<p><strong>ನವದೆಹಲಿ (ಪಿಟಿಐ):</strong> ಷೇರುಪೇಟೆಗಳಲ್ಲಿ ತೀವ್ರ ಏರಿಳಿತ ಮುಂದುವರೆದಿದ್ದರೂ, ಪ್ರಸಕ್ತ ಹಣಕಾಸು ವರ್ಷದಲ್ಲಿ ಅಂದಾಜಿಸಲಾಗಿರುವ ರೂ 40 ಸಾವಿರ ಕೋಟಿಗಳ ಷೇರು ವಿಕ್ರಯದ ಗುರಿ ತಲುಪುವ ನಿರೀಕ್ಷೆ ಇದೆ ಎಂದು ಹಣಕಾಸು ಸಚಿವಾಲಯ ಹೇಳಿದೆ. <br /> <br /> `ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಅಸ್ಥಿರತೆ ಇದ್ದರೂ ಷೇರುವಿಕ್ರಯದ ಮೂಲಕ ನಿಗದಿಪಡಿಸಿರುವ ಗುರಿ ತಲುಪುವ ಭರವಸೆ ಇದೆ~ ಎಂದು ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಆರ್.ಗೋಪಾಲನ್ ಇಲ್ಲಿ ನಡೆದ ಭಾರತೀಯ ಕೈಗಾರಿಕಾ ಒಕ್ಕೂಟದ ಸಭೆಯಲ್ಲಿ ಹೇಳಿದರು. <br /> <br /> ಪ್ರಸಕ್ತ ಹಣಕಾಸು ವರ್ಷದಲ್ಲಿ ಇಲ್ಲಿಯವರೆಗೆ ಪವರ್ ಫೈನಾನ್ಸ್ ಕಾರ್ಪೊರೇಷನ್ (ಪಿಎಫ್ಸಿ) ಷೇರುವಿಕ್ರಯದ ಮೂಲಕ ಸರ್ಕಾರ ಕೇವಲ ್ಙ1,100 ಕೋಟಿ ಮಾತ್ರ ಸಂಗ್ರಹಿಸಿದೆ. `ಅಮೆರಿಕ, ಯೂರೋಪ್ ಒಕ್ಕೂಟದ ಆರ್ಥಿಕ ಬಿಕ್ಕಟ್ಟು, ಹಣದುಬ್ಬರ ಒತ್ತಡ ಸೇರಿದಂತೆ ಹಲವು ಸಂಗತಿಗಳಿಂದ ಷೇರು ಪೇಟೆ ಕಳೆದ ಐದಾರು ತಿಂಗಳಿಂದ ತೀವ್ರ ಏರಿಳಿತದಲ್ಲಿದೆ. ಕೈಗಾರಿಕೆ ಉತ್ಪಾದನೆ ಸೂಚ್ಯಂಕವೂ 21 ತಿಂಗಳ ಹಿಂದಿನ ಮಟ್ಟಕ್ಕೆ ಕುಸಿದಿದೆ. <br /> <br /> ಸರ್ಕಾರ ಈಗಾಗಲೇ `ಒಎನ್ಜಿಸಿ. ಎಸ್ಎಐಎಲ್, `ಎನ್ಬಿಸಿಸಿ~ ಮತ್ತು `ಎಚ್ಸಿಎಲ್~ ಷೇರು ವಿಕ್ರಯಕ್ಕೆ ಅನುಮೋದನೆ ನೀಡಿದೆ. ಕಳೆದ ವರ್ಷ ಷೇರು ವಿಕ್ರಯದ ಮೂಲಕ ಕೇವಲ ್ಙ22,763ಕೋಟಿ ಮಾತ್ರ ಸಂಗ್ರಹವಾಗಿತ್ತು.</p>.<p><strong>ಕೆನರಾ ಬ್ಯಾಂಕ್: 17 ಹೊಸ ಶಾಖೆ ಉದ್ಘಾಟನೆ</strong></p>.<p><strong>ಪ್ರಜಾವಾಣಿ ವಾರ್ತೆ<br /> ಬೆಂಗಳೂರು: </strong>ರಾಷ್ಟ್ರೀಕೃತ ಕೆನರಾ ಬ್ಯಾಂಕ್, ಮಂಗಳವಾರ ಮಹಾರಾಷ್ಟ್ರದಲ್ಲಿ 17 ಹೊಸ ಬ್ಯಾಂಕ್ ಶಾಖೆಗಳನ್ನು ಆರಂಭಿಸಿದೆ.<br /> <br /> ಸತಾರಾ ಜಿಲ್ಲೆಯಲ್ಲಿನ ವರ್ನೆ ಗ್ರಾಮದಲ್ಲಿನ ಶಾಖೆಯನ್ನು ಮುಖ್ಯಮಂತ್ರಿ ಪೃಥ್ವಿರಾಜ್ ಚವಾಣ್ ಉದ್ಘಾಟಿಸಿದರು. ಬ್ಯಾಂಕ್ನ ಅಧ್ಯಕ್ಷ ಎಸ್. ರಾಮನ್ ಮತ್ತು ಕಾರ್ಯನಿರ್ವಾಹಕ ನಿರ್ದೇಶಕಿ ಅರ್ಚನಾ ಎಸ್. ಭಾರ್ಗವ ಉಪಸ್ಥಿತರಿದ್ದರು. ಆರ್ಥಿಕ ಸೇರ್ಪಡೆಗೆ ಸಂಬಂಧಿಸಿದಂತೆ ಹಲವು ಕಾರ್ಯಕ್ರಮಗಳಿಗೂ ಚಾಲನೆ ನೀಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ಷೇರುಪೇಟೆಗಳಲ್ಲಿ ತೀವ್ರ ಏರಿಳಿತ ಮುಂದುವರೆದಿದ್ದರೂ, ಪ್ರಸಕ್ತ ಹಣಕಾಸು ವರ್ಷದಲ್ಲಿ ಅಂದಾಜಿಸಲಾಗಿರುವ ರೂ 40 ಸಾವಿರ ಕೋಟಿಗಳ ಷೇರು ವಿಕ್ರಯದ ಗುರಿ ತಲುಪುವ ನಿರೀಕ್ಷೆ ಇದೆ ಎಂದು ಹಣಕಾಸು ಸಚಿವಾಲಯ ಹೇಳಿದೆ. <br /> <br /> `ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಅಸ್ಥಿರತೆ ಇದ್ದರೂ ಷೇರುವಿಕ್ರಯದ ಮೂಲಕ ನಿಗದಿಪಡಿಸಿರುವ ಗುರಿ ತಲುಪುವ ಭರವಸೆ ಇದೆ~ ಎಂದು ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಆರ್.ಗೋಪಾಲನ್ ಇಲ್ಲಿ ನಡೆದ ಭಾರತೀಯ ಕೈಗಾರಿಕಾ ಒಕ್ಕೂಟದ ಸಭೆಯಲ್ಲಿ ಹೇಳಿದರು. <br /> <br /> ಪ್ರಸಕ್ತ ಹಣಕಾಸು ವರ್ಷದಲ್ಲಿ ಇಲ್ಲಿಯವರೆಗೆ ಪವರ್ ಫೈನಾನ್ಸ್ ಕಾರ್ಪೊರೇಷನ್ (ಪಿಎಫ್ಸಿ) ಷೇರುವಿಕ್ರಯದ ಮೂಲಕ ಸರ್ಕಾರ ಕೇವಲ ್ಙ1,100 ಕೋಟಿ ಮಾತ್ರ ಸಂಗ್ರಹಿಸಿದೆ. `ಅಮೆರಿಕ, ಯೂರೋಪ್ ಒಕ್ಕೂಟದ ಆರ್ಥಿಕ ಬಿಕ್ಕಟ್ಟು, ಹಣದುಬ್ಬರ ಒತ್ತಡ ಸೇರಿದಂತೆ ಹಲವು ಸಂಗತಿಗಳಿಂದ ಷೇರು ಪೇಟೆ ಕಳೆದ ಐದಾರು ತಿಂಗಳಿಂದ ತೀವ್ರ ಏರಿಳಿತದಲ್ಲಿದೆ. ಕೈಗಾರಿಕೆ ಉತ್ಪಾದನೆ ಸೂಚ್ಯಂಕವೂ 21 ತಿಂಗಳ ಹಿಂದಿನ ಮಟ್ಟಕ್ಕೆ ಕುಸಿದಿದೆ. <br /> <br /> ಸರ್ಕಾರ ಈಗಾಗಲೇ `ಒಎನ್ಜಿಸಿ. ಎಸ್ಎಐಎಲ್, `ಎನ್ಬಿಸಿಸಿ~ ಮತ್ತು `ಎಚ್ಸಿಎಲ್~ ಷೇರು ವಿಕ್ರಯಕ್ಕೆ ಅನುಮೋದನೆ ನೀಡಿದೆ. ಕಳೆದ ವರ್ಷ ಷೇರು ವಿಕ್ರಯದ ಮೂಲಕ ಕೇವಲ ್ಙ22,763ಕೋಟಿ ಮಾತ್ರ ಸಂಗ್ರಹವಾಗಿತ್ತು.</p>.<p><strong>ಕೆನರಾ ಬ್ಯಾಂಕ್: 17 ಹೊಸ ಶಾಖೆ ಉದ್ಘಾಟನೆ</strong></p>.<p><strong>ಪ್ರಜಾವಾಣಿ ವಾರ್ತೆ<br /> ಬೆಂಗಳೂರು: </strong>ರಾಷ್ಟ್ರೀಕೃತ ಕೆನರಾ ಬ್ಯಾಂಕ್, ಮಂಗಳವಾರ ಮಹಾರಾಷ್ಟ್ರದಲ್ಲಿ 17 ಹೊಸ ಬ್ಯಾಂಕ್ ಶಾಖೆಗಳನ್ನು ಆರಂಭಿಸಿದೆ.<br /> <br /> ಸತಾರಾ ಜಿಲ್ಲೆಯಲ್ಲಿನ ವರ್ನೆ ಗ್ರಾಮದಲ್ಲಿನ ಶಾಖೆಯನ್ನು ಮುಖ್ಯಮಂತ್ರಿ ಪೃಥ್ವಿರಾಜ್ ಚವಾಣ್ ಉದ್ಘಾಟಿಸಿದರು. ಬ್ಯಾಂಕ್ನ ಅಧ್ಯಕ್ಷ ಎಸ್. ರಾಮನ್ ಮತ್ತು ಕಾರ್ಯನಿರ್ವಾಹಕ ನಿರ್ದೇಶಕಿ ಅರ್ಚನಾ ಎಸ್. ಭಾರ್ಗವ ಉಪಸ್ಥಿತರಿದ್ದರು. ಆರ್ಥಿಕ ಸೇರ್ಪಡೆಗೆ ಸಂಬಂಧಿಸಿದಂತೆ ಹಲವು ಕಾರ್ಯಕ್ರಮಗಳಿಗೂ ಚಾಲನೆ ನೀಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>