ನಗರದಲ್ಲಿ ಶನಿವಾರ ವೀರಶೈವ ವಿದ್ಯಾವರ್ಧಕ ಸಂಘದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಗಣಿಗಾರಿಕೆ ನಿಂತ ಪರಿಣಾಮ ಲಕ್ಷಾಂತರ ಕಾರ್ಮಿಕರು ಕೆಲಸ ಕಳೆದುಕೊಂಡಿದ್ದಾರೆ. ಅವರೆಲ್ಲರ ಒಳಿತಿಗಾಗಿ ಇಬ್ಬರೂ ಸಚಿವರ ವಿಶೇಷ ಗಮನ ಸೆಳೆಯುತ್ತೇನೆ’ ಎಂದರು. ತುಂಗಭದ್ರಾ ಜಲಾಶಯದಲ್ಲಿನ ಹೂಳು ತೆರವು ಅಸಾಧ್ಯವಾಗಿರುವುದರಿಂದ ಮತ್ತೊಂದು ಜಲಾಶಯ ನಿರ್ಮಾಣ ಅನಿವಾರ್ಯ ಎಂದ ಅವರು, ಕೊಪ್ಪಳ ಜಿಲ್ಲೆಯ ನವಲಿ ಬಳಿ ಪರ್ಯಾಯ ಸಮಾನಾಂತರ ಜಲಾಶಯ ನಿರ್ಮಿಸುವ ಪ್ರಸ್ತಾವವನ್ನು ಗಂಭೀರವಾಗಿ ಪರಿಗಣಿಸುವಂತೆ ಕೇಂದ್ರದ ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಅವರ ಮೇಲೆ ಒತ್ತಡ ಹೇರುವುದಾಗಿಯೂ ತಿಳಿಸಿದರು.