<p>ಬ್ರಹ್ಮಾವರ: ಪಾಕಿಸ್ತಾನದ ಗಡಿಯಲ್ಲಿದ್ರೂ ಅಪ್ಪ ಉಪದೇಶಿಸಿದ ಹತ್ತು ಗಾಯತ್ರಿ ಮಂತ್ರ ಪಠಿಸಿದರೆ ಮಾತ್ರ ಸಮಾಧಾನವಾಗುತ್ತಿತ್ತು ಎಂದು ನಿವೃತ್ತ ಸೈನಿಕ ಬೈಂದೂರು ಚಂದ್ರಶೇಖರ ನಾವಡ ಹೇಳಿದರು.</p>.<p>ಸಾಲಿಗ್ರಾಮದ ಶ್ರೀಗುರುನರಸಿಂಹ ದೇವಸ್ಥಾನದಲ್ಲಿ ನಡೆದ ವಸಂತ ವೇದ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ನಮಗೆ ಬಾಲ್ಯದಲ್ಲಿ ಸಂಧ್ಯಾವಂದನೆ, ಸಂಜೆ ಭಜನೆ ಮೊದಲಾದ ಸಂಸ್ಕಾರಗಳು ಹೇಳಿಕೊಡುತ್ತಿದ್ದರು. ಈಗ ಬೇರೆಯವರು ಅಪಹಾಸ್ಯ ಮಾಡುತ್ತಾರೆ, ಮೊದಲಾದ ಕಾರಣಗಳಿಗೆ ಈ ಸಂಸ್ಕಾರಗಳಿಂದ ವಿಮುಖರಾಗುತ್ತಿದ್ದಾರೆ ಎಂದರು.</p>.<p>ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಪ್ರಕಾಶ್ ಕಾರಂತ್ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯದರ್ಶಿ ಪರಶುರಾಮ ಭಟ್ ವಿದ್ಯಾರ್ಥಿಗಳಿಗೆ ಶಿಬಿರದ ನಿಯಮಗಳ ಬಗ್ಗೆ ಮಾಹಿತಿ ನೀಡಿದರು.</p>.<p>ಆಡಳಿತ ಮಂಡಳಿ ಉಪಾಧ್ಯಕ್ಷ ಚಂದ್ರಶೇಖರ ಉಪಾಧ್ಯ, ಸದಸ್ಯರಾದ ತಾರಾನಾಥ ಹೊಳ್ಳ, ಜಗದೀಶ್ ಕಾರಂತ, ಕೇಂದ್ರೀಯ ಸಂಘಟನಾ ಕಾರ್ಯದರ್ಶಿ ಶ್ರೀಪತಿ ಅಧಿಕಾರಿ ಇದ್ದರು. ಅಖಿಲೇಶ್ ನಿರೂಪಿಸಿದರು. ನಾಗರಾಜ್ ಹಂದೆ ಸ್ವಾಗತಿಸಿದರು. ಪಿ.ಸಿ ಹೊಳ್ಳ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260419-28-1633642336</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬ್ರಹ್ಮಾವರ: ಪಾಕಿಸ್ತಾನದ ಗಡಿಯಲ್ಲಿದ್ರೂ ಅಪ್ಪ ಉಪದೇಶಿಸಿದ ಹತ್ತು ಗಾಯತ್ರಿ ಮಂತ್ರ ಪಠಿಸಿದರೆ ಮಾತ್ರ ಸಮಾಧಾನವಾಗುತ್ತಿತ್ತು ಎಂದು ನಿವೃತ್ತ ಸೈನಿಕ ಬೈಂದೂರು ಚಂದ್ರಶೇಖರ ನಾವಡ ಹೇಳಿದರು.</p>.<p>ಸಾಲಿಗ್ರಾಮದ ಶ್ರೀಗುರುನರಸಿಂಹ ದೇವಸ್ಥಾನದಲ್ಲಿ ನಡೆದ ವಸಂತ ವೇದ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ನಮಗೆ ಬಾಲ್ಯದಲ್ಲಿ ಸಂಧ್ಯಾವಂದನೆ, ಸಂಜೆ ಭಜನೆ ಮೊದಲಾದ ಸಂಸ್ಕಾರಗಳು ಹೇಳಿಕೊಡುತ್ತಿದ್ದರು. ಈಗ ಬೇರೆಯವರು ಅಪಹಾಸ್ಯ ಮಾಡುತ್ತಾರೆ, ಮೊದಲಾದ ಕಾರಣಗಳಿಗೆ ಈ ಸಂಸ್ಕಾರಗಳಿಂದ ವಿಮುಖರಾಗುತ್ತಿದ್ದಾರೆ ಎಂದರು.</p>.<p>ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಪ್ರಕಾಶ್ ಕಾರಂತ್ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯದರ್ಶಿ ಪರಶುರಾಮ ಭಟ್ ವಿದ್ಯಾರ್ಥಿಗಳಿಗೆ ಶಿಬಿರದ ನಿಯಮಗಳ ಬಗ್ಗೆ ಮಾಹಿತಿ ನೀಡಿದರು.</p>.<p>ಆಡಳಿತ ಮಂಡಳಿ ಉಪಾಧ್ಯಕ್ಷ ಚಂದ್ರಶೇಖರ ಉಪಾಧ್ಯ, ಸದಸ್ಯರಾದ ತಾರಾನಾಥ ಹೊಳ್ಳ, ಜಗದೀಶ್ ಕಾರಂತ, ಕೇಂದ್ರೀಯ ಸಂಘಟನಾ ಕಾರ್ಯದರ್ಶಿ ಶ್ರೀಪತಿ ಅಧಿಕಾರಿ ಇದ್ದರು. ಅಖಿಲೇಶ್ ನಿರೂಪಿಸಿದರು. ನಾಗರಾಜ್ ಹಂದೆ ಸ್ವಾಗತಿಸಿದರು. ಪಿ.ಸಿ ಹೊಳ್ಳ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260419-28-1633642336</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>