‘ಪೇಠಾಲೂರ ಗ್ರಾಮದ ಜನರು ದಶಕದಿಂದ ಕುಡಿಯುವ ನೀರಿಗಾಗಿ ಪರಿತಪಿಸುತ್ತಿದ್ದು, ಹಲವು ರಾಜಕಾರಣಿಗಳು ಹಾಗೂ ಸರ್ಕಾರಗಳು ಬದಲಾದರೂ ಶಾಶ್ವತ ಪರಿಹಾರ ಮಾತ್ರ ದೊರೆತಿಲ್ಲ. ನೀರಿಗಾಗಿ ರಾತ್ರಿ ಜಾಗರಣೆ ಮಾಡುವ ಸ್ಥಿತಿ ನಿರ್ಮಾಣವಾಗಿತ್ತು. ಈಗ ಕೆರೆ ಭರ್ತಿಯಾಗಿದೆ. ಒಂದು ವೇಳೆ ಕೆರೆ ಖಾಲಿ ಆದರೆ ನೀರಿನ ಸಮಸ್ಯೆ ಹೇಳತೀರದು’ ಎನ್ನುತ್ತಾರೆ ಗ್ರಾಮದ ಸುಮಂಗಲಾ ಹರಪನಹಳ್ಳಿ ಹಾಗೂ ಕುಮಾರಸ್ವಾಮಿ ಹಿರೇಮಠ.