<p><strong>ಮೈಸೂರು:</strong> ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಾರದರ್ಶಕವಾಗಿ ನಡೆದುಕೊಂಡಿಲ್ಲ; ಅಪರಾಧ ಪ್ರಕರಣ ಎದುರಿಸುತ್ತಿರುವವರಿಗೆ ಮಣೆ ಹಾಕಿವೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಟ್ರಸ್ಟ್ನ ಟ್ರಸ್ಟಿ ಡಾ. ಆರ್.ಬಾಲಸುಬ್ರಮಣಿಯಂ ಆರೋಪಿಸಿದರು.</p>.<p>ಬಿಜೆಪಿ ಬಿಡುಗಡೆ ಮಾಡಿರುವ 154 ಅಭ್ಯರ್ಥಿಗಳ ಪಟ್ಟಿಯಲ್ಲಿ 111 ಮಂದಿ ಹಿಂದಿನ ಚುನಾವಣೆಯಲ್ಲಿ ಟಿಕೆಟ್ ಪಡೆದವರೇ ಆಗಿದ್ದಾರೆ. ಇವರು ಸರಾಸರಿ ₹ 8 ಕೋಟಿಗೂ ಹೆಚ್ಚು ಆಸ್ತಿ ಹೊಂದಿದ್ದಾರೆ. ಕಾಂಗ್ರೆಸ್ನ 218 ಅಭ್ಯರ್ಥಿಗಳ ಪಟ್ಟಿಯಲ್ಲಿ 148 ಮಂದಿ ಹಿಂದಿನ ಚುನಾವಣೆಯಲ್ಲಿ ಟಿಕೆಟ್ ಪಡೆದವರೇ ಇದ್ದಾರೆ. ಇವರು ಸರಾಸರಿ ₹ 28 ಕೋಟಿಗೂ ಅಧಿಕ ಆಸ್ತಿ ಹೊಂದಿದ್ದಾರೆ. ಜೆಡಿಎಸ್ನ 15 ಅಭ್ಯರ್ಥಿಗಳು ಅಪರಾಧ ಪ್ರಕರಣ ಎದುರಿಸುತ್ತಿದ್ದಾರೆ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>ಅಭ್ಯರ್ಥಿಗಳ ವಿವರವನ್ನು ಚುನಾವಣಾ ಆಯೋಗದಿಂದ ಪಡೆದು ವಿಶ್ಲೇಷಣೆ ಮಾಡಲಾಗಿದೆ.<strong> www.myneta.info</strong> ವೆಬ್ಸೈಟ್ ಮೂಲಕ ತಮ್ಮ ಕ್ಷೇತ್ರದ ಅಭ್ಯರ್ಥಿಗಳ ಪೂರ್ಣ ವಿವರವನ್ನು ಸಾರ್ವಜನಿಕರು ಪಡೆದುಕೊಳ್ಳಬಹುದು ಎಂದರು.</p>.<p>‘ಹೆಚ್ಚು ಹಣ ಹೊಂದಿದ ಅಭ್ಯರ್ಥಿಗಳಿಗೆ ಮಣೆ ಹಾಕಲಾಗಿದೆ. ಇವರು ಚುನಾವಣಾ ಸಂದರ್ಭದಲ್ಲಿ ನಾನಾ ತಂತ್ರ ಅನುಸರಿಸಿ ಮತದಾರರಿಗೆ ಹಣ ನೀಡುವ ಚಾಣಾಕ್ಷತನ ಹೊಂದಿದ್ದಾರೆ. ಇದನ್ನು ಜನರು ಪ್ರಶ್ನಿಸಲೇಬೇಕು. ಅಭ್ಯರ್ಥಿಗಳನ್ನು ಯಾವ ಆಧಾರದಲ್ಲಿ ಆಯ್ಕೆ ಮಾಡಲಾಗಿದೆ ಎಂಬುದನ್ನು ಪಕ್ಷಗಳು ಘೋಷಿಸಬೇಕು’ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಾರದರ್ಶಕವಾಗಿ ನಡೆದುಕೊಂಡಿಲ್ಲ; ಅಪರಾಧ ಪ್ರಕರಣ ಎದುರಿಸುತ್ತಿರುವವರಿಗೆ ಮಣೆ ಹಾಕಿವೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಟ್ರಸ್ಟ್ನ ಟ್ರಸ್ಟಿ ಡಾ. ಆರ್.ಬಾಲಸುಬ್ರಮಣಿಯಂ ಆರೋಪಿಸಿದರು.</p>.<p>ಬಿಜೆಪಿ ಬಿಡುಗಡೆ ಮಾಡಿರುವ 154 ಅಭ್ಯರ್ಥಿಗಳ ಪಟ್ಟಿಯಲ್ಲಿ 111 ಮಂದಿ ಹಿಂದಿನ ಚುನಾವಣೆಯಲ್ಲಿ ಟಿಕೆಟ್ ಪಡೆದವರೇ ಆಗಿದ್ದಾರೆ. ಇವರು ಸರಾಸರಿ ₹ 8 ಕೋಟಿಗೂ ಹೆಚ್ಚು ಆಸ್ತಿ ಹೊಂದಿದ್ದಾರೆ. ಕಾಂಗ್ರೆಸ್ನ 218 ಅಭ್ಯರ್ಥಿಗಳ ಪಟ್ಟಿಯಲ್ಲಿ 148 ಮಂದಿ ಹಿಂದಿನ ಚುನಾವಣೆಯಲ್ಲಿ ಟಿಕೆಟ್ ಪಡೆದವರೇ ಇದ್ದಾರೆ. ಇವರು ಸರಾಸರಿ ₹ 28 ಕೋಟಿಗೂ ಅಧಿಕ ಆಸ್ತಿ ಹೊಂದಿದ್ದಾರೆ. ಜೆಡಿಎಸ್ನ 15 ಅಭ್ಯರ್ಥಿಗಳು ಅಪರಾಧ ಪ್ರಕರಣ ಎದುರಿಸುತ್ತಿದ್ದಾರೆ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>ಅಭ್ಯರ್ಥಿಗಳ ವಿವರವನ್ನು ಚುನಾವಣಾ ಆಯೋಗದಿಂದ ಪಡೆದು ವಿಶ್ಲೇಷಣೆ ಮಾಡಲಾಗಿದೆ.<strong> www.myneta.info</strong> ವೆಬ್ಸೈಟ್ ಮೂಲಕ ತಮ್ಮ ಕ್ಷೇತ್ರದ ಅಭ್ಯರ್ಥಿಗಳ ಪೂರ್ಣ ವಿವರವನ್ನು ಸಾರ್ವಜನಿಕರು ಪಡೆದುಕೊಳ್ಳಬಹುದು ಎಂದರು.</p>.<p>‘ಹೆಚ್ಚು ಹಣ ಹೊಂದಿದ ಅಭ್ಯರ್ಥಿಗಳಿಗೆ ಮಣೆ ಹಾಕಲಾಗಿದೆ. ಇವರು ಚುನಾವಣಾ ಸಂದರ್ಭದಲ್ಲಿ ನಾನಾ ತಂತ್ರ ಅನುಸರಿಸಿ ಮತದಾರರಿಗೆ ಹಣ ನೀಡುವ ಚಾಣಾಕ್ಷತನ ಹೊಂದಿದ್ದಾರೆ. ಇದನ್ನು ಜನರು ಪ್ರಶ್ನಿಸಲೇಬೇಕು. ಅಭ್ಯರ್ಥಿಗಳನ್ನು ಯಾವ ಆಧಾರದಲ್ಲಿ ಆಯ್ಕೆ ಮಾಡಲಾಗಿದೆ ಎಂಬುದನ್ನು ಪಕ್ಷಗಳು ಘೋಷಿಸಬೇಕು’ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>