<p><strong>ನವದೆಹಲಿ</strong>: ಅತ್ಯಾಚಾರ ತಡೆಯಲು ಗಲ್ಲು ಶಿಕ್ಷೆಯಿಂದ ಸಾಧ್ಯವೇ ಎನ್ನುವ ಕುರಿತು ಯಾವುದಾದರೂ ಸಂಶೋಧನೆ ಅಥವಾ ವೈಜ್ಞಾನಿಕ ಅಧ್ಯಯನ ನಡೆಸಲಾಗಿದೆಯೆ ಎಂದು ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ಪ್ರಶ್ನಿಸಿದೆ.</p>.<p>ಅಪರಾಧ ಕಾನೂನು (ತಿದ್ದುಪಡಿ) ಕಾಯ್ದೆ 2013 ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಹಳೆಯ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಗೀತಾ ಮಿತ್ತಲ್ ಮತ್ತು ನ್ಯಾಯಮೂರ್ತಿ ಸಿ. ಹರಿಶಂಕರ್ ಅವರನ್ನೊಳಗೊಂಡ ನ್ಯಾಯಪೀಠ ಈ ಪ್ರಶ್ನೆ ಕೇಳಿದೆ. </p>.<p>ಅತ್ಯಾಚಾರಿಗೆ ಕನಿಷ್ಠ 7 ವರ್ಷ ಜೈಲು ಶಿಕ್ಷೆ ವಿಧಿಸುವ ನಿಯಮವನ್ನು ಈ ತಿದ್ದುಪಡಿ ಕಾಯ್ದೆಯಲ್ಲಿ ಸೇರಿಸಲಾಗಿತ್ತು ಹಾಗೂ ಅದಕ್ಕಿಂತ ಕಡಿಮೆ ಶಿಕ್ಷೆ ನೀಡಲು ನ್ಯಾಯಾಲಯಕ್ಕೆ ಇರುವ ಸ್ವಾತಂತ್ರ್ಯವನ್ನು ತೆಗೆದುಹಾಕಲಾಗಿತ್ತು.</p>.<p>ಕಠುವಾ, ಸೂರತ್ ಅತ್ಯಾಚಾರ ಪ್ರಕರಣಗಳಿಗೆ ದೇಶದೆಲ್ಲೆಡೆ ಭಾರಿ ಆಕ್ರೋಶ ವ್ಯಕ್ತವಾದ ಬಳಿಕ ಅತ್ಯಾಚಾರಿಗಳಿಗೆ ಗಲ್ಲುಶಿಕ್ಷೆ ವಿಧಿಸುವ ಸುಗ್ರೀವಾಜ್ಞೆಗೆ ಅಂಗೀಕಾರ ನೀಡಲಾಗಿದೆ.</p>.<p><strong>ಸಂತ್ರಸ್ತರ ಪೋಷಕರ ಆಗ್ರಹ:</strong> 12 ವರ್ಷದೊಳಗಿನ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಎಸಗುವವರಿಗೆ ಗಲ್ಲು ಶಿಕ್ಷೆ ವಿಧಿಸುವ ಕೇಂದ್ರ ಸರ್ಕಾರದ ಸುಗ್ರೀವಾಜ್ಞೆಗೆ ಮಕ್ಕಳ ಹಕ್ಕುಗಳ ಕಾರ್ಯಕರ್ತರ ಜತೆಗೆ ಸಂತ್ರಸ್ತರ ಪೋಷಕರು ಸಹ ವಿರೋಧ ವ್ಯಕ್ತಪಡಿಸಿದ್ದಾರೆ.</p>.<p>ಗಲ್ಲು ಶಿಕ್ಷೆ ವಿಧಿಸುವುದರಿಂದಾಗಿ, ಅತ್ಯಾಚಾರಿಗಳು ಮಕ್ಕಳನ್ನು ಹತ್ಯೆ ಮಾಡುವ ಸಾಧ್ಯತೆ ಇದೆ. ಬದಲಿಗೆ ಕಾನೂನು ವ್ಯವಸ್ಥೆಯನ್ನೇ ಮತ್ತಷ್ಟು ಬಿಗಿಗೊಳಿಸಬೇಕು ಎಂದು ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಸಂತ್ರಸ್ತರ ಪೋಷಕರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಅತ್ಯಾಚಾರ ತಡೆಯಲು ಗಲ್ಲು ಶಿಕ್ಷೆಯಿಂದ ಸಾಧ್ಯವೇ ಎನ್ನುವ ಕುರಿತು ಯಾವುದಾದರೂ ಸಂಶೋಧನೆ ಅಥವಾ ವೈಜ್ಞಾನಿಕ ಅಧ್ಯಯನ ನಡೆಸಲಾಗಿದೆಯೆ ಎಂದು ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ಪ್ರಶ್ನಿಸಿದೆ.</p>.<p>ಅಪರಾಧ ಕಾನೂನು (ತಿದ್ದುಪಡಿ) ಕಾಯ್ದೆ 2013 ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಹಳೆಯ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಗೀತಾ ಮಿತ್ತಲ್ ಮತ್ತು ನ್ಯಾಯಮೂರ್ತಿ ಸಿ. ಹರಿಶಂಕರ್ ಅವರನ್ನೊಳಗೊಂಡ ನ್ಯಾಯಪೀಠ ಈ ಪ್ರಶ್ನೆ ಕೇಳಿದೆ. </p>.<p>ಅತ್ಯಾಚಾರಿಗೆ ಕನಿಷ್ಠ 7 ವರ್ಷ ಜೈಲು ಶಿಕ್ಷೆ ವಿಧಿಸುವ ನಿಯಮವನ್ನು ಈ ತಿದ್ದುಪಡಿ ಕಾಯ್ದೆಯಲ್ಲಿ ಸೇರಿಸಲಾಗಿತ್ತು ಹಾಗೂ ಅದಕ್ಕಿಂತ ಕಡಿಮೆ ಶಿಕ್ಷೆ ನೀಡಲು ನ್ಯಾಯಾಲಯಕ್ಕೆ ಇರುವ ಸ್ವಾತಂತ್ರ್ಯವನ್ನು ತೆಗೆದುಹಾಕಲಾಗಿತ್ತು.</p>.<p>ಕಠುವಾ, ಸೂರತ್ ಅತ್ಯಾಚಾರ ಪ್ರಕರಣಗಳಿಗೆ ದೇಶದೆಲ್ಲೆಡೆ ಭಾರಿ ಆಕ್ರೋಶ ವ್ಯಕ್ತವಾದ ಬಳಿಕ ಅತ್ಯಾಚಾರಿಗಳಿಗೆ ಗಲ್ಲುಶಿಕ್ಷೆ ವಿಧಿಸುವ ಸುಗ್ರೀವಾಜ್ಞೆಗೆ ಅಂಗೀಕಾರ ನೀಡಲಾಗಿದೆ.</p>.<p><strong>ಸಂತ್ರಸ್ತರ ಪೋಷಕರ ಆಗ್ರಹ:</strong> 12 ವರ್ಷದೊಳಗಿನ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಎಸಗುವವರಿಗೆ ಗಲ್ಲು ಶಿಕ್ಷೆ ವಿಧಿಸುವ ಕೇಂದ್ರ ಸರ್ಕಾರದ ಸುಗ್ರೀವಾಜ್ಞೆಗೆ ಮಕ್ಕಳ ಹಕ್ಕುಗಳ ಕಾರ್ಯಕರ್ತರ ಜತೆಗೆ ಸಂತ್ರಸ್ತರ ಪೋಷಕರು ಸಹ ವಿರೋಧ ವ್ಯಕ್ತಪಡಿಸಿದ್ದಾರೆ.</p>.<p>ಗಲ್ಲು ಶಿಕ್ಷೆ ವಿಧಿಸುವುದರಿಂದಾಗಿ, ಅತ್ಯಾಚಾರಿಗಳು ಮಕ್ಕಳನ್ನು ಹತ್ಯೆ ಮಾಡುವ ಸಾಧ್ಯತೆ ಇದೆ. ಬದಲಿಗೆ ಕಾನೂನು ವ್ಯವಸ್ಥೆಯನ್ನೇ ಮತ್ತಷ್ಟು ಬಿಗಿಗೊಳಿಸಬೇಕು ಎಂದು ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಸಂತ್ರಸ್ತರ ಪೋಷಕರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>