<p><strong>ಮೈಸೂರು</strong>: ರೈತ ದಸರಾ ಕಾರ್ಯಕ್ರಮವು ಅ.6 ಹಾಗೂ 7ರಂದು ನಡೆಯಲಿದ್ದು, ಈ ಅಂಗವಾಗಿ ಆಯೋಜಿಸುವ ಹಾಲು ಕರೆಯುವ ಸ್ಪರ್ಧೆಯ ವಿಜೇತರು ಬರೋಬ್ಬರಿ ₹1 ಲಕ್ಷ ನಗದು ಬಹುಮಾನ ತಮ್ಮದಾಗಿಸಿಕೊಳ್ಳಲಿದ್ದಾರೆ.</p>.<p>ರೈತ ದಸರಾ ಉಪ ಸಮಿತಿ ಹೊರತಂದಿರುವ ಶ್ವಾನ ಪ್ರದರ್ಶನ ಹಾಗೂ ಅಧಿಕ ಹಾಲು ಕರೆಯುವ ಸ್ಪರ್ಧೆಗಳ ಪೋಸ್ಟರ್ಗಳನ್ನು ಪಶು ಸಂಗೋಪನೆ ಹಾಗೂ ರೇಷ್ಮೆ ಸಚಿವ ಕೆ.ವೆಂಕಟೇಶ್ ಜಲದರ್ಶಿನಿ ಅತಿಥಿಗೃಹದಲ್ಲಿ ಮಂಗಳವಾರ ಬಿಡುಗಡೆ ಮಾಡಿದರು.</p>.<p>‘ಜೆ.ಕೆ. ಮೈದಾನದಲ್ಲಿ ಅ.6 ಮತ್ತು 7ರಂದು ರಾಸುಗಳು, ಸಾಕು ಪ್ರಾಣಿಗಳ ಪ್ರದರ್ಶನ, ವಿವಿಧ ಕಾರ್ಯಕ್ರಮಗಳು ಇರಲಿವೆ’ ಎಂದು ಮಾಹಿತಿ ನೀಡಿದರು.</p>.<p>‘ಈ ಬಾರಿ ಹಾಲು ಕರೆಯುವ ಸ್ಪರ್ಧೆಯ ಬಹುಮಾನಗಳ ಮೊತ್ತವನ್ನು ದ್ವಿಗುಣಗೊಳಿಸಲಾಗಿದೆ. ಪ್ರಥಮ ಬಹುಮಾನವಾಗಿ ₹1 ಲಕ್ಷ, ದ್ವಿತೀಯ ಬಹುಮಾನ ₹80 ಸಾವಿರ, ತೃತೀಯ ಬಹುಮಾನ ₹60 ಸಾವಿರ, ನಾಲ್ಕನೇ ಬಹುಮಾನ ₹40 ಸಾವಿರ ನಿಗದಿ ಮಾಡಲಾಗಿದೆ. ರಾಜ್ಯದಾದ್ಯಂತ ಇರುವ ಹೈನುಗಾರರು ಪಾಲ್ಗೊಳ್ಳಬಹುದು. 6ರಂದು ಶ್ವಾನ ಪ್ರದರ್ಶನದಲ್ಲಿ ಕುಟುಂಬ ಸದಸ್ಯರೊಂದಿಗೆ ಪಾಲ್ಗೊಳ್ಳಬೇಕು’ ಎಂದು ಕೋರಿದರು.</p>.<p>ರೈತ ದಸರಾ ಉಪಸಮಿತಿ ವಿಶೇಷಾಧಿಕಾರಿ ಡಾ.ಎಂ. ಕೃಷ್ಣಂರಾಜು, ಕೃಷಿ ಇಲಾಖೆ ಜಂಟಿ ನಿರ್ದೇಶಕ ಕೆ.ಜಿ.ರವಿ, ಸಹ ಕಾರ್ಯದರ್ಶಿ ಡಾ.ನಾಗರಾಜು, ಮೀನುಗಾರಿಕೆ ಇಲಾಖೆ ಉಪನಿರ್ದೇಶಕ ಜಿ.ಎಚ್. ಮಂಜುನಾಥ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ರೈತ ದಸರಾ ಕಾರ್ಯಕ್ರಮವು ಅ.6 ಹಾಗೂ 7ರಂದು ನಡೆಯಲಿದ್ದು, ಈ ಅಂಗವಾಗಿ ಆಯೋಜಿಸುವ ಹಾಲು ಕರೆಯುವ ಸ್ಪರ್ಧೆಯ ವಿಜೇತರು ಬರೋಬ್ಬರಿ ₹1 ಲಕ್ಷ ನಗದು ಬಹುಮಾನ ತಮ್ಮದಾಗಿಸಿಕೊಳ್ಳಲಿದ್ದಾರೆ.</p>.<p>ರೈತ ದಸರಾ ಉಪ ಸಮಿತಿ ಹೊರತಂದಿರುವ ಶ್ವಾನ ಪ್ರದರ್ಶನ ಹಾಗೂ ಅಧಿಕ ಹಾಲು ಕರೆಯುವ ಸ್ಪರ್ಧೆಗಳ ಪೋಸ್ಟರ್ಗಳನ್ನು ಪಶು ಸಂಗೋಪನೆ ಹಾಗೂ ರೇಷ್ಮೆ ಸಚಿವ ಕೆ.ವೆಂಕಟೇಶ್ ಜಲದರ್ಶಿನಿ ಅತಿಥಿಗೃಹದಲ್ಲಿ ಮಂಗಳವಾರ ಬಿಡುಗಡೆ ಮಾಡಿದರು.</p>.<p>‘ಜೆ.ಕೆ. ಮೈದಾನದಲ್ಲಿ ಅ.6 ಮತ್ತು 7ರಂದು ರಾಸುಗಳು, ಸಾಕು ಪ್ರಾಣಿಗಳ ಪ್ರದರ್ಶನ, ವಿವಿಧ ಕಾರ್ಯಕ್ರಮಗಳು ಇರಲಿವೆ’ ಎಂದು ಮಾಹಿತಿ ನೀಡಿದರು.</p>.<p>‘ಈ ಬಾರಿ ಹಾಲು ಕರೆಯುವ ಸ್ಪರ್ಧೆಯ ಬಹುಮಾನಗಳ ಮೊತ್ತವನ್ನು ದ್ವಿಗುಣಗೊಳಿಸಲಾಗಿದೆ. ಪ್ರಥಮ ಬಹುಮಾನವಾಗಿ ₹1 ಲಕ್ಷ, ದ್ವಿತೀಯ ಬಹುಮಾನ ₹80 ಸಾವಿರ, ತೃತೀಯ ಬಹುಮಾನ ₹60 ಸಾವಿರ, ನಾಲ್ಕನೇ ಬಹುಮಾನ ₹40 ಸಾವಿರ ನಿಗದಿ ಮಾಡಲಾಗಿದೆ. ರಾಜ್ಯದಾದ್ಯಂತ ಇರುವ ಹೈನುಗಾರರು ಪಾಲ್ಗೊಳ್ಳಬಹುದು. 6ರಂದು ಶ್ವಾನ ಪ್ರದರ್ಶನದಲ್ಲಿ ಕುಟುಂಬ ಸದಸ್ಯರೊಂದಿಗೆ ಪಾಲ್ಗೊಳ್ಳಬೇಕು’ ಎಂದು ಕೋರಿದರು.</p>.<p>ರೈತ ದಸರಾ ಉಪಸಮಿತಿ ವಿಶೇಷಾಧಿಕಾರಿ ಡಾ.ಎಂ. ಕೃಷ್ಣಂರಾಜು, ಕೃಷಿ ಇಲಾಖೆ ಜಂಟಿ ನಿರ್ದೇಶಕ ಕೆ.ಜಿ.ರವಿ, ಸಹ ಕಾರ್ಯದರ್ಶಿ ಡಾ.ನಾಗರಾಜು, ಮೀನುಗಾರಿಕೆ ಇಲಾಖೆ ಉಪನಿರ್ದೇಶಕ ಜಿ.ಎಚ್. ಮಂಜುನಾಥ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>