<p>ಬಾದಾಮಿ: ‘ಶಿವಶರಣೆ ಹೇಮರಡ್ಡಿ ಮಲ್ಲಮ್ಮನ ಆದರ್ಶಗಳು ಮನುಕುಲಕ್ಕೆ ಸಾರ್ವಕಾಲಿಕ ಸತ್ಯವಾಗಿವೆ. ಪ್ರತಿಯೊಬ್ಬರು ಮಲ್ಲಮ್ಮಳ ಆದರ್ಶಗಳನ್ನು ಅರಿತುಕೊಂಡು ನಡೆಯಬೇಕು’ ಎಂದು ವಾಣಿಜ್ಯ ತೆರಿಗೆ ಇಲಾಖೆ ನಿವೃತ್ತ ಉಪಾಯುಕ್ತ ಜಿ.ಬಿ.ಗೌಡಪ್ಪಗೋಳ ಹೇಳಿದರು.</p>.<p>ಹೇಮ-ವೇಮ ಚಾರಿಟಬಲ್ ಸಂಸ್ಥೆ ಆಶ್ರಯದಲ್ಲಿ ಭಾನುವಾರ ಶಿವಶರಣೆ ಹೇಮರಡ್ಡಿ ಮಲ್ಲಮ್ಮಳ 604ನೇ ಜಯಂತ್ಯುತ್ಸವ ಸಮಾರಂಭದಲ್ಲಿ ಅವರು ಉಪನ್ಯಾಸ ನೀಡಿದರು.</p>.<p>‘ತಾಳ್ಮೆ, ಸಹನೆ, ಸದಾಚಾರ, ಸಂತೃಪ್ತಿ, ದಾನ ಮತ್ತು ನಿಷ್ಕಲ್ಮಶ ಭಕ್ತಿ ಗುಣಗಳು ಮಲ್ಲಮ್ಮಳ ಬದುಕಿನ ಆಸ್ತಿಯಾಗಿದ್ದವು’ ಎಂದು ತಿಳಿಸಿದರು.</p>.<p>ಇದೇ ಸಂದರ್ಭದಲ್ಲಿ ಸಮಾಜದ ಎಸ್.ಎಸ್.ಎಲ್.ಸಿ, ಪಿಯುಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಮತ್ತು ನಿವೃತ್ತ ನೌಕರರನ್ನು ಸನ್ಮಾನಿಸಲಾಯಿತು. ಶಿಕ್ಷಣ ಇಲಾಖೆಯ ನಿವೃತ್ತ ಡಿಡಿಪಿಐ ಎಚ್.ಜಿ.ಮಿರ್ಜಿ ಮಲ್ಲಮ್ಮಳ ಭಕ್ತಿ ಕುರಿತು ತಿಳಿಸಿದರು.</p>.<p>ಚಾರಿಟಬಲ್ ಸಂಸ್ಥೆಯ ಅಧ್ಯಕ್ಷ ಡಿ.ಎಂ.ಪೈಲ್ ಅಧ್ಯಕ್ಷತೆ ವಹಿಸಿದ್ದರು. ಡಿ.ಪಿ.ಅಮಲಝರಿ, ವಿ.ಎಸ್.ದೇಸಾಯಿ, ಲಕ್ಷ್ಮಿ ಕಟ್ಟಿ, ಪ್ರೇಮಾ ಪಾಟೀಲ ಇದ್ದರು. ಎಸ್.ಎ.ಭರಮಗೌಡರ ಪ್ರಾಸ್ತಾವಿಕವಾಗಿ ಮಾತನಾಡಿದರು. ಪೂರ್ಣಿಮಾ ಗಂಗಲ ಸ್ವಾಗತಿಸಿದರು. ಪ್ರತಿಭಾ ಚನ್ನಪ್ಪಗೌಡರ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-19-1921923235</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಾದಾಮಿ: ‘ಶಿವಶರಣೆ ಹೇಮರಡ್ಡಿ ಮಲ್ಲಮ್ಮನ ಆದರ್ಶಗಳು ಮನುಕುಲಕ್ಕೆ ಸಾರ್ವಕಾಲಿಕ ಸತ್ಯವಾಗಿವೆ. ಪ್ರತಿಯೊಬ್ಬರು ಮಲ್ಲಮ್ಮಳ ಆದರ್ಶಗಳನ್ನು ಅರಿತುಕೊಂಡು ನಡೆಯಬೇಕು’ ಎಂದು ವಾಣಿಜ್ಯ ತೆರಿಗೆ ಇಲಾಖೆ ನಿವೃತ್ತ ಉಪಾಯುಕ್ತ ಜಿ.ಬಿ.ಗೌಡಪ್ಪಗೋಳ ಹೇಳಿದರು.</p>.<p>ಹೇಮ-ವೇಮ ಚಾರಿಟಬಲ್ ಸಂಸ್ಥೆ ಆಶ್ರಯದಲ್ಲಿ ಭಾನುವಾರ ಶಿವಶರಣೆ ಹೇಮರಡ್ಡಿ ಮಲ್ಲಮ್ಮಳ 604ನೇ ಜಯಂತ್ಯುತ್ಸವ ಸಮಾರಂಭದಲ್ಲಿ ಅವರು ಉಪನ್ಯಾಸ ನೀಡಿದರು.</p>.<p>‘ತಾಳ್ಮೆ, ಸಹನೆ, ಸದಾಚಾರ, ಸಂತೃಪ್ತಿ, ದಾನ ಮತ್ತು ನಿಷ್ಕಲ್ಮಶ ಭಕ್ತಿ ಗುಣಗಳು ಮಲ್ಲಮ್ಮಳ ಬದುಕಿನ ಆಸ್ತಿಯಾಗಿದ್ದವು’ ಎಂದು ತಿಳಿಸಿದರು.</p>.<p>ಇದೇ ಸಂದರ್ಭದಲ್ಲಿ ಸಮಾಜದ ಎಸ್.ಎಸ್.ಎಲ್.ಸಿ, ಪಿಯುಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಮತ್ತು ನಿವೃತ್ತ ನೌಕರರನ್ನು ಸನ್ಮಾನಿಸಲಾಯಿತು. ಶಿಕ್ಷಣ ಇಲಾಖೆಯ ನಿವೃತ್ತ ಡಿಡಿಪಿಐ ಎಚ್.ಜಿ.ಮಿರ್ಜಿ ಮಲ್ಲಮ್ಮಳ ಭಕ್ತಿ ಕುರಿತು ತಿಳಿಸಿದರು.</p>.<p>ಚಾರಿಟಬಲ್ ಸಂಸ್ಥೆಯ ಅಧ್ಯಕ್ಷ ಡಿ.ಎಂ.ಪೈಲ್ ಅಧ್ಯಕ್ಷತೆ ವಹಿಸಿದ್ದರು. ಡಿ.ಪಿ.ಅಮಲಝರಿ, ವಿ.ಎಸ್.ದೇಸಾಯಿ, ಲಕ್ಷ್ಮಿ ಕಟ್ಟಿ, ಪ್ರೇಮಾ ಪಾಟೀಲ ಇದ್ದರು. ಎಸ್.ಎ.ಭರಮಗೌಡರ ಪ್ರಾಸ್ತಾವಿಕವಾಗಿ ಮಾತನಾಡಿದರು. ಪೂರ್ಣಿಮಾ ಗಂಗಲ ಸ್ವಾಗತಿಸಿದರು. ಪ್ರತಿಭಾ ಚನ್ನಪ್ಪಗೌಡರ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-19-1921923235</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>