<p><strong>ನವದೆಹಲಿ (ಐಎಎನ್ಎಸ್):</strong> `ಮುಂದಿನ ಲೋಕಸಭೆ ಚುನಾವಣೆ (2014)ವರೆಗೆ ಯಾವುದೇ ಮಹತ್ವದ ಆರ್ಥಿಕ ಸುಧಾರಣೆಗಳು ದೇಶದಲ್ಲಿ ನಡೆಯುವುದಿಲ್ಲ~ ಎಂಬ ಹಿರಿಯ ಆರ್ಥಿಕ ಸಲಹೆಗಾರ ಕೌಶಿಕ್ ಬಸು ಅವರ ಈ ಹೇಳಿಕೆಗೆ ಶುಕ್ರವಾರ ಪ್ರತಿಕ್ರಿಯಿಸಿರುವ, ಕೇಂದ್ರ ಯೋಜನಾ ಆಯೋಗದ ಉಪಾಧ್ಯಕ್ಷ ಮೊಂಟೆಕ್ ಸಿಂಗ್ ಅಹ್ಲುವಾಲಿಯ, ಸರ್ಕಾರವು ದೇಶದ ಆರ್ಥಿಕ ಪ್ರಗತಿ ಗತಿಯನ್ನು ಮರಳಿ ಹಿಂದಿನ ಗರಿಷ್ಠ ಮಟ್ಟಕ್ಕೆ ತರಲು ಶ್ರಮಿಸುತ್ತಿದೆ. ಸುಧಾರಣೆಯ ಮುಖ್ಯ ಉದ್ದೇಶವೇ `ಜಿಡಿಪಿ~ ಚೇತರಿಕೆ ಎಂದು ಸ್ಪಷ್ಟಪಡಿಸಿದಾರೆ. <br /> <br /> ಕಳೆದ ಪಂಚವಾರ್ಷಿಕ ಯೋಜನೆ ಅವಧಿಯಲ್ಲಿ ಹಲವು ಆರ್ಥಿಕ ಸುಧಾರಣೆ ಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಆದರೆ, ಅವೆಲ್ಲವನ್ನೂ ಪೂರ್ಣವಾಗಿ ಜಾರಿಗೊಳಿಸಲು ಸಾಧ್ಯವಾಗಿಲ್ಲ. ಇದರ ಅರ್ಥ ಒಟ್ಟಾರೆ ಆರ್ಥಿಕ ಸುಧಾರಣೆ ಮಂದಗತಿಯಲ್ಲಿ ನಡೆದಿದೆ ಎಂದಲ್ಲ. ಸರ್ಕಾರದ ಗಮನ ಏನಿದ್ದರೂ ಸುಸ್ಥಿರ ಆರ್ಥಿಕ ಪ್ರಗತಿಯತ್ತ. ಆ ಹಿನ್ನಲೆಯಲ್ಲಿ ಇನ್ನೂ ಹೆಚ್ಚಿನ ಸುಧಾರಣೆ ಅಗತ್ಯವಿದೆ ಎನ್ನುವ ಮಾತನ್ನು ಒಪ್ಪಿಕೊಳ್ಳುವೆ ಎಂದು ಮೊಂಟೆಕ್ ಹೇಳಿದ್ದಾರೆ. <br /> <br /> `ಮುಂಬರುವ ವರ್ಷಗಳಲ್ಲಿ ಹಲವು ಮಹತ್ವದ ಆರ್ಥಿಕ ಸುಧಾರಣೆಗಳನ್ನು ನೀವು ಕಾಣಬಹುದು. 2015ರ ವೇಳೆಗೆ ಭಾರತ ಪ್ರಪಂಚದಲ್ಲಿಯೇ ಅತಿ ವೇಗವಾಗಿ ಬೆಳೆಯುತ್ತಿರುವ ಆರ್ಥಿಕ ಶಕ್ತಿಗಳಲ್ಲೊಂದಾಗಿರಲಿದೆ. ಮೂಲಸೌಕರ್ಯ, ಇಂಧನ, ತೈಲ ಪೂರೈಕೆ ಸೇರಿದಂತೆ ಹಲವು ವಲಯಗಳಲ್ಲಿ ಬೃಹತ್ ಪ್ರಮಾಣದಲ್ಲಿ ಬಂಡವಾಳ ಹೂಡಿಕೆ ಆಗಲಿದೆ. ಈಗಾಗಲೇ `ಹೂಡಿಕೆದಾರ ಸ್ನೇಹಿ ವಾತಾವರಣ ನಿರ್ಮಿಸಿದ್ದೇವೆ. ಇವೆಲ್ಲ ಆರ್ಥಿಕ ಸುಧಾರಣೆಯ ಭಾಗ. ಈ ಮೂಲಕ ದೇಶ ಹಿಂದಿನ ಗರಿಷ್ಠ ಮಟ್ಟದ ಪ್ರಗತಿ ಪಥಕ್ಕೆ ಮರಳುತ್ತಿದೆ~ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಐಎಎನ್ಎಸ್):</strong> `ಮುಂದಿನ ಲೋಕಸಭೆ ಚುನಾವಣೆ (2014)ವರೆಗೆ ಯಾವುದೇ ಮಹತ್ವದ ಆರ್ಥಿಕ ಸುಧಾರಣೆಗಳು ದೇಶದಲ್ಲಿ ನಡೆಯುವುದಿಲ್ಲ~ ಎಂಬ ಹಿರಿಯ ಆರ್ಥಿಕ ಸಲಹೆಗಾರ ಕೌಶಿಕ್ ಬಸು ಅವರ ಈ ಹೇಳಿಕೆಗೆ ಶುಕ್ರವಾರ ಪ್ರತಿಕ್ರಿಯಿಸಿರುವ, ಕೇಂದ್ರ ಯೋಜನಾ ಆಯೋಗದ ಉಪಾಧ್ಯಕ್ಷ ಮೊಂಟೆಕ್ ಸಿಂಗ್ ಅಹ್ಲುವಾಲಿಯ, ಸರ್ಕಾರವು ದೇಶದ ಆರ್ಥಿಕ ಪ್ರಗತಿ ಗತಿಯನ್ನು ಮರಳಿ ಹಿಂದಿನ ಗರಿಷ್ಠ ಮಟ್ಟಕ್ಕೆ ತರಲು ಶ್ರಮಿಸುತ್ತಿದೆ. ಸುಧಾರಣೆಯ ಮುಖ್ಯ ಉದ್ದೇಶವೇ `ಜಿಡಿಪಿ~ ಚೇತರಿಕೆ ಎಂದು ಸ್ಪಷ್ಟಪಡಿಸಿದಾರೆ. <br /> <br /> ಕಳೆದ ಪಂಚವಾರ್ಷಿಕ ಯೋಜನೆ ಅವಧಿಯಲ್ಲಿ ಹಲವು ಆರ್ಥಿಕ ಸುಧಾರಣೆ ಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಆದರೆ, ಅವೆಲ್ಲವನ್ನೂ ಪೂರ್ಣವಾಗಿ ಜಾರಿಗೊಳಿಸಲು ಸಾಧ್ಯವಾಗಿಲ್ಲ. ಇದರ ಅರ್ಥ ಒಟ್ಟಾರೆ ಆರ್ಥಿಕ ಸುಧಾರಣೆ ಮಂದಗತಿಯಲ್ಲಿ ನಡೆದಿದೆ ಎಂದಲ್ಲ. ಸರ್ಕಾರದ ಗಮನ ಏನಿದ್ದರೂ ಸುಸ್ಥಿರ ಆರ್ಥಿಕ ಪ್ರಗತಿಯತ್ತ. ಆ ಹಿನ್ನಲೆಯಲ್ಲಿ ಇನ್ನೂ ಹೆಚ್ಚಿನ ಸುಧಾರಣೆ ಅಗತ್ಯವಿದೆ ಎನ್ನುವ ಮಾತನ್ನು ಒಪ್ಪಿಕೊಳ್ಳುವೆ ಎಂದು ಮೊಂಟೆಕ್ ಹೇಳಿದ್ದಾರೆ. <br /> <br /> `ಮುಂಬರುವ ವರ್ಷಗಳಲ್ಲಿ ಹಲವು ಮಹತ್ವದ ಆರ್ಥಿಕ ಸುಧಾರಣೆಗಳನ್ನು ನೀವು ಕಾಣಬಹುದು. 2015ರ ವೇಳೆಗೆ ಭಾರತ ಪ್ರಪಂಚದಲ್ಲಿಯೇ ಅತಿ ವೇಗವಾಗಿ ಬೆಳೆಯುತ್ತಿರುವ ಆರ್ಥಿಕ ಶಕ್ತಿಗಳಲ್ಲೊಂದಾಗಿರಲಿದೆ. ಮೂಲಸೌಕರ್ಯ, ಇಂಧನ, ತೈಲ ಪೂರೈಕೆ ಸೇರಿದಂತೆ ಹಲವು ವಲಯಗಳಲ್ಲಿ ಬೃಹತ್ ಪ್ರಮಾಣದಲ್ಲಿ ಬಂಡವಾಳ ಹೂಡಿಕೆ ಆಗಲಿದೆ. ಈಗಾಗಲೇ `ಹೂಡಿಕೆದಾರ ಸ್ನೇಹಿ ವಾತಾವರಣ ನಿರ್ಮಿಸಿದ್ದೇವೆ. ಇವೆಲ್ಲ ಆರ್ಥಿಕ ಸುಧಾರಣೆಯ ಭಾಗ. ಈ ಮೂಲಕ ದೇಶ ಹಿಂದಿನ ಗರಿಷ್ಠ ಮಟ್ಟದ ಪ್ರಗತಿ ಪಥಕ್ಕೆ ಮರಳುತ್ತಿದೆ~ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>