<p>ಭಾಲ್ಕಿ: ‘12ನೇ ಶತಮಾನದಲ್ಲಿ ಬಸವಾದಿ ಶರಣರು ತಮ್ಮ ಅನುಭಾವದ ಮೂಲಕ ರಚಿಸಿರುವ ವಚನಗಳಲ್ಲಿ ನಿಜಜೀವನದ ಅರ್ಥ ಅಡಗಿದೆ’ ಎಂದು ಸ್ತ್ರೀರೋಗ ತಜ್ಞೆ ಡಾ.ಶೈಲಜಾ ಅನಿಲ್ಕುಮಾರ ತಳವಾಡೆ ಹೇಳಿದರು.</p>.<p>ಪಟ್ಟಣದ ಚನ್ನಬಸವಾಶ್ರಮದಲ್ಲಿ ಹಿರೇಮಠ ಸಂಸ್ಥಾನ ಮತ್ತು ಅಭಿನಂದನಾ ಸಮಿತಿ ವತಿಯಿಂದ ಬಸವ ಜಯಂತಿ, ಡಾ.ಚನ್ನಬಸವ ಪಟ್ಟದ್ದೇವರ 27ನೇ ಸ್ಮರಣೋತ್ಸವ, ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ನಿಮಿತ್ತ ಆಯೋಜಿಸಿದ್ದ ಬಸವ ದರ್ಶನ ಪ್ರವಚನ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಅಂತರಂಗ ಶುದ್ಧಿಗೆ ಪ್ರವಚನ ಸಹಕಾರಿಯಾಗಿದೆ. ಬಸವಾದಿ ಶರಣರ ಕುರಿತು ನಡೆಯುವ ಪ್ರವಚನದ ಸಾರವನ್ನು ಆಲಿಸಿ ಜೀವನದಲ್ಲಿ ಅಳವಡಿಸಿಕೊಂಡರೆ ಬದುಕು ಸುಂದರವಾಗಿ ರೂಪಗೊಳ್ಳಲಿದೆ’ ಎಂದು ತಿಳಿಸಿದರು.</p>.<p>ಬಸವ ಗುರುವಿನ ಪೂಜೆ ನೆರವೇರಿಸಿದ ಯುವ ಮುಖಂಡ ಪ್ರಸನ್ನ ಖಂಡ್ರೆ ಮಾತನಾಡಿ, ‘ಪೂಜ್ಯರು, ಅನುಭಾವಿಗಳು ನಡೆಸಿಕೊಡುವ ಪ್ರವಚನಗಳಲ್ಲಿ ಬದುಕಿನ ಮೌಲ್ಯಗಳು ಅಡಗಿರುತ್ತವೆ’ ಎಂದು ತಿಳಿಸಿದರು.</p>.<p>ನೇತೃತ್ವ ವಹಿಸಿದ್ದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಮಾತನಾಡಿ, ‘ಪ್ರವಚನ ಆಲಿಸುವುದರಿಂದ ಮನಸ್ಸು ವಿಕಾಸಗೊಳ್ಳುತ್ತದೆ. ಬದುಕಿನಲ್ಲಿ ಶಾಂತಿ ನೆಮ್ಮದಿ ಲಭಿಸುತ್ತದೆ’ ಎಂದು ತಿಳಿಸಿದರು.</p>.<p>ಹಂದಿಗುಂದ ಸಿದ್ದೇಶ್ವರ ಮಠದ ಶಿವಾನಂದ ಸ್ವಾಮೀಜಿ ಮಾತನಾಡಿ, ‘12ನೇ ಶತಮಾನದಲ್ಲಿ ದುರ್ಬಲ ವರ್ಗ ಮತ್ತು ಸಮಾಜದಲ್ಲಿ ತುಳಿತಕ್ಕೊಳಗಾದವರನ್ನು ಮೇಲೆತ್ತುವ ಕೆಲಸ ಮಾಡಿದ ವಿಶ್ವಗುರು ಬಸವಣ್ಣನವರನ್ನು ಪ್ರತಿಯೊಬ್ಬರೂ ಧರ್ಮಗುರು ಎಂದು ಒಪ್ಪಿಕೊಳ್ಳಬೇಕು’ ಎಂದು ತಿಳಿಸಿದರು.</p>.<p>ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ಸಾನ್ನಿಧ್ಯ ವಹಿಸಿ ಮಾತನಾಡಿದರು.</p>.<p>ಶಾರದಾ ಹೋಟೆಲ್ನ ಮಾಲೀಕರಾದ ಶಾರದಾ ಬಾಬುರಾವ್ ಹುಣಜೆ ಅವರು ಮೊದಲ ದಿನದ ಅನ್ನದಾಸೋಹ ವಹಿಸಿಕೊಂಡಿದ್ದರು.</p>.<p>ಹಿರಿಯ ಮುಖಂಡ ಸುಭಾಷ ಕಾರಾಮುಂಗೆ ಅಧ್ಯಕ್ಷತೆ ವಹಿಸಿದ್ದರು.</p>.<p>ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಜಯರಾಜ ದಾಬಶೆಟ್ಟೆ, ಬಾಬುರಾವ್ ಹುಣಜೆ, ಶಾರದಾ ಹುಣಜೆ ಸೇರಿದಂತೆ ಹಲವರು ಇದ್ದರು.</p>.<p>ಗುರುಪ್ರಸಾದ ಶಾಲೆಯ ಮಕ್ಕಳು ವಚನ ಗಾಯನ ನಡೆಸಿಕೊಟ್ಟರು. ಪ್ರವಚನ ಸೇವಾ ಸಮಿತಿ ಅಧ್ಯಕ್ಷೆ ಪಂಕಜಾ ಶಿವು ಲೋಖಂಡೆ ಸ್ವಾಗತಿಸಿದರು. ದೀಪಕ ಠಮಕೆ ನಿರೂಪಿಸಿದರು. ರೇಖಾ ಮಹಾಜನ್ ವಂದಿಸಿದರು. ಕಲಾವಿದರಾದ ಸಂಗಮೇಶ ಪಾಟೀಲ, ತೋಂಟೇಂದ್ರಕುಮಾರ ಕರಡಕಲ್ ಸಂಗೀತ ಸೇವೆ ನಡೆಸಿಕೊಟ್ಟರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260403-33-910683603</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಭಾಲ್ಕಿ: ‘12ನೇ ಶತಮಾನದಲ್ಲಿ ಬಸವಾದಿ ಶರಣರು ತಮ್ಮ ಅನುಭಾವದ ಮೂಲಕ ರಚಿಸಿರುವ ವಚನಗಳಲ್ಲಿ ನಿಜಜೀವನದ ಅರ್ಥ ಅಡಗಿದೆ’ ಎಂದು ಸ್ತ್ರೀರೋಗ ತಜ್ಞೆ ಡಾ.ಶೈಲಜಾ ಅನಿಲ್ಕುಮಾರ ತಳವಾಡೆ ಹೇಳಿದರು.</p>.<p>ಪಟ್ಟಣದ ಚನ್ನಬಸವಾಶ್ರಮದಲ್ಲಿ ಹಿರೇಮಠ ಸಂಸ್ಥಾನ ಮತ್ತು ಅಭಿನಂದನಾ ಸಮಿತಿ ವತಿಯಿಂದ ಬಸವ ಜಯಂತಿ, ಡಾ.ಚನ್ನಬಸವ ಪಟ್ಟದ್ದೇವರ 27ನೇ ಸ್ಮರಣೋತ್ಸವ, ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ನಿಮಿತ್ತ ಆಯೋಜಿಸಿದ್ದ ಬಸವ ದರ್ಶನ ಪ್ರವಚನ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಅಂತರಂಗ ಶುದ್ಧಿಗೆ ಪ್ರವಚನ ಸಹಕಾರಿಯಾಗಿದೆ. ಬಸವಾದಿ ಶರಣರ ಕುರಿತು ನಡೆಯುವ ಪ್ರವಚನದ ಸಾರವನ್ನು ಆಲಿಸಿ ಜೀವನದಲ್ಲಿ ಅಳವಡಿಸಿಕೊಂಡರೆ ಬದುಕು ಸುಂದರವಾಗಿ ರೂಪಗೊಳ್ಳಲಿದೆ’ ಎಂದು ತಿಳಿಸಿದರು.</p>.<p>ಬಸವ ಗುರುವಿನ ಪೂಜೆ ನೆರವೇರಿಸಿದ ಯುವ ಮುಖಂಡ ಪ್ರಸನ್ನ ಖಂಡ್ರೆ ಮಾತನಾಡಿ, ‘ಪೂಜ್ಯರು, ಅನುಭಾವಿಗಳು ನಡೆಸಿಕೊಡುವ ಪ್ರವಚನಗಳಲ್ಲಿ ಬದುಕಿನ ಮೌಲ್ಯಗಳು ಅಡಗಿರುತ್ತವೆ’ ಎಂದು ತಿಳಿಸಿದರು.</p>.<p>ನೇತೃತ್ವ ವಹಿಸಿದ್ದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಮಾತನಾಡಿ, ‘ಪ್ರವಚನ ಆಲಿಸುವುದರಿಂದ ಮನಸ್ಸು ವಿಕಾಸಗೊಳ್ಳುತ್ತದೆ. ಬದುಕಿನಲ್ಲಿ ಶಾಂತಿ ನೆಮ್ಮದಿ ಲಭಿಸುತ್ತದೆ’ ಎಂದು ತಿಳಿಸಿದರು.</p>.<p>ಹಂದಿಗುಂದ ಸಿದ್ದೇಶ್ವರ ಮಠದ ಶಿವಾನಂದ ಸ್ವಾಮೀಜಿ ಮಾತನಾಡಿ, ‘12ನೇ ಶತಮಾನದಲ್ಲಿ ದುರ್ಬಲ ವರ್ಗ ಮತ್ತು ಸಮಾಜದಲ್ಲಿ ತುಳಿತಕ್ಕೊಳಗಾದವರನ್ನು ಮೇಲೆತ್ತುವ ಕೆಲಸ ಮಾಡಿದ ವಿಶ್ವಗುರು ಬಸವಣ್ಣನವರನ್ನು ಪ್ರತಿಯೊಬ್ಬರೂ ಧರ್ಮಗುರು ಎಂದು ಒಪ್ಪಿಕೊಳ್ಳಬೇಕು’ ಎಂದು ತಿಳಿಸಿದರು.</p>.<p>ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ಸಾನ್ನಿಧ್ಯ ವಹಿಸಿ ಮಾತನಾಡಿದರು.</p>.<p>ಶಾರದಾ ಹೋಟೆಲ್ನ ಮಾಲೀಕರಾದ ಶಾರದಾ ಬಾಬುರಾವ್ ಹುಣಜೆ ಅವರು ಮೊದಲ ದಿನದ ಅನ್ನದಾಸೋಹ ವಹಿಸಿಕೊಂಡಿದ್ದರು.</p>.<p>ಹಿರಿಯ ಮುಖಂಡ ಸುಭಾಷ ಕಾರಾಮುಂಗೆ ಅಧ್ಯಕ್ಷತೆ ವಹಿಸಿದ್ದರು.</p>.<p>ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಜಯರಾಜ ದಾಬಶೆಟ್ಟೆ, ಬಾಬುರಾವ್ ಹುಣಜೆ, ಶಾರದಾ ಹುಣಜೆ ಸೇರಿದಂತೆ ಹಲವರು ಇದ್ದರು.</p>.<p>ಗುರುಪ್ರಸಾದ ಶಾಲೆಯ ಮಕ್ಕಳು ವಚನ ಗಾಯನ ನಡೆಸಿಕೊಟ್ಟರು. ಪ್ರವಚನ ಸೇವಾ ಸಮಿತಿ ಅಧ್ಯಕ್ಷೆ ಪಂಕಜಾ ಶಿವು ಲೋಖಂಡೆ ಸ್ವಾಗತಿಸಿದರು. ದೀಪಕ ಠಮಕೆ ನಿರೂಪಿಸಿದರು. ರೇಖಾ ಮಹಾಜನ್ ವಂದಿಸಿದರು. ಕಲಾವಿದರಾದ ಸಂಗಮೇಶ ಪಾಟೀಲ, ತೋಂಟೇಂದ್ರಕುಮಾರ ಕರಡಕಲ್ ಸಂಗೀತ ಸೇವೆ ನಡೆಸಿಕೊಟ್ಟರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260403-33-910683603</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>