‘ಈ ವಾರ ಷೇರುಪೇಟೆಗೆ ಆರ್ಬಿಐ ಹಣಕಾಸು ನೀತಿ ಹೆಚ್ಚು ಮಹತ್ವದ್ದಾಗಿದೆ. ವಹಿವಾಟು ಯಥಾಸ್ಥಿತಿಯಲ್ಲಿಯೇ ಮುಂದುವರಿಯುವ ನಿರೀಕ್ಷೆ ಇದೆ. ಗುಜರಾತ್ ಮತ್ತು ಹಿಮಾಚಲ ಪ್ರದೇಶದ ಚುನಾವಣೆಯು ಹಣ ಹೂಡಿಕೆ ಚಟುವಟಿಕೆ ಮೇಲೆ ಪ್ರಭಾವ ಬೀರಲಿವೆ. ಅಲ್ಪಾವಧಿಗೆ ವಿತ್ತೀಯ ಕೊರತೆ ಹೆಚ್ಚಾಗಿರುವುದು ಮತ್ತು ಕಚ್ಚಾ ತೈಲ ಬೆಲೆ ಏರಿಕೆ ಷೇರುಪೇಟೆಯಲ್ಲಿ ಏರಿಳಿತ ಸೃಷ್ಟಿಸಲಿವೆ’ ಎಂದೂ ಹೇಳಿದ್ದಾರೆ.