ಹೈದರಾಬಾದ್ನ ಮೆಟ್ರೊಪಾಲಿಟನ್ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಎಸ್. ರಾಧಾಕೃಷ್ಣ ಮೂರ್ತಿ ಅವರನ್ನು ಮಾದಕ ದ್ರವ್ಯ ಪ್ರಕರಣದ ಆರೋಪಿಗೆ ಜಾಮೀನು ನೀಡಲು ₹7.5ಲಕ್ಷ ಲಂಚ ಪಡೆದ ಆರೋಪಕ್ಕಾಗಿ ಕಳೆದ ಮಂಗಳವಾರ ಅಮಾನತುಗೊಳಿಸಲಾಗಿತ್ತು. ಮಾರ್ಚ್ 18ರಂದು ಭ್ರಷ್ಟಾಚಾರ ನಿಗ್ರಹ ದಳ ದಾಳಿ ನಡೆಸಿದ ಬಳಿಕ ಸ್ಥಳೀಯ ಕಾರ್ಮಿಕ ನ್ಯಾಯಾಲಯದ ನ್ಯಾಯಾಧೀಶ ಎಂ. ಗಾಂಧಿ ಅವರನ್ನು ಅಮಾನತುಗೊಳಿಸಲಾಗಿತ್ತು. ಬಳಿಕ, ಏಪ್ರಿಲ್ 6ರಂದು, ಕಿರಿಯ ಸಿವಿಲ್ ನ್ಯಾಯಾಧೀಶ ಎಸ್. ಮಧು ಅವರನ್ನು, ವ್ಯಕ್ತಿಯೊಬ್ಬರ ಪರ ತೀರ್ಪು ನೀಡಲು ಲಂಚ ಪಡೆದ ಆರೋಪಕ್ಕಾಗಿ ಅಮಾನತುಗೊಳಿಸಲಾಗಿತ್ತು.