‘ಈಚೆಗೆ ಕಂಡುಬಂದ ಗಳಿಕೆಯ ಓಟದ ನಂತರದಲ್ಲಿ ಮಾರುಕಟ್ಟೆಯಲ್ಲಿ ಎಚ್ಚರಿಕೆಯ ವಹಿವಾಟು ನಡೆಯುತ್ತಿದೆ. ಹಣದುಬ್ಬರದ ಒತ್ತಡ ಹೆಚ್ಚಾಗುತ್ತಿರುವ ಕಾರಣದಿಂದಾಗಿ ಮಾರುಕಟ್ಟೆಯಲ್ಲಿ ಅಸ್ಥಿರತೆ ಮನೆ ಮಾಡಿದೆ. ಕಚ್ಚಾ ವಸ್ತುಗಳ ಬೆಲೆ ಹೆಚ್ಚಾಗುತ್ತಿರುವುದು, ಜಗತ್ತಿನ ಹಲವು ಕಡೆಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಉತ್ಪನ್ನಗಳಿಗೆ ಬೇಡಿಕೆ ತಗ್ಗಿರುವುದು ಮತ್ತು ಯುದ್ಧದ ವಾತಾವರಣವು ಕಂಪನಿಗಳ ವರಮಾನದ ಮೆಲೆ ನಕಾರಾತ್ಮಕ ಪರಿಣಾಮ ಉಂಟುಮಾಡಬಹುದು’ ಎಂದು ಜಿಯೋಜಿತ್ ಫೈನಾನ್ಶಿಯಲ್ ಸರ್ವಿಸಸ್ನ ಸಂಶೋಧನಾ ವಿಭಾಗದ ಮುಖ್ಯಸ್ಥ ವಿನೋದ್ ನಾಯರ್ ಹೇಳಿದ್ದಾರೆ.