‘ಕೆಂಪಾಪುರ-ದಾಸರಹಳ್ಳಿ ರಸ್ತೆಯನ್ನು ಕಿರಿದು ಮಾಡುತ್ತಿದ್ದನ್ನು ಪ್ರಶ್ನಿಸಿದ್ದಕ್ಕೆ ನಮ್ಮಿಬ್ಬರ ನಡುವೆ ವಾಗ್ವಾದ ನಡೆದಿತ್ತು. ಈ ವೇಳೆ ಮುನಿರಾಜು, ಕಾಲಿನಿಂದ ನನ್ನನ್ನು ಒದ್ದು ಕಪಾಳಕ್ಕೆ ಹೊಡೆದಿದ್ದಾರೆ. ಘಟನೆಯ ದೃಶ್ಯಾವಳಿಗಳು ಸಿ.ಸಿ.ಟಿ.ವಿ ಕ್ಯಾಮೆರಾದಲ್ಲೂ ಸೆರೆಯಾಗಿವೆ’ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.