ಗ್ರಾಮೀಣ ಪ್ರದೇಶಗಳಲ್ಲಿ ನಿಸ್ತಂತು ಸೇವೆ ಒದಗಿಸುವ ಬ್ರಾಡ್ ಬ್ಯಾಂಡ್ ಯೋಜನೆಗೆ ಸಂಬಂಧಿಸಿದಂತೆ ಇಸ್ರೊ ಹಾಗೂ ದೇವಾಸ್ ಕಂಪೆನಿ ನಡುವೆ ₹ 580 ಕೋಟಿ ಮೊತ್ತದ ಒಪ್ಪಂದ ನಡೆದಿತ್ತು. ಈ ಒಪ್ಪಂದದಲ್ಲಿ ಅಕ್ರಮ ನಡೆದಿದೆ ಎಂಬ ಅರೋಪಗಳಿಗೆ ಸಂಬಂಧಿಸಿದಂತೆ ಸಿಬಿಐ, ಅಂದಿನ ಇಸ್ರೊ ಅಧ್ಯಕ್ಷ ಮಾಧವನ್ ನಾಯರ್ ವಿರುದ್ಧ ಪ್ರಕರಣ ದಾಖಲಿಸಿತ್ತು. ಕೇಂದ್ರ ಸರ್ಕಾರದ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ.ನಟರಾಜ್ ವಾದ ಮಂಡಿಸಿದ್ದರು.