ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ ಜಿಲ್ಲೆಯ 215 ಫಲಾನುಭವಿಗಳನ್ನು ಆಯಾ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಸಮಿತಿ ಆಯ್ಕೆ ಮಾಡಿದೆ. ಫಲಾನುಭವಿಗಳು ಬ್ಯಾಂಕ್ಗಳಿಗೆ ಅಲೆದಾಡುವುದನ್ನು ತಪ್ಪಿಸಲು ಈ ಮೇಳ ಆಯೋಜಿಸಲಾಗಿದೆ. ವಾಸಸ್ಥಳಕ್ಕೆ ಸಂಬಂಧಿಸಿದ ದಾಖಲೆ ನೀಡಿದರೆ ಸಾಲ ಮಂಜೂರು ಮಾಡಲು ಬ್ಯಾಂಕ್ಗಳಿಗೆ ಸೂಚನೆ ನೀಡಲಾಗಿದೆ ಎಂದೂ ಅವರು ಹೇಳಿದರು.