ಚಿತ್ರರಂಗ, ರಂಗಭೂಮಿ ಮತ್ತು ಕಿರುತೆರೆ ಕ್ಷೇತ್ರಗಳಲ್ಲಿ ಅಭಿನಯ ಮತ್ತು ನಿರ್ದೇಶನದ ಸಾಮರ್ಥ್ಯದಿಂದ ಗುರುತಿಸಿಕೊಂಡವರು. ‘ಬೆನಕ’ದಿಂದ ಹೊಮ್ಮಿದ ಹೊಂಗಿರಗಣಗಳಲ್ಲಿ ಇವರು ಪ್ರಮುಖರು. ಕಲಾತ್ಮಕ ಮತ್ತು ಮುಖ್ಯವಾಹಿನಿ ಸಿನಿಮಾಗಳನ್ನು ನಿರ್ದೇಶಿಸಿ ಛಾಪು ಮೂಡಿಸಿದ್ದಾರೆ. 1978 ರಲ್ಲಿ ತೆರೆಕಂಡ ‘ಗ್ರಹಣ’ ಚಿತ್ರದ ಮೂಲಕ ನಿರ್ದೇಶಕರಾದರು. ಈ ಚಿತ್ರ ಎರಡು ರಾಷ್ಟ್ರ ಮತ್ತು ರಾಜ್ಯ ಪ್ರಶಸ್ತಿಗಳನ್ನು ಪಡೆಯಿತು. ‘ಬಂಗಾರದ ಜಿಂಕೆ’, ‘ಅನ್ವೇಷಣೆ’ ಬಳಿಕ ನಿರ್ದೇಶಿಸಿದ ‘ಬ್ಯಾಂಕರ್ ಮಾರ್ಗಯ್ಯ’ ಚಿತ್ರವೂ ರಾಷ್ಟ್ರ ಪ್ರಶಸ್ತಿ ಪಡೆಯಿತು. ಇವರ ಸಿನಿಮಾಗಳಿಗೆ ಒಟ್ಟು ಎಂಟು ರಾಷ್ಟ್ರ ಪ್ರಶಸ್ತಿಗಳು ದೊರಕಿವೆ. ‘ಆಕ್ಸಿಡೆಂಟ್’ ಚಿತ್ರದಲ್ಲಿನ ನಟನೆ ಮೂಲಕ ಜನಮನ್ನಣೆ ಗಳಿಸಿಕೊಂಡರು. ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ.