ಅರ್ಜಿದಾರರ ಪರ ವಕೀಲ ಎಚ್.ಎಸ್.ಚಂದ್ರಮೌಳಿ ಅವರು, 'ಅರ್ಜಿದಾರರ ವಿರುದ್ಧ ಪ್ರಬಲ ಸಾಕ್ಷಿಗಳಿಲ್ಲ. ಗಲಾಟೆ ನಡೆದ ಸಂದರ್ಭದಲ್ಲಿ ಅಭಿಷೇಕ್ ಯಾವುದೇ ಆಯುಧ ಹೊಂದಿರಲಿಲ್ಲ. ಪೋಲಿಸರು ಹೊರಿಸಿರುವ ಆರೋಪಗಳು ನಿರಾಧಾರವಾಗಿವೆ. ಅರ್ಜಿದಾರರು ಈಗಾಗಲೇ 90 ದಿನಗಳಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ. ಆದ್ದರಿಂದ ಜಾಮೀನು ನೀಡಬೇಕು' ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.ಇದಕ್ಕೆ ಪ್ರತಿಯಾಗಿ ಪ್ರಾಸಿಕ್ಯೂಷನ್ ಪರ ವಕೀಲ ಎಂ.ಎಸ್. ಶ್ಯಾಮಸುಂದರ್, 'ವಿದ್ವತ್ ಮೇಲೆ ಹಲ್ಲೆ ನಡೆಸಿದ ತಂಡದಲ್ಲಿ ಅಭಿಷೇಕ್ ಮುರಳಿ ಇದ್ದರು ಎಂಬುದನ್ನು ಚಿತ್ರನಟ ಅಂಬರೀಷ್ ಅವರ ಮಗ ಅಭಿಷೇಕ್ ಗುರುತಿಸಿದ್ದಾರೆ. ಆರೋಪಿ ಸಾಕ್ಷ್ಯ ನಾಶ ಮಾಡುವ ಸಾಧ್ಯತೆ ಇದೆ. ಆದ್ದರಿಂದ ಜಾಮೀನು ನೀಡಬಾರದು' ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು. ಆದರೆ, ನ್ಯಾಯಪೀಠ ಇದನ್ನು ಮಾನ್ಯ ಮಾಡದೆ, ಷರತ್ತುಬದ್ಧ ಜಾಮೀನು ನೀಡಿದೆ.