‘ನಿಜವಾದ ಹಿಂದುತ್ವ ರಾಜಕೀಯದಲ್ಲಿ ಹೇಗೆ ಏನು ಎಂಬುದನ್ನು ತೋರಿಸಿಕೊಡಬೇಕಾಗಿದೆ. ಚುನಾವಣೆಯಲ್ಲಿ ಗೆಲ್ಲುವ ಮೂಲಕ ಹಿಂದುತ್ವಕ್ಕೆ ಬಲ ತುಂಬುವ ಉದ್ದೇಶದಿಂದ ಸ್ಪರ್ಧಿಸುತ್ತಿದ್ದೇನೆ. ಬಿಜೆಪಿಯಲ್ಲಿ ಶೇ 50ರಷ್ಟು ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರೇ ತುಂಬಿದ್ದು, ಇಡೀ ಜೀವಮಾನ ಕಾಂಗ್ರೆಸ್ನಲ್ಲಿದ್ದ ಎಸ್.ಎಂ.ಕೃಷ್ಣ ಅವರನ್ನೇ ಬಿಜೆಪಿಗೆ ಸೆಳೆದುಕೊಂಡ ಉದ್ದೇಶವೇನು’ ಎಂದು ಪ್ರಶ್ನಿಸಿದರು.