಏರಿಕೆ ಹಾಗೂ ವಿತ್ತೀಯ ಉತ್ತೇಜನಾ ಕೊಡುಗೆ ಪರಿಣಾಮಕಾರಿ ಆಗದೇ ಇರುವುದು ಹೂಡಿಕೆದಾರರ ಮೇಲೆ ಪರಿಣಾಮ ಬೀರಿದೆ ಎಂದು ವರ್ತಕರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಕೇಂದ್ರ ಸರ್ಕಾರವು ಘೋಷಿಸಿರುವ ಆರ್ಥಿಕ ಉತ್ತೇಜನಾ ಕೊಡುಗೆಗಳು ಹೂಡಿಕೆದಾರರ ನಿರೀಕ್ಷೆಯನ್ನು ತಲುಪುವಲ್ಲಿ ವಿಫಲವಾಗಿವೆ. ಹೀಗಾಗಿ ಸೋಮವಾರ ಷೇರುಪೇಟೆಗಳಲ್ಲಿ ಭಾರಿ ಕುಸಿತ ಕಂಡುಬಂದಿತು.</p>.<p>ಹಣಕಾಸು ಮತ್ತು ವಾಹನ ವಯಲದ ಷೇರುಗಳು ಅತಿಯಾದ ಮಾರಾಟದ ಒತ್ತಡಕ್ಕೆ ಒಳಗಾದವು. ಇದು ಸೂಚ್ಯಂಕಗಳ ಇಳಿಕೆಗೆ ಕಾರಣವಾಯಿತು.</p>.<p>ಐದು ಕಂತುಗಳ ₹ 20 ಲಕ್ಷ ಕೋಟಿ ಮೊತ್ತದ ಆರ್ಥಿಕ ಕೊಡುಗೆಗಳಿಗೆ ದೇಶದ ಷೇರುಪೇಟೆಗಳು ಸಂತುಷ್ಟಗೊಂಡಿಲ್ಲ. ಇದರ ಜತೆಗೆ ಕೋವಿಡ್–19 ಪ್ರಕರಣಗಳು ಏರಿಕೆಯಾಗುತ್ತಲೇ ಇವೆ. ಹೀಗಾಗಿ ಜಾಗತಿಕ ಷೇರುಪೇಟೆಗಳಲ್ಲಿ ಸಕಾರಾತ್ಮಕ ವಹಿವಾಟು ನಡೆದರೂ ಅದರ ಪರಿಣಾಮ ದೇಶಿ ಷೇರುಪೇಟೆಗಳ ಮೇಲೆ ಆಗಲಿಲ್ಲ.</p>.<p>ಮುಂಬೈ ಷೇರುಪೇಟೆ (ಬಿಎಸ್ಇ) ಸಂವೇದಿ ಸೂಚ್ಯಂಕ 1,069 ಅಂಶಗಳ ಕುಸಿತ ಕಂಡು, 30,028 ಅಂಶಗಳಿಗೆ ಇಳಿಕೆಯಾಗಿದೆ. ಇದು ಆರು ವಾರಗಳ ಕನಿಷ್ಠ ಮಟ್ಟವಾಗಿದೆ.</p>.<p>ರಾಷ್ಟ್ರೀಯ ಷೇರುಪೇಟೆ (ಎನ್ಎಸ್ಇ) ಸೂಚ್ಯಂಕ ನಿಫ್ಟಿ 313 ಅಂಶ ಇಳಿಕೆ ಕಂಡು 8,823 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ.</p>.<p><strong>ಕರಗಿತು ₹3.65 ಲಕ್ಷ ಕೋಟಿ</strong></p>.<p>ಷೇರುಪೇಟೆಯಲ್ಲಿನ ನಕಾರಾತ್ಮಕ ವಹಿವಾಟಿನಿಂದಾಗಿ ಮಾರುಕಟ್ಟೆ ಮೌಲ್ಯದ ಲೆಕ್ಕದಲ್ಲಿ ಹೂಡಿಕೆದಾರರ ಸಂಪತ್ತು ಮೌಲ್ಯ ₹ 3.65 ಲಕ್ಷ ಕೋಟಿ ಕರಗಿದೆ.</p>.<p>ಷೇರುಪೇಟೆಯ ಬಂಡವಾಳ ಮೌಲ್ಯ ₹122.65 ಲಕ್ಷ ಕೋಟಿಗಳಿಂದ ₹119 ಲಕ್ಷ ಕೋಟಿಗಳಿಗೆ ಇಳಿಕೆಯಾಗಿದೆ.</p>.<p><strong>ರೂಪಾಯಿ 33 ಪೈಸೆ ಇಳಿಕೆ</strong></p>.<p>ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್ ಎದುರು ರೂಪಾಯಿ ಮೌಲ್ಯ 33 ಪೈಸೆ ಇಳಿಕೆಯಾಗಿ ಒಂದು ಡಾಲರ್ಗೆ ₹75.91ರಂತೆ ವಿನಿಮಯಗೊಂಡಿತು.</p>.<p>ಕಚ್ಚಾ ತೈಲ ದರ ಏರಿಕೆ ಹಾಗೂ ವಿತ್ತೀಯ ಉತ್ತೇಜನಾ ಕೊಡುಗೆ ಪರಿಣಾಮಕಾರಿ ಆಗದೇ ಇರುವುದು ಹೂಡಿಕೆದಾರರ ಮೇಲೆ ಪರಿಣಾಮ ಬೀರಿದೆ ಎಂದು ವರ್ತಕರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>