<p><strong>ಬೆಂಗಳೂರು:</strong> ಮುಕ್ತ ವ್ಯಾಪಾರ ಒಪ್ಪಂದಕ್ಕೆ (ಎಫ್ಟಿಎ) ಭಾರತ ಮತ್ತು ಐರೋಪ್ಯ ಒಕ್ಕೂಟಗಳು ಫೆಬ್ರುವರಿ ಎರಡನೆಯ ವಾರದಲ್ಲಿ ನಡೆಯಲಿರುವ ಶೃಂಗಸಭೆಗೂ ಮುನ್ನವೇ ಸಹಿ ಮಾಡುವ ಸಾಧ್ಯತೆ ಇಲ್ಲ ಎಂದು ಐರೋಪ್ಯ ಒಕ್ಕೂಟದ ವಿದೇಶಾಂಗ ವ್ಯವಹಾರಗಳ ಮುಖ್ಯ ಅಧಿಕಾರಿ ಬ್ಯಾರೊನೆಸ್ ಕ್ಯಾಥರಿನ್ ಆಷ್ಟನ್ ಹೇಳಿದರು.<br /> <br /> ಭಾರತ ಮತ್ತು ಐರೋಪ್ಯ ಒಕ್ಕೂಟದ ನಡುವಿನ 12ನೆಯ ಶೃಂಗಸಭೆಗೆ ಪೂರ್ವಭಾವಿಯಾಗಿ ಸೋಮವಾರ ಇಲ್ಲಿ ಆಯೋಜಿಸಲಾಗಿದ್ದ ಸಚಿವರ ಮಟ್ಟದ ಸಿದ್ಧತಾ ಸಭೆಯಲ್ಲಿ ಪಾಲ್ಗೊಂಡ ನಂತರ ವಿದೇಶಾಂಗ ಸಚಿವ ಎಸ್.ಎಂ. ಕೃಷ್ಣ ಅವರೊಂದಿಗೆ ಆಷ್ಟನ್ ಅವರು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.`ಭಾರತ ಮತ್ತು ಐರೋಪ್ಯ ಒಕ್ಕೂಟ ಸಹಿ ಮಾಡಲಿರುವ `ಎಫ್ಟಿಎ~ ಒಪ್ಪಂದಕ್ಕೆ ಬಹಳಷ್ಟು ಮಹತ್ವ ಇದೆ. ಆದರೆ, ಇದಕ್ಕೆ ರಾಜಕೀಯ ವಲಯದಿಂದ ಒಪ್ಪಿಗೆ ದೊರೆಯಲು ಸ್ವಲ್ಪ ಸಮಯ ಬೇಕು. ಈ ಒಪ್ಪಂದ ಅನುಷ್ಠಾನಗೊಂಡ ನಂತರ ಭಾರತ ಮತ್ತು ಐರೋಪ್ಯ ರಾಷ್ಟ್ರಗಳ ಕಂಪೆನಿಗಳಿಗೆ ಹೆಚ್ಚಿನ ಅನುಕೂಲ ಆಗಲಿದೆ~ ಎಂದು ಅವರು ಹೇಳಿದರು.<br /> <br /> ಎರಡೂ ಕಡೆಯ ಅಧಿಕಾರಿಗಳು ಈ ಒಪ್ಪಂದದ ಕುರಿತು ಕೆಲವು ಸಭೆಗಳನ್ನು ನಡೆಸಿದ್ದಾರೆ. ಒಪ್ಪಂದದ ತಾಂತ್ರಿಕ ಸಮಸ್ಯೆಗಳು ಪರಿಹಾರವಾದ ತಕ್ಷಣ, ಐರೋಪ್ಯ ರಾಷ್ಟ್ರಗಳ ರಾಜಕೀಯ ವಲಯ ಈ ಕುರಿತು ಗಮನ ಹರಿಸಲಿದೆ ಎಂದು ಹೇಳಿದರು. ಭಾರತ ಮತ್ತು ಐರೋಪ್ಯ ರಾಷ್ಟ್ರಗಳ ನಡುವೆ `ಎಫ್ಟಿಎ~ ಅನುಷ್ಠಾನಕ್ಕೆ ತರುವ ಕುರಿತು 2007ರಿಂದ ಇಲ್ಲಿಯವರೆಗೆ ಸುಮಾರು 13 ಬಾರಿ ಮಾತುಕತೆಗಳು ನಡೆದಿವೆ.<br /> <br /> <strong>ಕಡಲ್ಗಳ್ಳರ ಹಾವಳಿ: </strong>ಜಾಗತಿಕ ಸಮಸ್ಯೆಯಾಗಿ ಕಾಡುತ್ತಿರುವ ಕಡಲ್ಗಳ್ಳರ ಹಾವಳಿ ನಿಯಂತ್ರಿಸುವಲ್ಲಿ ಐರೋಪ್ಯ ರಾಷ್ಟ್ರಗಳು ಭಾರತಕ್ಕೆ ಸಂಪೂರ್ಣ ಸಹಕಾರ ನೀಡಲಿವೆ ಎಂದೂ ಆಷ್ಟನ್ ಭರವಸೆ ನೀಡಿದರು.`ಸೊಮಾಲಿಯಾದಲ್ಲಿ ಕಡಲ್ಗಳ್ಳರು ಭಾರತೀಯರನ್ನು ಒತ್ತೆಯಿರಿಸಿಕೊಂಡಿದ್ದ ಘಟನೆಯ ಅರಿವು ನಮಗಿದೆ. ಕಡಲ್ಗಳ್ಳತನ ಮತ್ತು ಭಾರತದ ಪ್ರಜೆಗಳನ್ನು ಒತ್ತೆಇರಿಸಿಕೊಳ್ಳುವ ಘಟನೆಗಳು ಪುನರಾವರ್ತನೆಯಾಗದಂತೆ ನೋಡಿಕೊಳ್ಳುವುದು ನಮ್ಮ ಉದ್ದೇಶ~ ಎಂದರು.<br /> <br /> <strong> ಹೆಚ್ಚಿನ ಬಾಂಧವ್ಯ </strong>: ವ್ಯಾಪಾರ, ಶಿಕ್ಷಣ, ಮಾಹಿತಿ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಭಾರತದ ಜೊತೆ ಹೆಚ್ಚಿನ ಬಾಂಧವ್ಯ ಹೊಂದುವ ಕುರಿತೂ ಐರೋಪ್ಯ ರಾಷ್ಟ್ರಗಳು ಆಸಕ್ತಿ ತೋರಿಸಿವೆ. ಸಾಂಸ್ಕೃತಿಕ ವಿನಿಮಯ ಮತ್ತು ಇಂಧನ ಹಂಚಿಕೆ ಕುರಿತು ಶೃಂಗಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದು ಕೃಷ್ಣ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮುಕ್ತ ವ್ಯಾಪಾರ ಒಪ್ಪಂದಕ್ಕೆ (ಎಫ್ಟಿಎ) ಭಾರತ ಮತ್ತು ಐರೋಪ್ಯ ಒಕ್ಕೂಟಗಳು ಫೆಬ್ರುವರಿ ಎರಡನೆಯ ವಾರದಲ್ಲಿ ನಡೆಯಲಿರುವ ಶೃಂಗಸಭೆಗೂ ಮುನ್ನವೇ ಸಹಿ ಮಾಡುವ ಸಾಧ್ಯತೆ ಇಲ್ಲ ಎಂದು ಐರೋಪ್ಯ ಒಕ್ಕೂಟದ ವಿದೇಶಾಂಗ ವ್ಯವಹಾರಗಳ ಮುಖ್ಯ ಅಧಿಕಾರಿ ಬ್ಯಾರೊನೆಸ್ ಕ್ಯಾಥರಿನ್ ಆಷ್ಟನ್ ಹೇಳಿದರು.<br /> <br /> ಭಾರತ ಮತ್ತು ಐರೋಪ್ಯ ಒಕ್ಕೂಟದ ನಡುವಿನ 12ನೆಯ ಶೃಂಗಸಭೆಗೆ ಪೂರ್ವಭಾವಿಯಾಗಿ ಸೋಮವಾರ ಇಲ್ಲಿ ಆಯೋಜಿಸಲಾಗಿದ್ದ ಸಚಿವರ ಮಟ್ಟದ ಸಿದ್ಧತಾ ಸಭೆಯಲ್ಲಿ ಪಾಲ್ಗೊಂಡ ನಂತರ ವಿದೇಶಾಂಗ ಸಚಿವ ಎಸ್.ಎಂ. ಕೃಷ್ಣ ಅವರೊಂದಿಗೆ ಆಷ್ಟನ್ ಅವರು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.`ಭಾರತ ಮತ್ತು ಐರೋಪ್ಯ ಒಕ್ಕೂಟ ಸಹಿ ಮಾಡಲಿರುವ `ಎಫ್ಟಿಎ~ ಒಪ್ಪಂದಕ್ಕೆ ಬಹಳಷ್ಟು ಮಹತ್ವ ಇದೆ. ಆದರೆ, ಇದಕ್ಕೆ ರಾಜಕೀಯ ವಲಯದಿಂದ ಒಪ್ಪಿಗೆ ದೊರೆಯಲು ಸ್ವಲ್ಪ ಸಮಯ ಬೇಕು. ಈ ಒಪ್ಪಂದ ಅನುಷ್ಠಾನಗೊಂಡ ನಂತರ ಭಾರತ ಮತ್ತು ಐರೋಪ್ಯ ರಾಷ್ಟ್ರಗಳ ಕಂಪೆನಿಗಳಿಗೆ ಹೆಚ್ಚಿನ ಅನುಕೂಲ ಆಗಲಿದೆ~ ಎಂದು ಅವರು ಹೇಳಿದರು.<br /> <br /> ಎರಡೂ ಕಡೆಯ ಅಧಿಕಾರಿಗಳು ಈ ಒಪ್ಪಂದದ ಕುರಿತು ಕೆಲವು ಸಭೆಗಳನ್ನು ನಡೆಸಿದ್ದಾರೆ. ಒಪ್ಪಂದದ ತಾಂತ್ರಿಕ ಸಮಸ್ಯೆಗಳು ಪರಿಹಾರವಾದ ತಕ್ಷಣ, ಐರೋಪ್ಯ ರಾಷ್ಟ್ರಗಳ ರಾಜಕೀಯ ವಲಯ ಈ ಕುರಿತು ಗಮನ ಹರಿಸಲಿದೆ ಎಂದು ಹೇಳಿದರು. ಭಾರತ ಮತ್ತು ಐರೋಪ್ಯ ರಾಷ್ಟ್ರಗಳ ನಡುವೆ `ಎಫ್ಟಿಎ~ ಅನುಷ್ಠಾನಕ್ಕೆ ತರುವ ಕುರಿತು 2007ರಿಂದ ಇಲ್ಲಿಯವರೆಗೆ ಸುಮಾರು 13 ಬಾರಿ ಮಾತುಕತೆಗಳು ನಡೆದಿವೆ.<br /> <br /> <strong>ಕಡಲ್ಗಳ್ಳರ ಹಾವಳಿ: </strong>ಜಾಗತಿಕ ಸಮಸ್ಯೆಯಾಗಿ ಕಾಡುತ್ತಿರುವ ಕಡಲ್ಗಳ್ಳರ ಹಾವಳಿ ನಿಯಂತ್ರಿಸುವಲ್ಲಿ ಐರೋಪ್ಯ ರಾಷ್ಟ್ರಗಳು ಭಾರತಕ್ಕೆ ಸಂಪೂರ್ಣ ಸಹಕಾರ ನೀಡಲಿವೆ ಎಂದೂ ಆಷ್ಟನ್ ಭರವಸೆ ನೀಡಿದರು.`ಸೊಮಾಲಿಯಾದಲ್ಲಿ ಕಡಲ್ಗಳ್ಳರು ಭಾರತೀಯರನ್ನು ಒತ್ತೆಯಿರಿಸಿಕೊಂಡಿದ್ದ ಘಟನೆಯ ಅರಿವು ನಮಗಿದೆ. ಕಡಲ್ಗಳ್ಳತನ ಮತ್ತು ಭಾರತದ ಪ್ರಜೆಗಳನ್ನು ಒತ್ತೆಇರಿಸಿಕೊಳ್ಳುವ ಘಟನೆಗಳು ಪುನರಾವರ್ತನೆಯಾಗದಂತೆ ನೋಡಿಕೊಳ್ಳುವುದು ನಮ್ಮ ಉದ್ದೇಶ~ ಎಂದರು.<br /> <br /> <strong> ಹೆಚ್ಚಿನ ಬಾಂಧವ್ಯ </strong>: ವ್ಯಾಪಾರ, ಶಿಕ್ಷಣ, ಮಾಹಿತಿ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಭಾರತದ ಜೊತೆ ಹೆಚ್ಚಿನ ಬಾಂಧವ್ಯ ಹೊಂದುವ ಕುರಿತೂ ಐರೋಪ್ಯ ರಾಷ್ಟ್ರಗಳು ಆಸಕ್ತಿ ತೋರಿಸಿವೆ. ಸಾಂಸ್ಕೃತಿಕ ವಿನಿಮಯ ಮತ್ತು ಇಂಧನ ಹಂಚಿಕೆ ಕುರಿತು ಶೃಂಗಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದು ಕೃಷ್ಣ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>