ಚಿಕ್ಕೋಡಿ: ಇಲ್ಲಿಯ ದೂಧಗಂಗಾ ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆಯ ನಿರ್ದೇಶಕ ಅಮಿತ್ ಪ್ರಭಾಕರ ಕೋರೆ ಅವರು ರಾಷ್ಟ್ರೀಯ ಸಕ್ಕರೆ ಕಾರ್ಖಾನೆಗಳ ಮಹಾಮಂಡಳದ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ರಾಷ್ಟ್ರೀಯ ಸಹಕಾರಿ ಸಕ್ಕರೆ ಕಾರ್ಖಾನೆಗಳ ಮಹಾಮಂಡಳದ ಆಡಳಿತ ಮಂಡಳಿಗೆ ನವದೆಹಲಿಯಲ್ಲಿ ನಡೆದ ಚುನಾವಣೆಯಲ್ಲಿ ಈ ಆಯ್ಕೆ ನಡೆದಿದೆ.