<p>ಬೀದರ್: ‘ಬಸವಣ್ಣನವರು ಕಾಯಕ ಮಾಡುವುದರ ಮೂಲಕ ಸ್ವಾವಲಂಬಿ ಜೀವನ ನಡೆಸಬೇಕೆಂದು ಹೇಳಿದ್ದಾರೆ. ಅದರಂತೆ ನಾವೆಲ್ಲರೂ ಬದುಕು ಸವೆಸಬೇಕು’ ಎಂದು ಜಹೀರಾಬಾದ್ ತಾಲ್ಲೂಕಿನ ಮಲ್ಲಯ್ಯಗಿರಿ ಹಾಗೂ ಬಸವಕಲ್ಯಾಣ ಆಶ್ರಮದ ಪೀಠಾಧಿಪತಿ ಬಸವಲಿಂಗ ಅವಧೂತರು ತಿಳಿಸಿದರು.</p>.<p>ನಗರದ ಅಲ್ಲಮಪ್ರಭು ಬಡವಾಣೆಯಲ್ಲಿ ಏರ್ಪಡಿಸಿದ್ದ ಬಸವ ಜಯಂತಿ ಹಾಗೂ ಪ್ರವಚನ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.</p>.<p>‘12ನೇ ಶತಮಾನದಲ್ಲಿ ಬಸವಾದಿ ಶರಣರು ಸಮ ಸಮಾಜ ನಿರ್ಮಿಸಿದರು. ವಚನಗಳ ಮೂಲಕ ಸಮಾಜದಲ್ಲಿನ ಅಂಕು ಡೊಂಕು ತಿದ್ದಿದರು’ ಎಂದು ಹೇಳಿದರು.</p>.<p>‘ಬಸವಣ್ಣ, ಅಕ್ಕಮಹಾದೇವಿ ಸೇರಿದಂತೆ ಶರಣರ ಜೀನವ ಸಾಧನೆ ಪುಸ್ತಕಗಳನ್ನು ಓದಿ ಪ್ರೇರಣೆ ಪಡೆದು ಅವರು ಹಾಕಿ ಕೊಟ್ಟ ಮಾರ್ಗದಲ್ಲಿ ನಡೆಯಬೇಕು’ ಎಂದು ತಿಳಿಸಿದರು.</p>.<p>ಬಡಾವಣೆಯ ಪ್ರಮುಖರಾದ ಸಮಿತಿಯ ಅಧ್ಯಕ್ಷ ವೀರಶೆಟ್ಟಿ ಗಣಾಪುರ, ಕಾರ್ಯದರ್ಶಿ ವಿಜಯಕುಮಾರ ಬಿರಾದರ ಗಣಪತಿ ಗುಡ್ರೆ, ಮಲ್ಲಯ್ಯ ಸ್ವಾಮಿ, ಶಿವಕುಮಾರ ಕೊತ್ತಮೂರೆ, ವೀರಣ್ಣ ತಲಾಟಿ, ಶಶಿ ಹೊಸದೊಡ್ಡಿ, ನಿವೃತ್ತ ಶಿಕ್ಷಣಾಧಿಕಾರಿ ಶಿವಕುಮಾರ ಸ್ವಾಮಿ, ನಿವೃತ್ತ ಶಿಕಕ್ಷ ಶಂಕರರಾವ್ ಸಜ್ಜನಶೆಟ್ಟಿ, ಮಲ್ಲೇಶ ಗಣಾಪುರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260429-33-135963266</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀದರ್: ‘ಬಸವಣ್ಣನವರು ಕಾಯಕ ಮಾಡುವುದರ ಮೂಲಕ ಸ್ವಾವಲಂಬಿ ಜೀವನ ನಡೆಸಬೇಕೆಂದು ಹೇಳಿದ್ದಾರೆ. ಅದರಂತೆ ನಾವೆಲ್ಲರೂ ಬದುಕು ಸವೆಸಬೇಕು’ ಎಂದು ಜಹೀರಾಬಾದ್ ತಾಲ್ಲೂಕಿನ ಮಲ್ಲಯ್ಯಗಿರಿ ಹಾಗೂ ಬಸವಕಲ್ಯಾಣ ಆಶ್ರಮದ ಪೀಠಾಧಿಪತಿ ಬಸವಲಿಂಗ ಅವಧೂತರು ತಿಳಿಸಿದರು.</p>.<p>ನಗರದ ಅಲ್ಲಮಪ್ರಭು ಬಡವಾಣೆಯಲ್ಲಿ ಏರ್ಪಡಿಸಿದ್ದ ಬಸವ ಜಯಂತಿ ಹಾಗೂ ಪ್ರವಚನ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.</p>.<p>‘12ನೇ ಶತಮಾನದಲ್ಲಿ ಬಸವಾದಿ ಶರಣರು ಸಮ ಸಮಾಜ ನಿರ್ಮಿಸಿದರು. ವಚನಗಳ ಮೂಲಕ ಸಮಾಜದಲ್ಲಿನ ಅಂಕು ಡೊಂಕು ತಿದ್ದಿದರು’ ಎಂದು ಹೇಳಿದರು.</p>.<p>‘ಬಸವಣ್ಣ, ಅಕ್ಕಮಹಾದೇವಿ ಸೇರಿದಂತೆ ಶರಣರ ಜೀನವ ಸಾಧನೆ ಪುಸ್ತಕಗಳನ್ನು ಓದಿ ಪ್ರೇರಣೆ ಪಡೆದು ಅವರು ಹಾಕಿ ಕೊಟ್ಟ ಮಾರ್ಗದಲ್ಲಿ ನಡೆಯಬೇಕು’ ಎಂದು ತಿಳಿಸಿದರು.</p>.<p>ಬಡಾವಣೆಯ ಪ್ರಮುಖರಾದ ಸಮಿತಿಯ ಅಧ್ಯಕ್ಷ ವೀರಶೆಟ್ಟಿ ಗಣಾಪುರ, ಕಾರ್ಯದರ್ಶಿ ವಿಜಯಕುಮಾರ ಬಿರಾದರ ಗಣಪತಿ ಗುಡ್ರೆ, ಮಲ್ಲಯ್ಯ ಸ್ವಾಮಿ, ಶಿವಕುಮಾರ ಕೊತ್ತಮೂರೆ, ವೀರಣ್ಣ ತಲಾಟಿ, ಶಶಿ ಹೊಸದೊಡ್ಡಿ, ನಿವೃತ್ತ ಶಿಕ್ಷಣಾಧಿಕಾರಿ ಶಿವಕುಮಾರ ಸ್ವಾಮಿ, ನಿವೃತ್ತ ಶಿಕಕ್ಷ ಶಂಕರರಾವ್ ಸಜ್ಜನಶೆಟ್ಟಿ, ಮಲ್ಲೇಶ ಗಣಾಪುರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260429-33-135963266</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>