<p>ನವದೆಹಲಿ (ಪಿಟಿಐ): ಬ್ರಾಂಡ್ ರಹಿತ ಚಿನ್ನಾಭರಣಗಳ ಮೇಲೆ ಅಬಕಾರಿ ಸುಂಕ ವಿಧಿಸುವ ಸರ್ಕಾರದ ನಿರ್ಧಾರಕ್ಕೆ ದೇಶದಾದ್ಯಂತ ಭಾರಿ ಪ್ರತಿಭಟನೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಸಮಸ್ಯೆ ಬಗೆಹರಿಸಲು ಹಣಕಾಸು ಸಚಿವ ಪ್ರಣವ್ ಮುಖರ್ಜಿ ಶುಕ್ರವಾರ ಚಿನ್ನಾಭರಣ ವರ್ತಕರ ಒಕ್ಕೂಟಗಳೊಂದಿಗೆ ಚರ್ಚಿಸಲಿದ್ದಾರೆ.<br /> <br /> `ಈ ವಿಚಾರವಾಗಿ ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ನಾವು ಎಲ್ಲಾ ಚಿನ್ನಾಭರಣ ವರ್ತಕರ ಒಕ್ಕೂಟಗಳಿಗೆ ಸ್ಪಷ್ಟ ಪಡಿಸಿದ್ದೇವೆ. ಹಣಕಾಸು ಸಚಿವರು ಶುಕ್ರವಾರ ವರ್ತಕರ ಸಭೆ ಕರೆದಿದ್ದಾರೆ~ ಎಂದು ಕೇಂದ್ರ ಅಬಕಾರಿ ಮತ್ತು ಸುಂಕ ಮಂಡಳಿ (ಸಿಬಿಇಸಿ) ಅಧ್ಯಕ್ಷ ಎಸ್.ಕೆ ಗೋಯಲ್ ಹೇಳಿದ್ದಾರೆ.<br /> <br /> 2012-13ರ ಬಜೆಟ್ನಲ್ಲಿ ಪ್ರಸ್ತಾಪಿಸಲಾಗಿರುವ ಬ್ರಾಂಡ್ ರಹಿತ ಆಭರಣಗಳ ಮೇಲೆ ಶೇ 1ರಷ್ಟು ಅಬಕಾರಿ ಸುಂಕ ವಿಧಿಸುವ ಪ್ರಸ್ತಾವನೆಯನ್ನು ಹಿಂದೆಪಡೆಯುವಂತೆ ವಿವಿಧ ವಲಯಗಳಿಂದ ಬಂದಿರುವ ಬೇಡಿಕೆಯನ್ನು ಕೇಂದ್ರ ಸರ್ಕಾರ ಪರಿಶೀಲಿಸುತ್ತಿರುವುದಾಗಿ ಪ್ರಣವ್ ಕಳೆದ ವಾರ ಹೇಳಿದ್ದರು.<br /> <br /> ತೀವ್ರ ವಿರೋಧದ ಹಿನ್ನೆಲೆಯಲ್ಲಿ ಅಬಕಾರಿ ಸುಂಕ ವಿಧಿಸುವ ನಿರ್ಧಾರವನ್ನು ಹಿಂದೆ ಪಡೆಯುವ ಸುಳಿವನ್ನು ಪ್ರಣವ್ ನೀಡಿದ್ದಾರೆ. <br /> <br /> ಆದರೆ, ಚಿನ್ನ ಮತ್ತು ಪ್ಲಾಟಿನಮ್ ಆಮದು ಸುಂಕ ಏರಿಕೆ ಮಾಡುವ ನಿರ್ಧಾರವನ್ನು ಹಿಂತೆಗೆದುಕೊಳ್ಳುವ ಪ್ರಶ್ನೆಯೇ ಇಲ್ಲ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ (ಪಿಟಿಐ): ಬ್ರಾಂಡ್ ರಹಿತ ಚಿನ್ನಾಭರಣಗಳ ಮೇಲೆ ಅಬಕಾರಿ ಸುಂಕ ವಿಧಿಸುವ ಸರ್ಕಾರದ ನಿರ್ಧಾರಕ್ಕೆ ದೇಶದಾದ್ಯಂತ ಭಾರಿ ಪ್ರತಿಭಟನೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಸಮಸ್ಯೆ ಬಗೆಹರಿಸಲು ಹಣಕಾಸು ಸಚಿವ ಪ್ರಣವ್ ಮುಖರ್ಜಿ ಶುಕ್ರವಾರ ಚಿನ್ನಾಭರಣ ವರ್ತಕರ ಒಕ್ಕೂಟಗಳೊಂದಿಗೆ ಚರ್ಚಿಸಲಿದ್ದಾರೆ.<br /> <br /> `ಈ ವಿಚಾರವಾಗಿ ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ನಾವು ಎಲ್ಲಾ ಚಿನ್ನಾಭರಣ ವರ್ತಕರ ಒಕ್ಕೂಟಗಳಿಗೆ ಸ್ಪಷ್ಟ ಪಡಿಸಿದ್ದೇವೆ. ಹಣಕಾಸು ಸಚಿವರು ಶುಕ್ರವಾರ ವರ್ತಕರ ಸಭೆ ಕರೆದಿದ್ದಾರೆ~ ಎಂದು ಕೇಂದ್ರ ಅಬಕಾರಿ ಮತ್ತು ಸುಂಕ ಮಂಡಳಿ (ಸಿಬಿಇಸಿ) ಅಧ್ಯಕ್ಷ ಎಸ್.ಕೆ ಗೋಯಲ್ ಹೇಳಿದ್ದಾರೆ.<br /> <br /> 2012-13ರ ಬಜೆಟ್ನಲ್ಲಿ ಪ್ರಸ್ತಾಪಿಸಲಾಗಿರುವ ಬ್ರಾಂಡ್ ರಹಿತ ಆಭರಣಗಳ ಮೇಲೆ ಶೇ 1ರಷ್ಟು ಅಬಕಾರಿ ಸುಂಕ ವಿಧಿಸುವ ಪ್ರಸ್ತಾವನೆಯನ್ನು ಹಿಂದೆಪಡೆಯುವಂತೆ ವಿವಿಧ ವಲಯಗಳಿಂದ ಬಂದಿರುವ ಬೇಡಿಕೆಯನ್ನು ಕೇಂದ್ರ ಸರ್ಕಾರ ಪರಿಶೀಲಿಸುತ್ತಿರುವುದಾಗಿ ಪ್ರಣವ್ ಕಳೆದ ವಾರ ಹೇಳಿದ್ದರು.<br /> <br /> ತೀವ್ರ ವಿರೋಧದ ಹಿನ್ನೆಲೆಯಲ್ಲಿ ಅಬಕಾರಿ ಸುಂಕ ವಿಧಿಸುವ ನಿರ್ಧಾರವನ್ನು ಹಿಂದೆ ಪಡೆಯುವ ಸುಳಿವನ್ನು ಪ್ರಣವ್ ನೀಡಿದ್ದಾರೆ. <br /> <br /> ಆದರೆ, ಚಿನ್ನ ಮತ್ತು ಪ್ಲಾಟಿನಮ್ ಆಮದು ಸುಂಕ ಏರಿಕೆ ಮಾಡುವ ನಿರ್ಧಾರವನ್ನು ಹಿಂತೆಗೆದುಕೊಳ್ಳುವ ಪ್ರಶ್ನೆಯೇ ಇಲ್ಲ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>