<p>ಬಳ್ಳಾರಿ: ಲೋಕಕಲ್ಯಾಣಾರ್ಥವಾಗಿ ತಾಲೂಕಿನ ಯಾಳ್ಪಿ ಗ್ರಾಮದಲ್ಲಿ ಪಾಲ್ತೂರು ಕಳಹೊಳ್ಳಿ ಮಠದ ಶ್ರೀ ಚೆನ್ನವೀರ ಶಿವಾಚಾರ್ಯ ಸ್ವಾಮೀಜಿಗಳು ಭಾನುವಾರ 48 ದಿನಗಳ ಮೌನ ಅನುಷ್ಠಾನಕ್ಕೆ ಚಾಲನೆ ನೀಡಿದರು.</p>.<p>ಗ್ರಾಮದ ಮುಖಂಡರಾದ ಮೇಟಿ ಪಂಪನಗೌಡ ಪಾಲ್ತೂರು ಕಳಹೊಳ್ಳಿ ಮಠಕ್ಕೆ ಭಕ್ತಿಯಿಂದ ಜಮೀನನ್ನು ದಾನವಾಗಿ ನೀಡಿದ್ದಾರೆ. ಈ ಭೂಮಿಯಲ್ಲಿಯೇ ಶ್ರೀಗಳು (ಮೇ 17) ಜುಲೈ 5ರವರೆಗೆ ಸುಮಾರು ಒಂದೂವರೆ ತಿಂಗಳ ಕಾಲ ಕಠಿಣ ಮೌನ ಅನುಷ್ಠಾನ ಕೈಗೊಳ್ಳಲಿದ್ದಾರೆ.</p>.<p>ಮೌನ ಅನುಷ್ಠಾನ ಆರಂಭಕ್ಕೂ ಮೊದಲು ಭಾನುವಾರ ಬೆಳಿಗ್ಗೆ ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ಕಲ್ಲೇಶ್ವರ ದೇವಸ್ಥಾನದಲ್ಲಿ ಸ್ವಾಮೀಜಿಗಳ ನೇತೃತ್ವದಲ್ಲಿ ವಿಶೇಷ ರುದ್ರಾಭಿಷೇಕ ಹಾಗೂ ಪೂಜಾ ಕಾರ್ಯಕ್ರಮಗಳು ಜರುಗಿದವು.</p>.<p>ಪೂಜೆಯ ನಂತರ ಕಲ್ಲೇಶ್ವರ ದೇವಸ್ಥಾನದಿಂದ ಸ್ವಾಮೀಜಿಗಳನ್ನು ಮಂಗಲವಾದ್ಯಗಳೊಂದಿಗೆ ಅದ್ಧೂರಿ ಮೆರವಣಿಗೆಯ ಮೂಲಕ ದಾನವಾಗಿ ನೀಡಲಾದ 'ತಪೋನಿಧಿ' ಸ್ಥಳಕ್ಕೆ ಕರೆತರಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-25-980668721</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಳ್ಳಾರಿ: ಲೋಕಕಲ್ಯಾಣಾರ್ಥವಾಗಿ ತಾಲೂಕಿನ ಯಾಳ್ಪಿ ಗ್ರಾಮದಲ್ಲಿ ಪಾಲ್ತೂರು ಕಳಹೊಳ್ಳಿ ಮಠದ ಶ್ರೀ ಚೆನ್ನವೀರ ಶಿವಾಚಾರ್ಯ ಸ್ವಾಮೀಜಿಗಳು ಭಾನುವಾರ 48 ದಿನಗಳ ಮೌನ ಅನುಷ್ಠಾನಕ್ಕೆ ಚಾಲನೆ ನೀಡಿದರು.</p>.<p>ಗ್ರಾಮದ ಮುಖಂಡರಾದ ಮೇಟಿ ಪಂಪನಗೌಡ ಪಾಲ್ತೂರು ಕಳಹೊಳ್ಳಿ ಮಠಕ್ಕೆ ಭಕ್ತಿಯಿಂದ ಜಮೀನನ್ನು ದಾನವಾಗಿ ನೀಡಿದ್ದಾರೆ. ಈ ಭೂಮಿಯಲ್ಲಿಯೇ ಶ್ರೀಗಳು (ಮೇ 17) ಜುಲೈ 5ರವರೆಗೆ ಸುಮಾರು ಒಂದೂವರೆ ತಿಂಗಳ ಕಾಲ ಕಠಿಣ ಮೌನ ಅನುಷ್ಠಾನ ಕೈಗೊಳ್ಳಲಿದ್ದಾರೆ.</p>.<p>ಮೌನ ಅನುಷ್ಠಾನ ಆರಂಭಕ್ಕೂ ಮೊದಲು ಭಾನುವಾರ ಬೆಳಿಗ್ಗೆ ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ಕಲ್ಲೇಶ್ವರ ದೇವಸ್ಥಾನದಲ್ಲಿ ಸ್ವಾಮೀಜಿಗಳ ನೇತೃತ್ವದಲ್ಲಿ ವಿಶೇಷ ರುದ್ರಾಭಿಷೇಕ ಹಾಗೂ ಪೂಜಾ ಕಾರ್ಯಕ್ರಮಗಳು ಜರುಗಿದವು.</p>.<p>ಪೂಜೆಯ ನಂತರ ಕಲ್ಲೇಶ್ವರ ದೇವಸ್ಥಾನದಿಂದ ಸ್ವಾಮೀಜಿಗಳನ್ನು ಮಂಗಲವಾದ್ಯಗಳೊಂದಿಗೆ ಅದ್ಧೂರಿ ಮೆರವಣಿಗೆಯ ಮೂಲಕ ದಾನವಾಗಿ ನೀಡಲಾದ 'ತಪೋನಿಧಿ' ಸ್ಥಳಕ್ಕೆ ಕರೆತರಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-25-980668721</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>