₹60 ಲಕ್ಷ ಮೌಲ್ಯದ ರಕ್ತಚಂದನ ವಶ

ಚಿಕ್ಕಬಳ್ಳಾಪುರ: ನೆರೆಯ ಆಂಧ್ರಪ್ರದೇಶ ದಿಂದ ರಾಜ್ಯಕ್ಕೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಸುಮಾರು ₹60 ಲಕ್ಷ ಮೌಲ್ಯದ 13 ಟನ್ ರಕ್ತ ಚಂದನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಶನಿವಾರ ಮಧ್ಯಾಹ್ನ ರಕ್ತ ಚಂದನ ಸಾಗಿಸುತ್ತಿದ್ದ ಲಾರಿಯನ್ನು ಬೆನ್ನತ್ತಿದ್ದ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಎಸ್.ಬಿ.ಎಸ್ ಸೆಲ್ನ ಡಿವೈಎಸ್ಪಿ ವಿ.ವಿ. ಗಿರೀಶ್ ನೇತೃತ್ವದ ತಂಡದೊಂದಿಗೆ ಚಿಕ್ಕಬಳ್ಳಾಪುರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.
ಲಾರಿ ರಾಷ್ಟ್ರೀಯ ಹೆದ್ದಾರಿ-7 ರಲ್ಲಿ ಗುಡಿಬಂಡೆಯಿಂದ ಗೌರಿಬಿದನೂರು ಮಾರ್ಗವಾಗಿ ಚಿಕ್ಕಬಳ್ಳಾಪುರದ ಕಡೆಗೆ ಹೋಗುತ್ತಿರುವುದರ ಮಾಹಿತಿ ಪಡೆದ ಪೊಲೀಸರು, ನಗರದ ಹೊರ ವಲಯದ ಗೌರಿಬಿದನೂರು ರಸ್ತೆಯ ಕಣಿವೆ ಪ್ರದೇಶದ ವೀರದಿಮ್ಮನ ದೇವಾಲಯದ ಬಳಿ ದಾಳಿ ನಡೆಸಿ ವಶಕ್ಕೆ ಪಡೆದರು.
ಲಾರಿಯಲ್ಲಿದ್ದ ವೇಣುಗೋಪಾಲ್ (32), ರಾಮಚಂದ್ರ (32) ಅವರನ್ನು ಬಂಧಿಸಲಾಗಿದೆ.
ಲಾರಿಯಲ್ಲಿ 42 ರಕ್ತ ಚಂದನದ ತುಂಡುಗಳಿದ್ದವು. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.