<p><strong>ವಿಶ್ವಸಂಸ್ಥೆ (ಪಿಟಿಐ): </strong>ಜಾಗತಿಕ ಅರ್ಥ ವ್ಯವಸ್ಥೆಯ ಚೇತರಿಕೆಯು ನಿಧಾನವಾಗಿ ನಡೆಯುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮ, ಆರ್ಥಿಕ ವೃದ್ಧಿ ದರ ಉತ್ತೇಜಿಸಲು ತಮ್ಮ ದೇಶವು ಪ್ರವರ್ಧಮಾನಕ್ಕೆ ಬರುತ್ತಿರುವ ದೇಶಗಳ ಜತೆ ಕೆಲಸ ಮಾಡಲು ಸಿದ್ಧವಿರುವುದಾಗಿ ಪ್ರಕಟಿಸಿದ್ದಾರೆ. <br /> <br /> `ನಮ್ಮೆಲ್ಲರ ಹಣೆಬರಹ ಪರಸ್ಪರ ಸಂಪರ್ಕ ಹೊಂದಿದೆ. ಜಾಗತಿಕ ಅರ್ಥ ವ್ಯವಸ್ಥೆಯಲ್ಲಿ ದೇಶಗಳು ಒಟ್ಟಿಗೆ ಬೆಳವಣಿಗೆ ಸಾಧಿಸಬಹುದು ಇಲ್ಲವೇ ಆರ್ಥಿಕ ಸಂಕಷ್ಟದ ಪ್ರಪಾತಕ್ಕೆ ಬೀಳಬಹುದು. ಮೂರು ವರ್ಷಗಳ ಹಿಂದಿನ ಹಣಕಾಸು ಬಿಕ್ಕಟ್ಟು ಈ ಮಾತನ್ನು ಸಾಬೀತುಪಡಿಸಿದೆ. ಈಗ ಮತ್ತೆ ವಿಶ್ವದ ಆರ್ಥಿಕತೆ ಚೇತರಿಕೆಯು ಕುಂಟುತ್ತ ಸಾಗಿದೆ. ಅನೇಕರು ನಿರುದ್ಯೋಗಿಗಳಾಗಿದ್ದಾರೆ. <br /> <br /> ಇನ್ನೂ ಅನೇಕರು ದಿನನಿತ್ಯದ ಅಗತ್ಯಗಳಿಗಾಗಿ ಹೋರಾಟ ನಡೆಸುತ್ತಿದ್ದಾರೆ. 2009ರಲ್ಲಿ ಆರ್ಥಿಕ ಹಿಂಜರಿಕೆ ಹಿಮ್ಮೆಟ್ಟಿಸಲು ನಾವೆಲ್ಲ ಜತೆಯಾಗಿ ಕಾರ್ಯನಿರ್ವಹಿಸಿದ್ದೇವು. ಈಗ ಮತ್ತೆ ಅಂತಹ ಬಿಕ್ಕಟ್ಟು ನಿರ್ಮಾಣವಾಗಿದೆ.<br /> <br /> ನಾವೆಲ್ಲ ತುರ್ತಾಗಿ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕಾಗಿದೆ. ಹೊಸ ಮಾರುಕಟ್ಟೆ ನಿರ್ಮಾಣಕ್ಕೆ ಇಂತಹ ಸಹಕಾರ ಅಗತ್ಯವಾಗಿದೆ~ ಎಂದು ಅಭಿಪ್ರಾಯಪಟ್ಟಿದ್ದಾರೆ. ವಿಶ್ವಸಂಸ್ಥೆಯ ಸಾಮಾನ್ಯ ಸಭೆ ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಶ್ವಸಂಸ್ಥೆ (ಪಿಟಿಐ): </strong>ಜಾಗತಿಕ ಅರ್ಥ ವ್ಯವಸ್ಥೆಯ ಚೇತರಿಕೆಯು ನಿಧಾನವಾಗಿ ನಡೆಯುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮ, ಆರ್ಥಿಕ ವೃದ್ಧಿ ದರ ಉತ್ತೇಜಿಸಲು ತಮ್ಮ ದೇಶವು ಪ್ರವರ್ಧಮಾನಕ್ಕೆ ಬರುತ್ತಿರುವ ದೇಶಗಳ ಜತೆ ಕೆಲಸ ಮಾಡಲು ಸಿದ್ಧವಿರುವುದಾಗಿ ಪ್ರಕಟಿಸಿದ್ದಾರೆ. <br /> <br /> `ನಮ್ಮೆಲ್ಲರ ಹಣೆಬರಹ ಪರಸ್ಪರ ಸಂಪರ್ಕ ಹೊಂದಿದೆ. ಜಾಗತಿಕ ಅರ್ಥ ವ್ಯವಸ್ಥೆಯಲ್ಲಿ ದೇಶಗಳು ಒಟ್ಟಿಗೆ ಬೆಳವಣಿಗೆ ಸಾಧಿಸಬಹುದು ಇಲ್ಲವೇ ಆರ್ಥಿಕ ಸಂಕಷ್ಟದ ಪ್ರಪಾತಕ್ಕೆ ಬೀಳಬಹುದು. ಮೂರು ವರ್ಷಗಳ ಹಿಂದಿನ ಹಣಕಾಸು ಬಿಕ್ಕಟ್ಟು ಈ ಮಾತನ್ನು ಸಾಬೀತುಪಡಿಸಿದೆ. ಈಗ ಮತ್ತೆ ವಿಶ್ವದ ಆರ್ಥಿಕತೆ ಚೇತರಿಕೆಯು ಕುಂಟುತ್ತ ಸಾಗಿದೆ. ಅನೇಕರು ನಿರುದ್ಯೋಗಿಗಳಾಗಿದ್ದಾರೆ. <br /> <br /> ಇನ್ನೂ ಅನೇಕರು ದಿನನಿತ್ಯದ ಅಗತ್ಯಗಳಿಗಾಗಿ ಹೋರಾಟ ನಡೆಸುತ್ತಿದ್ದಾರೆ. 2009ರಲ್ಲಿ ಆರ್ಥಿಕ ಹಿಂಜರಿಕೆ ಹಿಮ್ಮೆಟ್ಟಿಸಲು ನಾವೆಲ್ಲ ಜತೆಯಾಗಿ ಕಾರ್ಯನಿರ್ವಹಿಸಿದ್ದೇವು. ಈಗ ಮತ್ತೆ ಅಂತಹ ಬಿಕ್ಕಟ್ಟು ನಿರ್ಮಾಣವಾಗಿದೆ.<br /> <br /> ನಾವೆಲ್ಲ ತುರ್ತಾಗಿ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕಾಗಿದೆ. ಹೊಸ ಮಾರುಕಟ್ಟೆ ನಿರ್ಮಾಣಕ್ಕೆ ಇಂತಹ ಸಹಕಾರ ಅಗತ್ಯವಾಗಿದೆ~ ಎಂದು ಅಭಿಪ್ರಾಯಪಟ್ಟಿದ್ದಾರೆ. ವಿಶ್ವಸಂಸ್ಥೆಯ ಸಾಮಾನ್ಯ ಸಭೆ ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>