<p>ಅಜ್ಜಂಪುರ: ‘ಪ್ರತಿಯೊಬ್ಬರೂ ದುಶ್ಚಟಗಳಿಂದ ದೂರವಿದ್ದು, ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು’ ಎಂದು ಹಣ್ಣೆ ಶ್ರೀಶೈಲ ಶಾಖಾ ಮಠದ ಮರುಳಸಿದ್ದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸಲಹೆ ನೀಡಿದರು.</p>.<p>ಪಟ್ಟಣದ ತರಳಬಾಳು ಸಮುದಾಯ ಭವನದಲ್ಲಿ ಬುಧವಾರ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪಟ್ಟಣದ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಹಾಗೂ ವಿವಿಧ ಸಂಘ–ಸಂಸ್ಥೆಗಳ ಆಶ್ರಯದಲ್ಲಿ ನಡೆದ 2049ನೇ ಮದ್ಯವರ್ಜನ ಶಿಬಿರದ ಸಮಾರೋಪದಲ್ಲಿ ಅವರು ಮಾತನಾಡಿದರು.</p>.<p>ಎಸ್.ಕೆ. ಆರ್.ಡಿ.ಪಿ ಚಿತ್ರದುರ್ಗ ಪ್ರಾದೇಶಿಕ ನಿರ್ದೇಶಕಿ ಗೀತಾ ಮಾತನಾಡಿ, ‘ಶಿಬಿರಾರ್ಥಿಗಳು, ಮದ್ಯ ವ್ಯಸನದಿಂದ ಮುಕ್ತಿ ಹೊಂದಿ ನೆಮ್ಮದಿಯ ಜೀವನ ಮಾಡಿ, ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ಬದುಕು ನಡೆಸಿದಾಗ ಮಾತ್ರ ಶಿಬಿರ ಸಾರ್ಥಕವಾಗುತ್ತದೆ’ ಎಂದು ಅಭಿಪ್ರಾಯಪಟ್ಟರು.</p>.<p>ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಮೂರ್ತಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಎ.ಸಿ. ಚಂದ್ರಪ್ಪ, ಪ್ರಶಾಂತ್ ಚಿಪ್ರಗುತಿ, ಯೋಜನಾಧಿಕಾರಿ ನಾಗರಾಜ ಕುಲಾಲ್, ಮುಖಂಡ ಹೆಬ್ಬೂರು ನಾಗೇಂದ್ರ, ಶಿಬಿರಾಧಿಕಾರಿ ನಂದಾಕುಮಾರ್, ಆರೋಗ್ಯ ಸಹಾಯಕಿ ನೇತ್ರಾವತಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-126-121248300</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅಜ್ಜಂಪುರ: ‘ಪ್ರತಿಯೊಬ್ಬರೂ ದುಶ್ಚಟಗಳಿಂದ ದೂರವಿದ್ದು, ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು’ ಎಂದು ಹಣ್ಣೆ ಶ್ರೀಶೈಲ ಶಾಖಾ ಮಠದ ಮರುಳಸಿದ್ದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸಲಹೆ ನೀಡಿದರು.</p>.<p>ಪಟ್ಟಣದ ತರಳಬಾಳು ಸಮುದಾಯ ಭವನದಲ್ಲಿ ಬುಧವಾರ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪಟ್ಟಣದ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಹಾಗೂ ವಿವಿಧ ಸಂಘ–ಸಂಸ್ಥೆಗಳ ಆಶ್ರಯದಲ್ಲಿ ನಡೆದ 2049ನೇ ಮದ್ಯವರ್ಜನ ಶಿಬಿರದ ಸಮಾರೋಪದಲ್ಲಿ ಅವರು ಮಾತನಾಡಿದರು.</p>.<p>ಎಸ್.ಕೆ. ಆರ್.ಡಿ.ಪಿ ಚಿತ್ರದುರ್ಗ ಪ್ರಾದೇಶಿಕ ನಿರ್ದೇಶಕಿ ಗೀತಾ ಮಾತನಾಡಿ, ‘ಶಿಬಿರಾರ್ಥಿಗಳು, ಮದ್ಯ ವ್ಯಸನದಿಂದ ಮುಕ್ತಿ ಹೊಂದಿ ನೆಮ್ಮದಿಯ ಜೀವನ ಮಾಡಿ, ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ಬದುಕು ನಡೆಸಿದಾಗ ಮಾತ್ರ ಶಿಬಿರ ಸಾರ್ಥಕವಾಗುತ್ತದೆ’ ಎಂದು ಅಭಿಪ್ರಾಯಪಟ್ಟರು.</p>.<p>ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಮೂರ್ತಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಎ.ಸಿ. ಚಂದ್ರಪ್ಪ, ಪ್ರಶಾಂತ್ ಚಿಪ್ರಗುತಿ, ಯೋಜನಾಧಿಕಾರಿ ನಾಗರಾಜ ಕುಲಾಲ್, ಮುಖಂಡ ಹೆಬ್ಬೂರು ನಾಗೇಂದ್ರ, ಶಿಬಿರಾಧಿಕಾರಿ ನಂದಾಕುಮಾರ್, ಆರೋಗ್ಯ ಸಹಾಯಕಿ ನೇತ್ರಾವತಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-126-121248300</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>