ಪಟ್ಟಣದ ರಾಜನಶಿರಿಯೂರು ವೃತ್ತದಿಂದ ಬೆಳಿಗ್ಗೆ 8ಕ್ಕೆ ಅಲಂಕೃತ ಕುದುರೆ ಸಾರೋಟಿನಲ್ಲಿ ಸಮ್ಮೇಳನ ಅಧ್ಯಕ್ಷ ಟಿ.ಎಚ್.ಅಪ್ಪಾಜಿಗೌಡ ಹಾಗೂ ಅವರ ಪತ್ನಿಯನ್ನು ಮೆರವಣಿಗೆಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನಿರ್ಮಿಸಿರುವ ಮಹಾಕವಿ ಜನ್ನ ವೇದಿಕೆಗೆ ಕರೆತರಲಾಗುವುದು. ಮೆರವಣಿಗೆಯಲ್ಲಿ 20ಕ್ಕೂ ಹೆಚ್ಚು ಕಲಾತಂಡಗಳು ಭಾಗವಹಿಸಲಿವೆ. ಮಂಗಳವಾದ್ಯಗಳೊಂದಿಗೆ, ಡೊಳ್ಳಿನ ವಾದ್ಯಗಳು ಮೆರವಣಿಗೆಗೆ ಕಳೆ ನೀಡಲಿವೆ.