<p>ಆಲೂರು: ‘ಮಾನವ ಸೇವೆ ಮಾಡುವುದು ಮಹಾದೇವನ ಸೇವೆ ಮಾಡಿದಂತೆ’ ಎಂದು ಕಾರ್ಜುವಳ್ಳಿ ಮಠದ ಸದಾಶಿವ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.</p>.<p>ಅಗಿಲೆ ಗ್ರಾಮದಲ್ಲಿರುವ ತೇಜೋದಯ ನಿರಾಶ್ರಿತರ ಆಶ್ರಮದಲ್ಲಿ ‘ಮನೆ ಮನೆಗೆ-ಮನ ಮನಕೆ ರೇಣುಕ’ ಎಂಬ ಧರ್ಮ ಜಾಗೃತಿ ಹಾಗೂ ತತ್ವ ಪ್ರಚಾರ ಕಾರ್ಯಕ್ರಮಕ್ಕೆ ಮೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಸಂಭ್ರಮಾಚರಣೆ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದರು.</p>.<p>‘ಸಮಾಜದಲ್ಲಿ ಪ್ರತಿಯೊಬ್ಬರೂ ತಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು. ಧರ್ಮ ಪ್ರಚಾರದ ಜೊತೆಗೆ ದೀನ ದಲಿತರ, ನಿರಾಶ್ರಿತರ ಹಾಗೂ ಅಗತ್ಯವಿರುವವರಿಗೆ ನೆರವಾಗುವುದು ಪ್ರತಿಯೊಬ್ಬರ ಕರ್ತವ್ಯ, ಅಭಿಯಾನ 36 ಸಂಚಿಕೆ ಪೂರೈಸಿದೆ’ ಎಂದರು.</p>.<p>‘ಸಮಾಜದಲ್ಲಿ ಧಾರ್ಮಿಕ ಮೌಲ್ಯ, ಸನಾತನ ಸಂಸ್ಕೃತಿ, ವೀರಶೈವ ಸಿದ್ಧಾಂತ ಹಾಗೂ ಮಾನವೀಯತೆ ಬೆಳೆಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ. ಸಮಾರಂಭದ ಅಂಗವಾಗಿ ಆಶ್ರಮದಲ್ಲಿರುವ ನಿರಾಶ್ರಿತರಿಗೆ ಹಾಗೂ ಅಗತ್ಯವಿರುವವರಿಗೆ ತರಕಾರಿ, ಅಕ್ಕಿ, ಬೇಳೆ, ಎಣ್ಣೆ ಸೇರಿ ವಿವಿಧ ದಿನಸಿ ಪದಾರ್ಥಗಳನ್ನು ವಿತರಿಸಲಾಗಿದೆ’ ಎಂದು ತಿಳಿಸಿದರು.</p>.<p>ಆಶ್ರಮದ ಸ್ಥಾಪಕ ಗಿರಿತೇಜ್, ಸಿದ್ಧಾಂತ ಶಿಖಾಮಣಿಯ ತತ್ವ ಪ್ರಚಾರ ಸಮಿತಿಯ ನಿರ್ದೇಶಕರಾದ ಡಿ.ಎ ದೇವರಾಜ್ ಶಾಸ್ತ್ರಿ, ಹೊನ್ನಸ್ವಾಮಿ ಶೆಟ್ಟಿಹಳ್ಳಿ, ಮಂಜುನಾಥ ಶ್ರೀಧರ್, ವಿರೂಪಾಕ್ಷಯ್ಯ, ಎಚ್.ಸಿ. ನೀಲಕಂಠಪ್ಪ, ಯಶ್ವಂತ್ ಕಾರ್ಜುವಳ್ಳಿ, ಜಶ್ವಂತ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-36-1827122276</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಆಲೂರು: ‘ಮಾನವ ಸೇವೆ ಮಾಡುವುದು ಮಹಾದೇವನ ಸೇವೆ ಮಾಡಿದಂತೆ’ ಎಂದು ಕಾರ್ಜುವಳ್ಳಿ ಮಠದ ಸದಾಶಿವ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.</p>.<p>ಅಗಿಲೆ ಗ್ರಾಮದಲ್ಲಿರುವ ತೇಜೋದಯ ನಿರಾಶ್ರಿತರ ಆಶ್ರಮದಲ್ಲಿ ‘ಮನೆ ಮನೆಗೆ-ಮನ ಮನಕೆ ರೇಣುಕ’ ಎಂಬ ಧರ್ಮ ಜಾಗೃತಿ ಹಾಗೂ ತತ್ವ ಪ್ರಚಾರ ಕಾರ್ಯಕ್ರಮಕ್ಕೆ ಮೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಸಂಭ್ರಮಾಚರಣೆ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದರು.</p>.<p>‘ಸಮಾಜದಲ್ಲಿ ಪ್ರತಿಯೊಬ್ಬರೂ ತಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು. ಧರ್ಮ ಪ್ರಚಾರದ ಜೊತೆಗೆ ದೀನ ದಲಿತರ, ನಿರಾಶ್ರಿತರ ಹಾಗೂ ಅಗತ್ಯವಿರುವವರಿಗೆ ನೆರವಾಗುವುದು ಪ್ರತಿಯೊಬ್ಬರ ಕರ್ತವ್ಯ, ಅಭಿಯಾನ 36 ಸಂಚಿಕೆ ಪೂರೈಸಿದೆ’ ಎಂದರು.</p>.<p>‘ಸಮಾಜದಲ್ಲಿ ಧಾರ್ಮಿಕ ಮೌಲ್ಯ, ಸನಾತನ ಸಂಸ್ಕೃತಿ, ವೀರಶೈವ ಸಿದ್ಧಾಂತ ಹಾಗೂ ಮಾನವೀಯತೆ ಬೆಳೆಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ. ಸಮಾರಂಭದ ಅಂಗವಾಗಿ ಆಶ್ರಮದಲ್ಲಿರುವ ನಿರಾಶ್ರಿತರಿಗೆ ಹಾಗೂ ಅಗತ್ಯವಿರುವವರಿಗೆ ತರಕಾರಿ, ಅಕ್ಕಿ, ಬೇಳೆ, ಎಣ್ಣೆ ಸೇರಿ ವಿವಿಧ ದಿನಸಿ ಪದಾರ್ಥಗಳನ್ನು ವಿತರಿಸಲಾಗಿದೆ’ ಎಂದು ತಿಳಿಸಿದರು.</p>.<p>ಆಶ್ರಮದ ಸ್ಥಾಪಕ ಗಿರಿತೇಜ್, ಸಿದ್ಧಾಂತ ಶಿಖಾಮಣಿಯ ತತ್ವ ಪ್ರಚಾರ ಸಮಿತಿಯ ನಿರ್ದೇಶಕರಾದ ಡಿ.ಎ ದೇವರಾಜ್ ಶಾಸ್ತ್ರಿ, ಹೊನ್ನಸ್ವಾಮಿ ಶೆಟ್ಟಿಹಳ್ಳಿ, ಮಂಜುನಾಥ ಶ್ರೀಧರ್, ವಿರೂಪಾಕ್ಷಯ್ಯ, ಎಚ್.ಸಿ. ನೀಲಕಂಠಪ್ಪ, ಯಶ್ವಂತ್ ಕಾರ್ಜುವಳ್ಳಿ, ಜಶ್ವಂತ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-36-1827122276</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>