<p>ಬೈಲಹೊಂಗಲ: ‘ಸನಾತನ ಸಂಸ್ಕಾರ ಮತ್ತು ಮೌಲ್ಯಾಧಾರಿತ ಜೀವನಶೈಲಿಯ ಇಂದಿನ ಅಗತ್ಯವಾಗಿದೆ' ಎಂದು ರುದ್ರಾಕ್ಷಿಮಠದ ಪೀಠಾಧಿಪತಿ ಬಸವಲಿಂಗ ಸ್ವಾಮಿಜಿ ಹೇಳಿದರು.</p>.<p>ತಾಲ್ಲೂಕಿನ ದೊಡವಾಡ ಗ್ರಾಮದ ಜಡಿಸಿದ್ದೇಶ್ವರ ಹಿರೇಮಠದಲ್ಲಿ 40 ದಿನಗಳ ಪರ್ಯಂತ ಹಮ್ಮಿಕೊಳ್ಳಲಾಗಿದ್ದ ವೈದಿಕ ಸಂಸ್ಕಾರ ತರಬೇತಿ ಶಿಬಿರದ ಸಮಾರೋಪ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.</p>.<p>ಮೈಸೂರು ಅರಮನೆ ಜಪದ ಕಟ್ಟೆ ಮಠದ ಚಂದ್ರಶೇಖರ ಸ್ವಾಮೀಜಿ ಮಾತನಾಡಿ, ‘ವೈದಿಕ ಪರಂಪರೆ ನಮ್ಮ ಭಾರತೀಯ ಸಂಸ್ಕೃತಿಯ ಹೆಗ್ಗುರುತು’ ಎಂದರು.</p>.<p>ಬ್ಯಾಹಟ್ಟಿ ಹಿರೇಮಠದ ಮರುಳ ಸಿದ್ದಿ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ‘ಜಂಗಮ ವಟುಗಳು ಕೇವಲ ಪಾಠಗಳನ್ನು ಕಲಿಯುವುದಷ್ಟೇ ಅಲ್ಲ, ಆಚಾರ-ವಿಚಾರಗಳಲ್ಲಿ ಶಿಸ್ತು, ಸೇವಾ ಮನೋಭಾವ ಹಾಗೂ ಧಾರ್ಮಿಕ ನಿಷ್ಠೆಯನ್ನು ಬೆಳೆಸಿಕೊಳ್ಳಬೇಕು’ ಎಂದರು.</p>.<p>ಶಿಬಿರದಲ್ಲಿ ಭಾಗವಹಿಸಿದ ಎಲ್ಲ ವಟುಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು. ಮಠದ ಪುರೋಹಿತ ಬಳಗ ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು. ವಿದ್ವಾನ ಗಂಗಾಧರ ಶಾಸ್ತ್ರಿ, ಮಹಾಂತಯ್ಯ ಶಾಸ್ತ್ರಿ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-21-833152128</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೈಲಹೊಂಗಲ: ‘ಸನಾತನ ಸಂಸ್ಕಾರ ಮತ್ತು ಮೌಲ್ಯಾಧಾರಿತ ಜೀವನಶೈಲಿಯ ಇಂದಿನ ಅಗತ್ಯವಾಗಿದೆ' ಎಂದು ರುದ್ರಾಕ್ಷಿಮಠದ ಪೀಠಾಧಿಪತಿ ಬಸವಲಿಂಗ ಸ್ವಾಮಿಜಿ ಹೇಳಿದರು.</p>.<p>ತಾಲ್ಲೂಕಿನ ದೊಡವಾಡ ಗ್ರಾಮದ ಜಡಿಸಿದ್ದೇಶ್ವರ ಹಿರೇಮಠದಲ್ಲಿ 40 ದಿನಗಳ ಪರ್ಯಂತ ಹಮ್ಮಿಕೊಳ್ಳಲಾಗಿದ್ದ ವೈದಿಕ ಸಂಸ್ಕಾರ ತರಬೇತಿ ಶಿಬಿರದ ಸಮಾರೋಪ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.</p>.<p>ಮೈಸೂರು ಅರಮನೆ ಜಪದ ಕಟ್ಟೆ ಮಠದ ಚಂದ್ರಶೇಖರ ಸ್ವಾಮೀಜಿ ಮಾತನಾಡಿ, ‘ವೈದಿಕ ಪರಂಪರೆ ನಮ್ಮ ಭಾರತೀಯ ಸಂಸ್ಕೃತಿಯ ಹೆಗ್ಗುರುತು’ ಎಂದರು.</p>.<p>ಬ್ಯಾಹಟ್ಟಿ ಹಿರೇಮಠದ ಮರುಳ ಸಿದ್ದಿ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ‘ಜಂಗಮ ವಟುಗಳು ಕೇವಲ ಪಾಠಗಳನ್ನು ಕಲಿಯುವುದಷ್ಟೇ ಅಲ್ಲ, ಆಚಾರ-ವಿಚಾರಗಳಲ್ಲಿ ಶಿಸ್ತು, ಸೇವಾ ಮನೋಭಾವ ಹಾಗೂ ಧಾರ್ಮಿಕ ನಿಷ್ಠೆಯನ್ನು ಬೆಳೆಸಿಕೊಳ್ಳಬೇಕು’ ಎಂದರು.</p>.<p>ಶಿಬಿರದಲ್ಲಿ ಭಾಗವಹಿಸಿದ ಎಲ್ಲ ವಟುಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು. ಮಠದ ಪುರೋಹಿತ ಬಳಗ ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು. ವಿದ್ವಾನ ಗಂಗಾಧರ ಶಾಸ್ತ್ರಿ, ಮಹಾಂತಯ್ಯ ಶಾಸ್ತ್ರಿ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-21-833152128</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>