<p><strong>ನವದೆಹಲಿ (ಪಿಟಿಐ):</strong> ಬ್ರಾಂಡ್ ರಹಿತ ಚಿನ್ನಾಭರಣಗಳ ಮೇಲೆ ಅಬಕಾರಿ ಸುಂಕ ವಿಧಿಸುವ ನಿರ್ಧಾರ ಮರುಪರಿಶೀಲಿಸುವುದಾಗಿ ಹಣಕಾಸು ಸಚಿವ ಪ್ರಣವ್ ಮುಖರ್ಜಿ ಭರವಸೆ ನೀಡಿರುವ ಹಿನ್ನೆಲೆಯಲ್ಲಿ, ಕಳೆದ 21 ದಿನಗಳಿಂದ ದೇಶದಾದ್ಯಂತ ನಡೆಸುತ್ತಿರುವ ಪ್ರತಿಭಟನೆಯನ್ನು ಚಿನ್ನಾಭರಣ ವರ್ತಕರ ಸಂಘಟನೆಗಳು ಶುಕ್ರವಾರ ಕೈಬಿಟ್ಟಿವೆ.<br /> <br /> `ಮೇ 10ರವರೆಗೆ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಕೈ ಬಿಡಲು ನಾವು ನಿರ್ಧರಿಸಿದ್ದೇವೆ~ ಎಂದು ಅಖಿಲ ಭಾರತ ಸರಾಫ್ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಜೈನ್ ಹೇಳಿದ್ದಾರೆ.ಕರೋಲ್ ಭಾಗ್ ಚಿನ್ನಾಭರಣ ವರ್ತಕರ ಒಕ್ಕೂಟದ ಅಧ್ಯಕ್ಷ ವಿಜಯ್ ಖನ್ನಾ ಅವರು ಕೂಡ ಪ್ರತಿಭಟನೆಯನ್ನು ಹಿಂದೆ ಪಡೆದಿರುವುದಾಗಿ ತಿಳಿಸಿದ್ದಾರೆ.<br /> <br /> ಚಿನ್ನಾಭರಣ ವರ್ತಕರ ಪ್ರತಿನಿಧಿಗಳು ಶುಕ್ರವಾರ ನವದೆಹಲಿಯಲ್ಲಿ ಸಚಿವ ಪ್ರಣವ್ ಹಾಗೂ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಬ್ರಾಂಡ್ ರಹಿತ ಚಿನ್ನಾಭರಣಗಳ ಮೇಲೆ ವಿಧಿಸಿರುವ ಶೇ 1ರಷ್ಟು ಅಬಕಾರಿ ಸುಂಕ ಹಿಂಪಡೆಯುವಂತೆ ಆಗ್ರಹಿಸಿದರು.<br /> <br /> ಆದರೆ, ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳಬೇಕೆ ಬೇಡವೇ ಎಂಬ ಬಗ್ಗೆ ನಿರ್ಧಾರ ಕೈಗೊಳ್ಳಲು ನಾವು ಶನಿವಾರ ಅಥವಾ ಭಾನುವಾರ ಇತರ ಒಕ್ಕೂಟಗಳೊಂದಿಗೆ ಮಾತುಕತೆ ನಡೆಸಲಿದ್ದೇವೆ~ ಎಂದು ಮುಂಬೈ ಚಿನಿವಾರ ಪೇಟೆ ಒಕ್ಕೂಟದ ಅಧ್ಯಕ್ಷ ಪೃಥ್ವಿರಾಜ್ ಕೊಠಾರಿ ಹೇಳಿದ್ದಾರೆ.<br /> <br /> `ಪ್ರತಿಭಟನೆಯಿಂದಾಗಿ ಚಿನ್ನಾಭರಣ ಉದ್ಯಮಕ್ಕೆ ರೂ 20,000 ಕೋಟಿ ಮತ್ತು ದೇಶದ ಬೊಕ್ಕಸಕ್ಕೆ ಸುಮಾರು ರೂ1,200 ಕೋಟಿಗಳಷ್ಟು ನಷ್ಟವುಂಟಾಗಿದೆ ಎಂದು ಅಖಿಲ ಭಾರತ ಚಿನ್ನಾಭರಣ ವರ್ತಕರ ಒಕ್ಕೂಟದ ಅಧ್ಯಕ್ಷ ಬಛ್ರಾಜ್ ಬಾಮಲ್ವಾ ಸುದ್ದಿಗಾರರಿಗೆ ತಿಳಿಸಿದರು.<br /> <br /> `ಸಂಸತ್ತಿನಲ್ಲಿ 2012ರ ಆರ್ಥಿಕ ಮಸೂದೆ ಚರ್ಚೆಗೆ ಬರುವ ಸಂದರ್ಭದಲ್ಲಿ ಚಿನ್ನಾಭರಣ ವರ್ತಕರ ಆತಂಕಗಳನ್ನು ನಿವಾರಿಸುವ ಯತ್ನ ಮಾಡಲಾಗುವುದು ಎಂದು ಮುಖರ್ಜಿ ಅವರು ವರ್ತಕರಿಗೆ ಭರವಸೆ ನೀಡಿದ್ದಾರೆ~ ಎಂದು ಕೇಂದ್ರ ಅಬಕಾರಿ ಮತ್ತು ಸುಂಕ ಮಂಡಳಿಯ ಅಧ್ಯಕ್ಷ ಎಸ್.ಕೆ. ಗೋಯಲ್ ಹೇಳಿದ್ದಾರೆ.<br /> ದೇಶದಾದ್ಯಂತ ಚಿನ್ನಾಭರಣ ವರ್ತಕರು ಮಾರ್ಚ್ 17ರಿಂದ ಪ್ರತಿಭಟನೆ ನಡೆಸುತ್ತ್ದ್ದಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ಬ್ರಾಂಡ್ ರಹಿತ ಚಿನ್ನಾಭರಣಗಳ ಮೇಲೆ ಅಬಕಾರಿ ಸುಂಕ ವಿಧಿಸುವ ನಿರ್ಧಾರ ಮರುಪರಿಶೀಲಿಸುವುದಾಗಿ ಹಣಕಾಸು ಸಚಿವ ಪ್ರಣವ್ ಮುಖರ್ಜಿ ಭರವಸೆ ನೀಡಿರುವ ಹಿನ್ನೆಲೆಯಲ್ಲಿ, ಕಳೆದ 21 ದಿನಗಳಿಂದ ದೇಶದಾದ್ಯಂತ ನಡೆಸುತ್ತಿರುವ ಪ್ರತಿಭಟನೆಯನ್ನು ಚಿನ್ನಾಭರಣ ವರ್ತಕರ ಸಂಘಟನೆಗಳು ಶುಕ್ರವಾರ ಕೈಬಿಟ್ಟಿವೆ.<br /> <br /> `ಮೇ 10ರವರೆಗೆ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಕೈ ಬಿಡಲು ನಾವು ನಿರ್ಧರಿಸಿದ್ದೇವೆ~ ಎಂದು ಅಖಿಲ ಭಾರತ ಸರಾಫ್ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಜೈನ್ ಹೇಳಿದ್ದಾರೆ.ಕರೋಲ್ ಭಾಗ್ ಚಿನ್ನಾಭರಣ ವರ್ತಕರ ಒಕ್ಕೂಟದ ಅಧ್ಯಕ್ಷ ವಿಜಯ್ ಖನ್ನಾ ಅವರು ಕೂಡ ಪ್ರತಿಭಟನೆಯನ್ನು ಹಿಂದೆ ಪಡೆದಿರುವುದಾಗಿ ತಿಳಿಸಿದ್ದಾರೆ.<br /> <br /> ಚಿನ್ನಾಭರಣ ವರ್ತಕರ ಪ್ರತಿನಿಧಿಗಳು ಶುಕ್ರವಾರ ನವದೆಹಲಿಯಲ್ಲಿ ಸಚಿವ ಪ್ರಣವ್ ಹಾಗೂ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಬ್ರಾಂಡ್ ರಹಿತ ಚಿನ್ನಾಭರಣಗಳ ಮೇಲೆ ವಿಧಿಸಿರುವ ಶೇ 1ರಷ್ಟು ಅಬಕಾರಿ ಸುಂಕ ಹಿಂಪಡೆಯುವಂತೆ ಆಗ್ರಹಿಸಿದರು.<br /> <br /> ಆದರೆ, ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳಬೇಕೆ ಬೇಡವೇ ಎಂಬ ಬಗ್ಗೆ ನಿರ್ಧಾರ ಕೈಗೊಳ್ಳಲು ನಾವು ಶನಿವಾರ ಅಥವಾ ಭಾನುವಾರ ಇತರ ಒಕ್ಕೂಟಗಳೊಂದಿಗೆ ಮಾತುಕತೆ ನಡೆಸಲಿದ್ದೇವೆ~ ಎಂದು ಮುಂಬೈ ಚಿನಿವಾರ ಪೇಟೆ ಒಕ್ಕೂಟದ ಅಧ್ಯಕ್ಷ ಪೃಥ್ವಿರಾಜ್ ಕೊಠಾರಿ ಹೇಳಿದ್ದಾರೆ.<br /> <br /> `ಪ್ರತಿಭಟನೆಯಿಂದಾಗಿ ಚಿನ್ನಾಭರಣ ಉದ್ಯಮಕ್ಕೆ ರೂ 20,000 ಕೋಟಿ ಮತ್ತು ದೇಶದ ಬೊಕ್ಕಸಕ್ಕೆ ಸುಮಾರು ರೂ1,200 ಕೋಟಿಗಳಷ್ಟು ನಷ್ಟವುಂಟಾಗಿದೆ ಎಂದು ಅಖಿಲ ಭಾರತ ಚಿನ್ನಾಭರಣ ವರ್ತಕರ ಒಕ್ಕೂಟದ ಅಧ್ಯಕ್ಷ ಬಛ್ರಾಜ್ ಬಾಮಲ್ವಾ ಸುದ್ದಿಗಾರರಿಗೆ ತಿಳಿಸಿದರು.<br /> <br /> `ಸಂಸತ್ತಿನಲ್ಲಿ 2012ರ ಆರ್ಥಿಕ ಮಸೂದೆ ಚರ್ಚೆಗೆ ಬರುವ ಸಂದರ್ಭದಲ್ಲಿ ಚಿನ್ನಾಭರಣ ವರ್ತಕರ ಆತಂಕಗಳನ್ನು ನಿವಾರಿಸುವ ಯತ್ನ ಮಾಡಲಾಗುವುದು ಎಂದು ಮುಖರ್ಜಿ ಅವರು ವರ್ತಕರಿಗೆ ಭರವಸೆ ನೀಡಿದ್ದಾರೆ~ ಎಂದು ಕೇಂದ್ರ ಅಬಕಾರಿ ಮತ್ತು ಸುಂಕ ಮಂಡಳಿಯ ಅಧ್ಯಕ್ಷ ಎಸ್.ಕೆ. ಗೋಯಲ್ ಹೇಳಿದ್ದಾರೆ.<br /> ದೇಶದಾದ್ಯಂತ ಚಿನ್ನಾಭರಣ ವರ್ತಕರು ಮಾರ್ಚ್ 17ರಿಂದ ಪ್ರತಿಭಟನೆ ನಡೆಸುತ್ತ್ದ್ದಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>