ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮೋದಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿಲ್ಲ’: ವಿಶ್ವೇಶತೀರ್ಥ ಸ್ವಾಮೀಜಿ

Last Updated 5 ಜೂನ್ 2018, 19:30 IST
ಅಕ್ಷರ ಗಾತ್ರ

ಮೈಸೂರು: ‘ಪ್ರಧಾನಿ ನರೇಂದ್ರ ಮೋದಿ ಆಡಳಿತ ಪೂರ್ಣ ತೃಪ್ತಿ ತಂದಿಲ್ಲ ಎಂದು ಹೇಳಿದ್ದೇನೆಯೇ ಹೊರತೂ, ಅವರ ಕಾರ್ಯವೈಖರಿ ಕುರಿತು ಅಸಮಾಧಾನ ವ್ಯಕ್ತಪಡಿಸಿಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ’ ಎಂದು ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ತಿಳಿಸಿದರು.

‘ವಿದೇಶದಿಂದ ಕಪ್ಪುಹಣ ಹೊರತರುವಲ್ಲಿ, ಗಂಗಾ ನದಿ ಶುದ್ಧೀಕರಣ ವಿಚಾರದಲ್ಲಿ ಉತ್ತಮ ಕೆಲಸ ನಡೆದಿಲ್ಲ ಎಂದಿದ್ದೆ. ಆದರೆ, ಮಾಧ್ಯಮಗಳಲ್ಲಿ ಬೇರೆ ರೀತಿಯ ಹೆಡ್‌ಲೈನ್‌ ಬಂದಿದೆ. ಇದರಿಂದ ಸಮಾಜಕ್ಕೆ ತಪ್ಪು ಸಂದೇಶ ರವಾನೆಯಾಗಬಹುದು ಎಂಬ ಕಾರಣಕ್ಕೆ ಖುದ್ದಾಗಿ ಸ್ಪಷ್ಟೀಕರಣ ನೀಡುತ್ತಿದ್ದೇನೆ‍. ಅಂದು ಮಾತನಾಡುವಾಗ ಮೈಕ್‌ ಇರಲಿಲ್ಲ. ಹೀಗಾಗಿ, ನಾನು ಹೇಳಿದ್ದು ಕೆಲವರಿಗೆ ಸರಿಯಾಗಿ ಕೇಳಿಸದೆ ತಪ್ಪಾಗಿರಬಹುದು’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

‘ಎಲ್ಲಾ ಪಕ್ಷಗಳೊಂದಿಗೆ ನಾನು ಉತ್ತಮ ಸಂಬಂಧ ಹೊಂದಿದ್ದೇನೆ. ಯಾವುದೇ ಪಕ್ಷ ಒಳ್ಳೆಯ ಕೆಲಸ ಮಾಡಿದರೂ ಅದನ್ನು ಸ್ವಾಗತಿಸುತ್ತೇನೆ. ನಾನು ಒಂದು ಪಕ್ಷಕ್ಕೆ ಸೀಮಿತವಾಗಿಲ್ಲ. ಪೀಠಾಧಿಪತಿಗಳು ಸ್ವತಂತ್ರರು, ಪಕ್ಷಾತೀತರು’ ಎಂದರು.

‘ಚುನಾವಣೆಯಲ್ಲಿ ಯಾರಿಗೂ ಬಹುಮತ ಬರದಿದ್ದರೆ, ಸರ್ವಪಕ್ಷಗಳ ಸರ್ಕಾರ ಅಸ್ತಿತ್ವಕ್ಕೆ ಬರಬೇಕು. ಆಗ ಯಾವುದೇ ಅಸ್ಥಿರತೆ ಭಯ ಇರುವುದಿಲ್ಲ. ಇಂತಹ ಪ್ರಯತ್ನಗಳು ಬೇರೆ ಬೇರೆ ದೇಶಗಳಲ್ಲೂ ನಡೆದಿವೆ’ ಎಂದು ಅಭಿಪ್ರಾಯಪಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT