<p><strong>ಮುಂಬೈ:</strong> ಈ ವಾರದ ನಾಲ್ಕು ವಹಿವಾಟು ದಿನಗಳಲ್ಲಿ ನಿರಂತರ ಕುಸಿತ ದಾಖಲಿಸಿದ್ದ ಷೇರುಪೇಟೆಯಲ್ಲಿ ಶುಕ್ರವಾರ ಖರೀದಿ ಉತ್ಸಾಹ ಮರಳಿತು.</p>.<p>‘ಕೊರೊನಾ–2’ ವೈರಸ್ನ ಹಾವಳಿ ಮಟ್ಟ ಹಾಕಲು ವಿಶ್ವದಾದ್ಯಂತ ಸರ್ಕಾರಗಳು ದಿಟ್ಟ ಕ್ರಮಗಳನ್ನು ಕೈಗೊಳ್ಳುತ್ತಿರುವುದರಿಂದ ಜಾಗತಿಕ ಷೇರುಪೇಟೆಗಳಲ್ಲಿ ಚೇತರಿಕೆ ಕಂಡು ಬಂದಿದೆ. ಮುಂಬೈ ಷೇರುಪೇಟೆಯಲ್ಲಿಯೂ ಇದು ಪ್ರತಿಫಲನಗೊಂಡಿತು.</p>.<p>ದೇಶಿ ಆರ್ಥಿಕತೆಗೆ ಚೇತರಿಕೆ ನೀಡಲು ಪ್ರಧಾನಿ ನರೇಂದ್ರ ಮೋದಿ ಅವರು ಹಣಕಾಸು ಕಾರ್ಯಪಡೆ ರಚಿಸಿರುವುದು ಉತ್ತೇಜನಾ ಕೊಡುಗೆ ಪ್ರಕಟಗೊಳ್ಳುವ ಸಾಧ್ಯತೆ ಹೆಚ್ಚಿಸಿದೆ. ಕಾರ್ಯಪಡೆಯು ಶೀಘ್ರದಲ್ಲಿಯೇ ರಚನಾತ್ಮಕ ಪ್ರಸ್ತಾವಗಳನ್ನು ಪ್ರಕಟಿಸುವ ನಿರೀಕ್ಷೆ ಮೂಡಿಸಿದೆ. ಕಚ್ಚಾ ತೈಲ ಬೆಲೆ ಕುಸಿತದ ಪ್ರಯೋಜನವನ್ನು ಈ ಉದ್ದೇಶಕ್ಕೆ ಬಳಸಿಕೊಳ್ಳುವ ಸಾಧ್ಯತೆ ಇದೆ.</p>.<p>ವಹಿವಾಟಿನ ಆರಂಭವೇ ಏರಿಳಿತದಿಂದ ಕೂಡಿತ್ತು. ಒಂದು ಹಂತದಲ್ಲಿ 2,485 ಅಂಶಗಳಿಗೆ ಏರಿಕೆ ಕಂಡಿದ್ದ ಸಂವೇದಿ ಸೂಚ್ಯಂಕವು, ದಿನದ ಅಂತ್ಯಕ್ಕೆ 1,627 ಅಂಶಗಳ ಹೆಚ್ಚಳದೊಂದಿಗೆ ವಹಿವಾಟು ಕೊನೆಗೊಳಿಸಿತು. ಇದು ದಿನವೊಂದರಲ್ಲಿನ ಗರಿಷ್ಠ ಏರಿಕೆಯಾಗಿದೆ. ಇದರಿಂದಾಗಿ ಮಾರುಕಟ್ಟೆ ಮೌಲ್ಯದ ಲೆಕ್ಕದಲ್ಲಿ ಹೂಡಿಕೆದಾರರ ಸಂಪತ್ತು ₹ 6.32 ಲಕ್ಷ ಕೋಟಿಗಳಷ್ಟು ಹೆಚ್ಚಾಗಿದೆ. ರಾಷ್ಟ್ರೀಯ ಷೇರುಪೇಟೆ ‘ನಿಫ್ಟಿ’ ಕೂಡ 482 ಅಂಶ ಚೇತರಿಕೆ ದಾಖಲಿಸಿ 8,745 ಅಂಶಗಳಲ್ಲಿ ವಹಿವಾಟು ಅಂತ್ಯ ಕಂಡಿತು.</p>.<p>ಈ ವಾರದಲ್ಲಿ ಸೂಚ್ಯಂಕ ಕಂಡ ನಷ್ಟವು 10 ವರ್ಷಗಳಲ್ಲಿನ ಗರಿಷ್ಠ ಮಟ್ಟವಾಗಿದೆ. ಒಎನ್ಜಿಸಿ ಷೇರು ಗರಿಷ್ಠ (ಶೇ 18) ಗಳಿಕೆ ಕಂಡಿತು. ಎಚ್ಯುಎಲ್, ಆರ್ಐಎಲ್, ಐಟಿಸಿ ಮತ್ತು ಏಷ್ಯನ್ ಪೇಂಟ್ಸ್ ಷೇರುಗಳು ಲಾಭ ಮಾಡಿಕೊಂಡವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಈ ವಾರದ ನಾಲ್ಕು ವಹಿವಾಟು ದಿನಗಳಲ್ಲಿ ನಿರಂತರ ಕುಸಿತ ದಾಖಲಿಸಿದ್ದ ಷೇರುಪೇಟೆಯಲ್ಲಿ ಶುಕ್ರವಾರ ಖರೀದಿ ಉತ್ಸಾಹ ಮರಳಿತು.</p>.<p>‘ಕೊರೊನಾ–2’ ವೈರಸ್ನ ಹಾವಳಿ ಮಟ್ಟ ಹಾಕಲು ವಿಶ್ವದಾದ್ಯಂತ ಸರ್ಕಾರಗಳು ದಿಟ್ಟ ಕ್ರಮಗಳನ್ನು ಕೈಗೊಳ್ಳುತ್ತಿರುವುದರಿಂದ ಜಾಗತಿಕ ಷೇರುಪೇಟೆಗಳಲ್ಲಿ ಚೇತರಿಕೆ ಕಂಡು ಬಂದಿದೆ. ಮುಂಬೈ ಷೇರುಪೇಟೆಯಲ್ಲಿಯೂ ಇದು ಪ್ರತಿಫಲನಗೊಂಡಿತು.</p>.<p>ದೇಶಿ ಆರ್ಥಿಕತೆಗೆ ಚೇತರಿಕೆ ನೀಡಲು ಪ್ರಧಾನಿ ನರೇಂದ್ರ ಮೋದಿ ಅವರು ಹಣಕಾಸು ಕಾರ್ಯಪಡೆ ರಚಿಸಿರುವುದು ಉತ್ತೇಜನಾ ಕೊಡುಗೆ ಪ್ರಕಟಗೊಳ್ಳುವ ಸಾಧ್ಯತೆ ಹೆಚ್ಚಿಸಿದೆ. ಕಾರ್ಯಪಡೆಯು ಶೀಘ್ರದಲ್ಲಿಯೇ ರಚನಾತ್ಮಕ ಪ್ರಸ್ತಾವಗಳನ್ನು ಪ್ರಕಟಿಸುವ ನಿರೀಕ್ಷೆ ಮೂಡಿಸಿದೆ. ಕಚ್ಚಾ ತೈಲ ಬೆಲೆ ಕುಸಿತದ ಪ್ರಯೋಜನವನ್ನು ಈ ಉದ್ದೇಶಕ್ಕೆ ಬಳಸಿಕೊಳ್ಳುವ ಸಾಧ್ಯತೆ ಇದೆ.</p>.<p>ವಹಿವಾಟಿನ ಆರಂಭವೇ ಏರಿಳಿತದಿಂದ ಕೂಡಿತ್ತು. ಒಂದು ಹಂತದಲ್ಲಿ 2,485 ಅಂಶಗಳಿಗೆ ಏರಿಕೆ ಕಂಡಿದ್ದ ಸಂವೇದಿ ಸೂಚ್ಯಂಕವು, ದಿನದ ಅಂತ್ಯಕ್ಕೆ 1,627 ಅಂಶಗಳ ಹೆಚ್ಚಳದೊಂದಿಗೆ ವಹಿವಾಟು ಕೊನೆಗೊಳಿಸಿತು. ಇದು ದಿನವೊಂದರಲ್ಲಿನ ಗರಿಷ್ಠ ಏರಿಕೆಯಾಗಿದೆ. ಇದರಿಂದಾಗಿ ಮಾರುಕಟ್ಟೆ ಮೌಲ್ಯದ ಲೆಕ್ಕದಲ್ಲಿ ಹೂಡಿಕೆದಾರರ ಸಂಪತ್ತು ₹ 6.32 ಲಕ್ಷ ಕೋಟಿಗಳಷ್ಟು ಹೆಚ್ಚಾಗಿದೆ. ರಾಷ್ಟ್ರೀಯ ಷೇರುಪೇಟೆ ‘ನಿಫ್ಟಿ’ ಕೂಡ 482 ಅಂಶ ಚೇತರಿಕೆ ದಾಖಲಿಸಿ 8,745 ಅಂಶಗಳಲ್ಲಿ ವಹಿವಾಟು ಅಂತ್ಯ ಕಂಡಿತು.</p>.<p>ಈ ವಾರದಲ್ಲಿ ಸೂಚ್ಯಂಕ ಕಂಡ ನಷ್ಟವು 10 ವರ್ಷಗಳಲ್ಲಿನ ಗರಿಷ್ಠ ಮಟ್ಟವಾಗಿದೆ. ಒಎನ್ಜಿಸಿ ಷೇರು ಗರಿಷ್ಠ (ಶೇ 18) ಗಳಿಕೆ ಕಂಡಿತು. ಎಚ್ಯುಎಲ್, ಆರ್ಐಎಲ್, ಐಟಿಸಿ ಮತ್ತು ಏಷ್ಯನ್ ಪೇಂಟ್ಸ್ ಷೇರುಗಳು ಲಾಭ ಮಾಡಿಕೊಂಡವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>