<p>ಜಮಖಂಡಿ: ತಂದೆ-ತಾಯಿಗಳು ತಮ್ಮ ಮಕ್ಕಳಿಗೆ ಸಂಸ್ಕಾರ ನೀಡಬೇಕು.ಸಂಸ್ಕಾರವಂತ ಮಕ್ಕಳು ವಿನಯಶೀಲರಾಗಿ ಶಿಕ್ಷಣ ಪಡೆಯುತ್ತಾರೆ. ಆ ನಿಟ್ಟಿನಲ್ಲಿ ಮಕ್ಕಳಿಗೆ ತಂದೆ-ತಾಯಿಗಳೇ ಮಾದರಿಯಾಗಬೇಕು ಎಂದು ಜಕನೂರ-ಕುಂಚನೂರ ಗ್ರಾಮಗಳ ಕಮರಿಮಠದ ಸಿದ್ದಲಿಂಗದೇವರು ಹೇಳಿದರು.</p>.<p>ತಾಲ್ಲೂಕಿನ ಹುಲ್ಯಾಳ ಶ್ರೀಗುರುದೇವಾಶ್ರಮದ ಶ್ರೀಗುರುದೇವ ಸತ್ಸಂಗ ಬಳಗದ ಆಶ್ರಯದಲ್ಲಿ ಪ್ರತಿ ತಿಂಗಳ 4ನೇ ಭಾನುವಾರ ಹಮ್ಮಿಕೊಳ್ಳುವ ಶ್ರೀಗುರುದೇವ ಸತ್ಸಂಗ ಮಾರ್ಚ್ 22ರ ಮಾಸಿಕ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ, ಸಮಾಜ ನಿರ್ಮಾಣದಲ್ಲಿ ಯುವಕರ ಪಾತ್ರ’ ಕುರಿತು ಅನುಭಾವ ಹಂಚಿಕೊಂಡರು.</p>.<p>ಶರೀರ ಸದೃಢವಾಗಿದ್ದರೆಮಾತ್ರಸಮಾಜಕ್ಕೆ ಅಳಿಲು ಸೇವೆ ಸಲ್ಲಿಸಬಹುದು. ಉತ್ತಮ ನಾಗರಿಕರಿಂದ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದರು.</p>.<p>ಗುರುದೇವಾಶ್ರಮದ ಹರ್ಷಾನಂದ ಸ್ವಾಮಿಗಳು ನೇತೃತ್ವ ವಹಿಸಿ, ಆನ್ಲೈನ್ ಗೇಮ್ ಆಡಿ ಸಾಲ ಮಾಡಿಕೊಂಡು ಮಕ್ಕಳು ಹಾಳಾಗುತ್ತಿದ್ದಾರೆ. ಸಾಲ ಕೊಡುವವರು ಮಕ್ಕಳ ಪಾಲಕರ ಸಮ್ಮತಿ ಮತ್ತು ಗ್ರಾಮದ ಇಬ್ಬರು ಹಿರಿಯರ ಸಹಮತವಿದ್ದರೆ ಮಾತ್ರ ಸಾಲ ಕೊಡಬೇಕು ಎಂದರು.</p>.<p>ಶ್ರೀಗುರುದೇವ ಸಂಗೀತ ಬಳಗದ ಕಲಾವಿದರಾದ ಗುರುಬಸಗೌಡ ಪಾಟೀಲ, ಪರಮೇಶ್ವರ ತೇಲಿ, ರಾಮಚಂದ್ರ ಹೂಗಾರ, ಸಿದ್ದು ಉಪ್ಪಲದಿನ್ನಿ ಸಂಗೀತ ಸೇವೆ ಸಲ್ಲಿಸಿದರು. ನಿವೃತ್ತ ಶಿಕ್ಷಕ ಗುರುನಾಥ ಸುತಾರ ಸ್ವಾಗತಿಸಿದರು. ಪೃಥ್ವಿರಾಜ ಹೊನಗೌಡ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260324-19-117869413</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಜಮಖಂಡಿ: ತಂದೆ-ತಾಯಿಗಳು ತಮ್ಮ ಮಕ್ಕಳಿಗೆ ಸಂಸ್ಕಾರ ನೀಡಬೇಕು.ಸಂಸ್ಕಾರವಂತ ಮಕ್ಕಳು ವಿನಯಶೀಲರಾಗಿ ಶಿಕ್ಷಣ ಪಡೆಯುತ್ತಾರೆ. ಆ ನಿಟ್ಟಿನಲ್ಲಿ ಮಕ್ಕಳಿಗೆ ತಂದೆ-ತಾಯಿಗಳೇ ಮಾದರಿಯಾಗಬೇಕು ಎಂದು ಜಕನೂರ-ಕುಂಚನೂರ ಗ್ರಾಮಗಳ ಕಮರಿಮಠದ ಸಿದ್ದಲಿಂಗದೇವರು ಹೇಳಿದರು.</p>.<p>ತಾಲ್ಲೂಕಿನ ಹುಲ್ಯಾಳ ಶ್ರೀಗುರುದೇವಾಶ್ರಮದ ಶ್ರೀಗುರುದೇವ ಸತ್ಸಂಗ ಬಳಗದ ಆಶ್ರಯದಲ್ಲಿ ಪ್ರತಿ ತಿಂಗಳ 4ನೇ ಭಾನುವಾರ ಹಮ್ಮಿಕೊಳ್ಳುವ ಶ್ರೀಗುರುದೇವ ಸತ್ಸಂಗ ಮಾರ್ಚ್ 22ರ ಮಾಸಿಕ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ, ಸಮಾಜ ನಿರ್ಮಾಣದಲ್ಲಿ ಯುವಕರ ಪಾತ್ರ’ ಕುರಿತು ಅನುಭಾವ ಹಂಚಿಕೊಂಡರು.</p>.<p>ಶರೀರ ಸದೃಢವಾಗಿದ್ದರೆಮಾತ್ರಸಮಾಜಕ್ಕೆ ಅಳಿಲು ಸೇವೆ ಸಲ್ಲಿಸಬಹುದು. ಉತ್ತಮ ನಾಗರಿಕರಿಂದ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದರು.</p>.<p>ಗುರುದೇವಾಶ್ರಮದ ಹರ್ಷಾನಂದ ಸ್ವಾಮಿಗಳು ನೇತೃತ್ವ ವಹಿಸಿ, ಆನ್ಲೈನ್ ಗೇಮ್ ಆಡಿ ಸಾಲ ಮಾಡಿಕೊಂಡು ಮಕ್ಕಳು ಹಾಳಾಗುತ್ತಿದ್ದಾರೆ. ಸಾಲ ಕೊಡುವವರು ಮಕ್ಕಳ ಪಾಲಕರ ಸಮ್ಮತಿ ಮತ್ತು ಗ್ರಾಮದ ಇಬ್ಬರು ಹಿರಿಯರ ಸಹಮತವಿದ್ದರೆ ಮಾತ್ರ ಸಾಲ ಕೊಡಬೇಕು ಎಂದರು.</p>.<p>ಶ್ರೀಗುರುದೇವ ಸಂಗೀತ ಬಳಗದ ಕಲಾವಿದರಾದ ಗುರುಬಸಗೌಡ ಪಾಟೀಲ, ಪರಮೇಶ್ವರ ತೇಲಿ, ರಾಮಚಂದ್ರ ಹೂಗಾರ, ಸಿದ್ದು ಉಪ್ಪಲದಿನ್ನಿ ಸಂಗೀತ ಸೇವೆ ಸಲ್ಲಿಸಿದರು. ನಿವೃತ್ತ ಶಿಕ್ಷಕ ಗುರುನಾಥ ಸುತಾರ ಸ್ವಾಗತಿಸಿದರು. ಪೃಥ್ವಿರಾಜ ಹೊನಗೌಡ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260324-19-117869413</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>