<p><strong>ಬೆಂಗಳೂರು:</strong> ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್, ದೀಪಾವಳಿ ಖರೀದಿ ಸಂಭ್ರಮಾಚರಣೆ ಅಂಗವಾಗಿ ಏರ್ಪಡಿಸಿದ್ದ ಬಹುಮಾನ ಗೆಲ್ಲುವ ಸ್ಪರ್ಧೆಯಲ್ಲಿ ಮಂಗಳೂರಿನ ಗ್ರಾಹಕಿ ಜಾಕುಲಿನ್ ಕ್ಯಾರೊಲಿನ್ ಅವರು 5 ಕೆ.ಜಿ ಚಿನ್ನ ಗೆದ್ದ ಅದೃಷ್ಟಶಾಲಿಯಾಗಿದ್ದಾರೆ.</p>.<p>ಇಲ್ಲಿ ನಡೆದ ಸಮಾರಂಭದಲ್ಲಿ ಸಂಸ್ಥೆಯ ಪ್ರಚಾರ ರಾಯಭಾರಿಯೂ ಆಗಿರುವ ನಟಿ ತಮನ್ನಾ ಭಾಟಿಯಾ ಅವರು 5 ಕೆ. ಜಿ. ಚಿನ್ನವನ್ನು ಜಾಕುಲಿನ್ ಕ್ಯಾರೊಲಿನ್ ಅವರಿಗೆ ಹಸ್ತಾಂತರಿಸಿದರು.</p>.<p>ದೇಶದಾದ್ಯಂತ ಇರುವ ಸಂಸ್ಥೆಯ ಮಳಿಗೆಗಳಲ್ಲಿ ಚಿನ್ನ ಮತ್ತು ವಜ್ರಾಭರಣಗಳನ್ನು ಖರೀದಿಸಿದ ಗ್ರಾಹಕರು ಬಹುಮಾನ ಗೆಲ್ಲುವ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಿಕೊಡಲಾಗಿತ್ತು. ಕ್ಯಾರೊಲಿನ್ ಅವರು ಮಂಗಳೂರು ಮಳಿಗೆಯಲ್ಲಿ ಚಿನ್ನಾಭರಣ ಖರೀದಿಸಿದ್ದರು.</p>.<p>‘ಚಿನ್ನಾಭರಣ ಖರೀದಿ ಉತ್ತೇಜಿಸುವ ವಿಸ್ತರಿಸಿದ ಯೋಜನೆಯಡಿ ವಾರಕ್ಕೊಮ್ಮೆ ಏರ್ಪಡಿಸಿದ್ದ ಲಕ್ಕಿ ಡ್ರಾ ವಿಜೇತರಿಗೆ ಸಂಸ್ಥೆಯು ಒಟ್ಟು 111 ಕೆಜಿ ಚಿನ್ನ ವಿತರಿಸಿತ್ತು. ವಹಿವಾಟಿನಲ್ಲಿ ಗ್ರಾಹಕರ ವಿಶ್ವಾಸಕ್ಕೆ ಆದ್ಯತೆ ನೀಡುತ್ತ ಬರಲಾಗಿದೆ’ ಎಂದು ಸಂಸ್ಥೆಯ ಅಧ್ಯಕ್ಷ ಎಂ. ಪಿ. ಅಹಮ್ಮದ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್, ದೀಪಾವಳಿ ಖರೀದಿ ಸಂಭ್ರಮಾಚರಣೆ ಅಂಗವಾಗಿ ಏರ್ಪಡಿಸಿದ್ದ ಬಹುಮಾನ ಗೆಲ್ಲುವ ಸ್ಪರ್ಧೆಯಲ್ಲಿ ಮಂಗಳೂರಿನ ಗ್ರಾಹಕಿ ಜಾಕುಲಿನ್ ಕ್ಯಾರೊಲಿನ್ ಅವರು 5 ಕೆ.ಜಿ ಚಿನ್ನ ಗೆದ್ದ ಅದೃಷ್ಟಶಾಲಿಯಾಗಿದ್ದಾರೆ.</p>.<p>ಇಲ್ಲಿ ನಡೆದ ಸಮಾರಂಭದಲ್ಲಿ ಸಂಸ್ಥೆಯ ಪ್ರಚಾರ ರಾಯಭಾರಿಯೂ ಆಗಿರುವ ನಟಿ ತಮನ್ನಾ ಭಾಟಿಯಾ ಅವರು 5 ಕೆ. ಜಿ. ಚಿನ್ನವನ್ನು ಜಾಕುಲಿನ್ ಕ್ಯಾರೊಲಿನ್ ಅವರಿಗೆ ಹಸ್ತಾಂತರಿಸಿದರು.</p>.<p>ದೇಶದಾದ್ಯಂತ ಇರುವ ಸಂಸ್ಥೆಯ ಮಳಿಗೆಗಳಲ್ಲಿ ಚಿನ್ನ ಮತ್ತು ವಜ್ರಾಭರಣಗಳನ್ನು ಖರೀದಿಸಿದ ಗ್ರಾಹಕರು ಬಹುಮಾನ ಗೆಲ್ಲುವ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಿಕೊಡಲಾಗಿತ್ತು. ಕ್ಯಾರೊಲಿನ್ ಅವರು ಮಂಗಳೂರು ಮಳಿಗೆಯಲ್ಲಿ ಚಿನ್ನಾಭರಣ ಖರೀದಿಸಿದ್ದರು.</p>.<p>‘ಚಿನ್ನಾಭರಣ ಖರೀದಿ ಉತ್ತೇಜಿಸುವ ವಿಸ್ತರಿಸಿದ ಯೋಜನೆಯಡಿ ವಾರಕ್ಕೊಮ್ಮೆ ಏರ್ಪಡಿಸಿದ್ದ ಲಕ್ಕಿ ಡ್ರಾ ವಿಜೇತರಿಗೆ ಸಂಸ್ಥೆಯು ಒಟ್ಟು 111 ಕೆಜಿ ಚಿನ್ನ ವಿತರಿಸಿತ್ತು. ವಹಿವಾಟಿನಲ್ಲಿ ಗ್ರಾಹಕರ ವಿಶ್ವಾಸಕ್ಕೆ ಆದ್ಯತೆ ನೀಡುತ್ತ ಬರಲಾಗಿದೆ’ ಎಂದು ಸಂಸ್ಥೆಯ ಅಧ್ಯಕ್ಷ ಎಂ. ಪಿ. ಅಹಮ್ಮದ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>