<p><strong>ವಾಷಿಂಗ್ಟನ್ (ಪಿಟಿಐ): </strong>ಡಾಲರ್ ಎದುರು ರೂಪಾಯಿ ಮೌಲ್ಯ ತೀವ್ರವಾಗಿ ಕುಸಿಯುತ್ತಿರುವ ಹಿನ್ನೆಲೆಯಲ್ಲಿ, ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಜತೆ ಶೀಘ್ರದಲ್ಲೇ ಚರ್ಚೆ ನಡೆಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವ ಪ್ರಣವ್ ಮುಖರ್ಜಿ ಹೇಳಿದ್ದಾರೆ. <br /> <br /> ಕಳೆದ ಒಂದು ವಾರದಲ್ಲಿ ಡಾಲರ್ ಎದುರು ರೂಪಾಯಿ ಮೌಲ್ಯ 231 ಪೈಸೆಗಳಷ್ಟು (ಶೇ 4.89) ಕುಸಿತ ಕಂಡಿದೆ. ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಮತ್ತು ತೈಲ ಕಂಪೆನಿಗಳಿಂದ ಡಾಲರ್ ಬೇಡಿಕೆ ಹೆಚ್ಚಾಗಿರುವುದು ದೇಶಿ ಮಾರುಕಟ್ಟೆಯಲ್ಲಿ ಏರಿಳಿತ ಸೃಷ್ಟಿಸಿದೆ. ಈ ಸಂಗತಿಗಳ ಹಿನ್ನೆಲೆಯಲ್ಲಿ ಶೀಘ್ರದಲ್ಲಿಯೇ `ಆರ್ಬಿಐ~ ಗವರ್ನರ್ ಡಿ. ಸುಬ್ಬರಾವ್ ಜತೆ ಚರ್ಚೆ ನಡೆಸುವುದಾಗಿ ಪ್ರಣವ್ ಹೇಳಿದ್ದಾರೆ. <br /> <br /> ರೂಪಾಯಿ ಮೌಲ್ಯ ಕಳೆದ 28 ತಿಂಗಳ ಹಿಂದಿನ ಮಟ್ಟಕ್ಕೆ ದುರ್ಬಲಗೊಂಡಿದ್ದರೂ, ಈ ಹಂತದಲ್ಲಿ ಮಧ್ಯಪ್ರವೇಶಿಸಬೇಕಾದ ತುರ್ತು ಉದ್ಭವಿಸಿಲ್ಲ ಎಂದು `ಆರ್ಬಿಐ~ ಡೆಪ್ಯುಟಿ ಗವರ್ನರ್ ಸುಬೀರ್ ಗೋಕರ್ಣ ಶುಕ್ರವಾರ ಹೇಳಿಕೆ ನೀಡಿದ್ದರು. <br /> <br /> ಆದರೆ, ಆರ್ಬಿಐ ಈಗ ಮಧ್ಯಪ್ರವೇಶಿಸಬೇಕಾದ ತುರ್ತು ಉದ್ಭವಿಸಿದೆ. ವಿದೇಶಿ ಕರೆನ್ಸಿಗಳನ್ನು ಖರೀದಿಸುವ ಅಥವಾ ಮಾರಾಟ ಮಾಡುವ ಮೂಲಕ `ಆರ್ಬಿಐ~ ವಿದೇಶಿ ವಿನಿಮಯ ದರ ನಿಯಂತ್ರಿಸಬಹುದು ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಸುಬ್ಬರಾವ್ ಮತ್ತು ಪ್ರಣವ್ ಇಬ್ಬರೂ ಇಲ್ಲಿ ನಡೆಯುತ್ತಿರುವ ಅಂತರರಾಷ್ಟೀಯ ಹಣಕಾಸು ನಿಧಿ (ಐಎಂಎಫ್) ಮತ್ತು ವಿಶ್ವಬ್ಯಾಂಕ್ ಸಭೆಗಳಿಗೆ ಭಾಗವಹಿಸಲು ಆಗಮಿಸಿದ್ದಾರೆ. <br /> <br /> ಡಾಲರ್ ಎದುರು ರೂಪಾಯಿ ಅಪಮೌಲ್ಯವನ್ನು ಸರ್ಕಾರ ಸೂಕ್ಷ್ಮವಾಗಿ ಗಮನಿಸುತ್ತಿದೆ. ಸಂಭವನೀಯ `ಕರೆನ್ಸಿ ಸಮರ~ವನ್ನು ತಡೆಯಲು ಅಂತರರಾಷ್ಟ್ರೀಯ ಸಮುದಾಯ ಕೈಜೋಡಿಸಬೇಕು ಎಂದು ಪ್ರಣವ್ ಹೇಳಿದ್ದಾರೆ. <br /> <br /> <strong>ಧೃಡ ಕ್ರಮ ಅಗತ್ಯ:</strong> ಜಾಗತಿಕ ಆರ್ಥಿಕತೆಯು ಎರಡನೆಯ ಸುತ್ತಿನ ಹಿಂಜರಿತಕ್ಕೆ ಜಾರುತ್ತಿರುವುದರ ಕುರಿತು ಪ್ರತಿಕ್ರಿಯಿಸಿರುವ ಪ್ರಣವ್ಮುಖರ್ಜಿ, ಇದನ್ನು ತಡೆಗಟ್ಟಲು ಯಾವುದೇ ಸಿದ್ಧ ಸೂತ್ರಗಳಿಲ್ಲ. ಆದರೆ, ಪ್ರತಿ ದಿನ ಧೃಡ ಕ್ರಮಗಳ ಮೂಲಕ ಸಂಭಾವ್ಯ ಆರ್ಥಿಕ ಹಿಂಜರಿತವನ್ನು ತಡೆಗಟ್ಟಬಹುದು ಎಂದು ಹೇಳಿದ್ದಾರೆ. <br /> <br /> ಎರಡನೆಯ ಸುತ್ತಿನ ಆರ್ಥಿಕ ಹಿಂಜರಿತವನ್ನು ತಡೆಯಲು ಹಣಕಾಸು ಸಂಸ್ಥೆಗಳು ಮತ್ತು ಅಂತರರಾಷ್ಟ್ರೀಯ ಸಮುದಾಯ ಏನು ಮಾಡಲು ಸಾಧ್ಯ ಎನ್ನುವುದರ ಕುರಿತು ಶನಿವಾರ ಇಲ್ಲಿ ಪತ್ರಕರ್ತರು ಕೇಳಿದ ಪ್ರಶ್ನೆಗೆ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾಷಿಂಗ್ಟನ್ (ಪಿಟಿಐ): </strong>ಡಾಲರ್ ಎದುರು ರೂಪಾಯಿ ಮೌಲ್ಯ ತೀವ್ರವಾಗಿ ಕುಸಿಯುತ್ತಿರುವ ಹಿನ್ನೆಲೆಯಲ್ಲಿ, ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಜತೆ ಶೀಘ್ರದಲ್ಲೇ ಚರ್ಚೆ ನಡೆಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವ ಪ್ರಣವ್ ಮುಖರ್ಜಿ ಹೇಳಿದ್ದಾರೆ. <br /> <br /> ಕಳೆದ ಒಂದು ವಾರದಲ್ಲಿ ಡಾಲರ್ ಎದುರು ರೂಪಾಯಿ ಮೌಲ್ಯ 231 ಪೈಸೆಗಳಷ್ಟು (ಶೇ 4.89) ಕುಸಿತ ಕಂಡಿದೆ. ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಮತ್ತು ತೈಲ ಕಂಪೆನಿಗಳಿಂದ ಡಾಲರ್ ಬೇಡಿಕೆ ಹೆಚ್ಚಾಗಿರುವುದು ದೇಶಿ ಮಾರುಕಟ್ಟೆಯಲ್ಲಿ ಏರಿಳಿತ ಸೃಷ್ಟಿಸಿದೆ. ಈ ಸಂಗತಿಗಳ ಹಿನ್ನೆಲೆಯಲ್ಲಿ ಶೀಘ್ರದಲ್ಲಿಯೇ `ಆರ್ಬಿಐ~ ಗವರ್ನರ್ ಡಿ. ಸುಬ್ಬರಾವ್ ಜತೆ ಚರ್ಚೆ ನಡೆಸುವುದಾಗಿ ಪ್ರಣವ್ ಹೇಳಿದ್ದಾರೆ. <br /> <br /> ರೂಪಾಯಿ ಮೌಲ್ಯ ಕಳೆದ 28 ತಿಂಗಳ ಹಿಂದಿನ ಮಟ್ಟಕ್ಕೆ ದುರ್ಬಲಗೊಂಡಿದ್ದರೂ, ಈ ಹಂತದಲ್ಲಿ ಮಧ್ಯಪ್ರವೇಶಿಸಬೇಕಾದ ತುರ್ತು ಉದ್ಭವಿಸಿಲ್ಲ ಎಂದು `ಆರ್ಬಿಐ~ ಡೆಪ್ಯುಟಿ ಗವರ್ನರ್ ಸುಬೀರ್ ಗೋಕರ್ಣ ಶುಕ್ರವಾರ ಹೇಳಿಕೆ ನೀಡಿದ್ದರು. <br /> <br /> ಆದರೆ, ಆರ್ಬಿಐ ಈಗ ಮಧ್ಯಪ್ರವೇಶಿಸಬೇಕಾದ ತುರ್ತು ಉದ್ಭವಿಸಿದೆ. ವಿದೇಶಿ ಕರೆನ್ಸಿಗಳನ್ನು ಖರೀದಿಸುವ ಅಥವಾ ಮಾರಾಟ ಮಾಡುವ ಮೂಲಕ `ಆರ್ಬಿಐ~ ವಿದೇಶಿ ವಿನಿಮಯ ದರ ನಿಯಂತ್ರಿಸಬಹುದು ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಸುಬ್ಬರಾವ್ ಮತ್ತು ಪ್ರಣವ್ ಇಬ್ಬರೂ ಇಲ್ಲಿ ನಡೆಯುತ್ತಿರುವ ಅಂತರರಾಷ್ಟೀಯ ಹಣಕಾಸು ನಿಧಿ (ಐಎಂಎಫ್) ಮತ್ತು ವಿಶ್ವಬ್ಯಾಂಕ್ ಸಭೆಗಳಿಗೆ ಭಾಗವಹಿಸಲು ಆಗಮಿಸಿದ್ದಾರೆ. <br /> <br /> ಡಾಲರ್ ಎದುರು ರೂಪಾಯಿ ಅಪಮೌಲ್ಯವನ್ನು ಸರ್ಕಾರ ಸೂಕ್ಷ್ಮವಾಗಿ ಗಮನಿಸುತ್ತಿದೆ. ಸಂಭವನೀಯ `ಕರೆನ್ಸಿ ಸಮರ~ವನ್ನು ತಡೆಯಲು ಅಂತರರಾಷ್ಟ್ರೀಯ ಸಮುದಾಯ ಕೈಜೋಡಿಸಬೇಕು ಎಂದು ಪ್ರಣವ್ ಹೇಳಿದ್ದಾರೆ. <br /> <br /> <strong>ಧೃಡ ಕ್ರಮ ಅಗತ್ಯ:</strong> ಜಾಗತಿಕ ಆರ್ಥಿಕತೆಯು ಎರಡನೆಯ ಸುತ್ತಿನ ಹಿಂಜರಿತಕ್ಕೆ ಜಾರುತ್ತಿರುವುದರ ಕುರಿತು ಪ್ರತಿಕ್ರಿಯಿಸಿರುವ ಪ್ರಣವ್ಮುಖರ್ಜಿ, ಇದನ್ನು ತಡೆಗಟ್ಟಲು ಯಾವುದೇ ಸಿದ್ಧ ಸೂತ್ರಗಳಿಲ್ಲ. ಆದರೆ, ಪ್ರತಿ ದಿನ ಧೃಡ ಕ್ರಮಗಳ ಮೂಲಕ ಸಂಭಾವ್ಯ ಆರ್ಥಿಕ ಹಿಂಜರಿತವನ್ನು ತಡೆಗಟ್ಟಬಹುದು ಎಂದು ಹೇಳಿದ್ದಾರೆ. <br /> <br /> ಎರಡನೆಯ ಸುತ್ತಿನ ಆರ್ಥಿಕ ಹಿಂಜರಿತವನ್ನು ತಡೆಯಲು ಹಣಕಾಸು ಸಂಸ್ಥೆಗಳು ಮತ್ತು ಅಂತರರಾಷ್ಟ್ರೀಯ ಸಮುದಾಯ ಏನು ಮಾಡಲು ಸಾಧ್ಯ ಎನ್ನುವುದರ ಕುರಿತು ಶನಿವಾರ ಇಲ್ಲಿ ಪತ್ರಕರ್ತರು ಕೇಳಿದ ಪ್ರಶ್ನೆಗೆ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>