ನವದೆಹಲಿ: ‘ಬ್ಯಾಂಕ್ ಮಂಡಳಿ (ಬಿಬಿಬಿ) ರದ್ದು ಮಾಡುವ ಯಾವುದೇ ಪ್ರಸ್ತಾಪ ಇಲ್ಲ’ ಎಂದು ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಶಿವ ಪ್ರತಾಪ ಶುಕ್ಲಾ ತಿಳಿಸಿದ್ದಾರೆ.
ಸರ್ಕಾರಿ ಸ್ವಾಮ್ಯದ ಬ್ಯಾಂಕ್ಗಳಲ್ಲಿ ಮಾನವ ಸಂಪನ್ಮೂಲದ ಗುಣಮಟ್ಟವನ್ನು ನಿರೀಕ್ಷಿತ ಮಟ್ಟದಲ್ಲಿ ಸುಧಾರಿಸಲು ಬ್ಯಾಂಕ್ ಮಂಡಳಿಯಿಂದ ಸಾಧ್ಯವಾಗಿಲ್ಲ. ಹೀಗಾಗಿ ಮಂಡಳಿಯನ್ನು ರದ್ದು ಮಾಡುವ ಪ್ರಸ್ತಾವ ಇದೆಯೇ ಎನ್ನುವ ಪ್ರಶ್ನೆಗೆ ಅವರು ರಾಜ್ಯಸಭೆಯಲ್ಲಿ ಈ ಪ್ರತಿಕ್ರಿಯೆ ನೀಡಿದ್ದಾರೆ.
ಬ್ಯಾಂಕ್ಗಳ ಮೇಲ್ವಿಚಾರಣೆ ಮತ್ತು ಆಡಳಿತ ಸುಧಾರಣೆ ಉದ್ದೇಶದಿಂದ 2016ರಲ್ಲಿ ಮಾಜಿ ಸಿಎಜಿ ವಿನೋದ್ ರಾಯ್ ಅಧ್ಯಕ್ಷತೆಯಲ್ಲಿ ಮಂಡಳಿ ರಚನೆ ಮಾಡಲಾಗಿದೆ.