ತರೀಕೆರೆ ಕ್ಷೇತ್ರದ ಪ್ರಬಲ ಆಕಾಂಕ್ಷಿ, ಶಾಸಕ ಜಿ.ಎಚ್.ಶ್ರೀನಿವಾಸ್ ‘ಪ್ರಜಾವಾಣಿ’ಯೊಂದಿಗೆ ಮಾತನಾಡಿ, ‘ಪಕ್ಷದವರು ಯಾಕೆ ಪರಿಗಣಿಸಿಲ್ಲ ಎಂಬುದು ತಿಳಿಯುತ್ತಿಲ್ಲ. ಟಿಕೆಟ್ ಕೈತಪ್ಪುವ ಸುಳಿವು ಸಿಕ್ಕಿ ಬೆಂಬಲಿಗರು, ಕಾರ್ಯಕರ್ತರಿಗೆ ಬೇಸರವಾಗಿದೆ. ಬಂಡಾಯವಾಗಿ ಸ್ಪರ್ಧಿಸುವಂತೆ ಕೆಲವರು ಇಂಗಿತ ವ್ಯಕ್ತಪಡಿಸಿದ್ದಾರೆ. ಎಲ್ಲರೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ’ ಎಂದರು.