<p><strong> ಬೆಂಗಳೂರು</strong>: ರಾಜ್ಯ ಸರ್ಕಾರವು ಶೀಘ್ರದಲ್ಲಿಯೇ ಹೊಸ ಗ್ರಾಮೀಣ ಹೊರಗುತ್ತಿಗೆ ನೀತಿ (ಬಿಪಿಒ) ಅನಾವರಣ ಮಾಡಲಿದೆ.<br /> <br /> ಈ ತಿಂಗಳ 18ರಿಂದ ನಗರದಲ್ಲಿ ನಡೆಯಲಿರುವ 14ನೇ ಐ.ಟಿ ಮೇಳದ ಸಂದರ್ಭದಲ್ಲಿ ಈ ನೀತಿ ಪ್ರಕಟಗೊಳ್ಳಲಿದೆ ಎಂದು ಮಾಹಿತಿ ತಂತ್ರಜ್ಞಾನ ಪ್ರಧಾನ ಕಾರ್ಯದರ್ಶಿ ಎಂ. ಎನ್. ವಿದ್ಯಾಶಂಕರ್ ಹೇಳಿದ್ದಾರೆ.<br /> ಐ.ಟಿ ಮೇಳ ಕುರಿತು ಮಾಹಿತಿ ನೀಡಲು ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ಈ ವಿಷಯ ತಿಳಿಸಿದರು. <br /> <br /> ರಾಜ್ಯದಲ್ಲಿನ ದೊಡ್ಡ ಹೊರಗುತ್ತಿಗೆ ಸಂಸ್ಥೆಗಳ ಜತೆ ಕೆಲಸ ಮಾಡಲು ಗ್ರಾಮೀಣ ಉದ್ಯಮಿಗಳನ್ನು ಉತ್ತೇಜಿಸುವುದರ ಮೂಲಕ ಹೊರಗುತ್ತಿಗೆ ಉದ್ದಿಮೆ - ವಹಿವಾಟನ್ನು ಇನ್ನಷ್ಟು ವಿಸ್ತರಿಸಲು ಈ ಹೊಸ ಹೊರಗುತ್ತಿಗೆ ಯೋಜನೆ ನೆರವಾಗುವ ನಿರೀಕ್ಷೆ ಇದೆ ಎಂದರು.<br /> <br /> ಈಗಾಗಲೇ ರಾಜ್ಯ ಸರ್ಕಾರವು ಕನಿಷ್ಠ 100 ಮಂದಿ ಉದ್ಯೋಗಿಗಳನ್ನು ಹೊಂದಿರುವ ಪ್ರತಿಯೊಂದು ಗ್ರಾಮೀಣ ಹೊರಗುತ್ತಿಗೆ ಉದ್ಯಮಗಳಿಗೆ ರೂ 40 ಲಕ್ಷದಂತೆ ಸಬ್ಸಿಡಿ ನೀಡುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಈ ಉದ್ಯಮ ಉತ್ತೇಜಿಸಲು ಮತ್ತು ಉದ್ಯೋಗ ಅವಕಾಶ ಹೆಚ್ಚಿಸಲು ನೀಡಲಾಗುವ ಈ ಸಬ್ಸಿಡಿ ಪಡೆಯಲು ಈಗ ಉದ್ಯೋಗಿಗಳ ಸಂಖ್ಯೆಯ ಮಿತಿಯನ್ನು 50ಕ್ಕೆ ಇಳಿಸಲಾಗಿದೆ. <br /> <br /> ಸದ್ಯಕ್ಕೆ ರಾಜ್ಯದಲ್ಲಿ ರಾಜ್ಯ ಸರ್ಕಾರಿ ಪ್ರಾಯೋಜಕತ್ವದ 31 ಹೊರಗುತ್ತಿಗೆ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದ್ದು, 3,100 ಜನರು ಉದ್ಯೋಗ ಅವಕಾಶ ಪಡೆದುಕೊಂಡಿದ್ದಾರೆ ಎಂದು ವಿದ್ಯಾಶಂಕರ್ ತಿಳಿಸಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong> ಬೆಂಗಳೂರು</strong>: ರಾಜ್ಯ ಸರ್ಕಾರವು ಶೀಘ್ರದಲ್ಲಿಯೇ ಹೊಸ ಗ್ರಾಮೀಣ ಹೊರಗುತ್ತಿಗೆ ನೀತಿ (ಬಿಪಿಒ) ಅನಾವರಣ ಮಾಡಲಿದೆ.<br /> <br /> ಈ ತಿಂಗಳ 18ರಿಂದ ನಗರದಲ್ಲಿ ನಡೆಯಲಿರುವ 14ನೇ ಐ.ಟಿ ಮೇಳದ ಸಂದರ್ಭದಲ್ಲಿ ಈ ನೀತಿ ಪ್ರಕಟಗೊಳ್ಳಲಿದೆ ಎಂದು ಮಾಹಿತಿ ತಂತ್ರಜ್ಞಾನ ಪ್ರಧಾನ ಕಾರ್ಯದರ್ಶಿ ಎಂ. ಎನ್. ವಿದ್ಯಾಶಂಕರ್ ಹೇಳಿದ್ದಾರೆ.<br /> ಐ.ಟಿ ಮೇಳ ಕುರಿತು ಮಾಹಿತಿ ನೀಡಲು ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ಈ ವಿಷಯ ತಿಳಿಸಿದರು. <br /> <br /> ರಾಜ್ಯದಲ್ಲಿನ ದೊಡ್ಡ ಹೊರಗುತ್ತಿಗೆ ಸಂಸ್ಥೆಗಳ ಜತೆ ಕೆಲಸ ಮಾಡಲು ಗ್ರಾಮೀಣ ಉದ್ಯಮಿಗಳನ್ನು ಉತ್ತೇಜಿಸುವುದರ ಮೂಲಕ ಹೊರಗುತ್ತಿಗೆ ಉದ್ದಿಮೆ - ವಹಿವಾಟನ್ನು ಇನ್ನಷ್ಟು ವಿಸ್ತರಿಸಲು ಈ ಹೊಸ ಹೊರಗುತ್ತಿಗೆ ಯೋಜನೆ ನೆರವಾಗುವ ನಿರೀಕ್ಷೆ ಇದೆ ಎಂದರು.<br /> <br /> ಈಗಾಗಲೇ ರಾಜ್ಯ ಸರ್ಕಾರವು ಕನಿಷ್ಠ 100 ಮಂದಿ ಉದ್ಯೋಗಿಗಳನ್ನು ಹೊಂದಿರುವ ಪ್ರತಿಯೊಂದು ಗ್ರಾಮೀಣ ಹೊರಗುತ್ತಿಗೆ ಉದ್ಯಮಗಳಿಗೆ ರೂ 40 ಲಕ್ಷದಂತೆ ಸಬ್ಸಿಡಿ ನೀಡುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಈ ಉದ್ಯಮ ಉತ್ತೇಜಿಸಲು ಮತ್ತು ಉದ್ಯೋಗ ಅವಕಾಶ ಹೆಚ್ಚಿಸಲು ನೀಡಲಾಗುವ ಈ ಸಬ್ಸಿಡಿ ಪಡೆಯಲು ಈಗ ಉದ್ಯೋಗಿಗಳ ಸಂಖ್ಯೆಯ ಮಿತಿಯನ್ನು 50ಕ್ಕೆ ಇಳಿಸಲಾಗಿದೆ. <br /> <br /> ಸದ್ಯಕ್ಕೆ ರಾಜ್ಯದಲ್ಲಿ ರಾಜ್ಯ ಸರ್ಕಾರಿ ಪ್ರಾಯೋಜಕತ್ವದ 31 ಹೊರಗುತ್ತಿಗೆ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದ್ದು, 3,100 ಜನರು ಉದ್ಯೋಗ ಅವಕಾಶ ಪಡೆದುಕೊಂಡಿದ್ದಾರೆ ಎಂದು ವಿದ್ಯಾಶಂಕರ್ ತಿಳಿಸಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>