<p>ಚಡಚಣ: ‘ಪರೋಪಕಾರವೇ ಮಾನವ ಜೀವನದ ಉನ್ನತಿಗೆ ರಹದಾರಿ. ಅದುವೇ ನಿಜವಾದ ಧರ್ಮ. ತಾನು ಎಲ್ಲರಿಗಾಗಿ ಅನ್ನುವುದೇ ಧರ್ಮ ಮಾರ್ಗ’ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ಪ್ರಸನ್ನ ರೇಣುಕ ವೀರಸೋಮೇಶ್ವರ ಶಿವಾಚಾರ್ಯ ಶ್ರೀ ಹೇಳಿದರು.</p>.<p>ಸಮೀಪದ ಹಾವಿನಾಳ ಗ್ರಾಮದ ಚರಮೂರ್ತಿ ಮಠದ ಪೀಠಾಧ್ಯಕ್ಷ ಗುರು ವಿಜಯಮಹಾಂತೇಶ್ವರ ಶಿವಾಚಾರ್ಯರ ದ್ವಾದಶ ಪಟ್ಟಾಧಿಕಾರ ವರ್ಧಂತಿ ಮಹೋತ್ಸವ, ತುಲಾಭಾರ ಮತ್ತು ಪುರಾಣ ಮಹಾಮಂಗಲ ಸಮಾರಂಭದ ಅಂಗವಾಗಿ ಬುಧವಾರ ನಡೆದ ಅಡ್ಡಪಲ್ಲಕ್ಕಿ ಮಹೋತ್ಸವ, ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.</p>.<p>‘ಭಾರತ ಭೂಮಿಯಲ್ಲಿನ ಎಲ್ಲ ಧರ್ಮಗಳು ಮಾನವೀಯ ಮೌಲ್ಯಗಳನ್ನು ಸರಿದಾರಿಯಲ್ಲಿರಿಸಿ ಜನಮನಕ್ಕೆ ಬೆಳಕನ್ನು ನೀಡಿ ಉದ್ಧರಿಸಿವೆ. ಮಾನವ ಧರ್ಮ ಪರಿಪಾಲನೆಯಿಂದ ಎಲ್ಲ ಧರ್ಮಗಳು ಉಳಿದು ಬೆಳೆಯಲು ಸಾಧ್ಯ’ ಎಂದು ಹೇಳಿದರು.</p>.<p>ಚರಮೂರ್ತಿ ಮಠದಲ್ಲಿ ಗುರುಕುಲ ತೆರೆದರೆ ಬಾಳೆಹೊನ್ನೂರಿನ ರಂಭಾಪುರಿ ಪೀಠದಿಂದ ₹1 ಲಕ್ಷ ನೀಡುವುದಾಗಿ ಅವರು ಘೋಷಣೆ ಮಾಡಿದರು.</p>.<p>ವಿಜಯಮಹಾಂತೇಶ್ವರ ಶಿವಾಚಾರ್ಯರು ನೇತೃತ್ವ ವಹಿಸಿದ್ದರು. ಚಿಟಗುಪ್ಪಾದ ಗುರುಲಿಂಗ ಶಿವಾಚಾರ್ಯ, ಹಿರೂರ-ತಾಳಿಕೋಟ ಹಿರೇಮಠದ ಜಯಸಿದ್ಧೇಶ್ವರ ಶೀವಾಚಾರ್ಯ, ಆಲಮೇಲದ ಚಂದ್ರಶೇಖರ ಶಿವಾಚಾರ್ಯ, ತಡವಲಗಾದ ರಾಚೋಟೇಶ್ವರ ಶಿವಾಚಾರ್ಯ, ರಾಣೆಬೆನ್ನೂರಿನ ಶಿವಯೋಗಿ ಶಿವಾಚಾರ್ಯ, ಗುಡ್ಡಾಪೂರದ ಗುರುಪಾದ ಶಿವಾಚಾರ್ಯ ಆಶೀರ್ವಚನ ನೀಡಿದರು.</p>.<p>ಧರ್ಮ ಸಭೆಗೂ ಮುನ್ನ ಬಾಳೆಹೊನ್ನೂರು ರಂಭಾಪುರಿ ಪೀಠದ ಜಗದ್ಗುರು ಪ್ರಸನ್ನ ರೇಣುಕ ವೀರಸೋಮೇಶ್ವರ ಶಿವಾಚಾರ್ಯರ ಅಡ್ಡ ಪಲ್ಲಕ್ಕಿಮಹೋತ್ಸವ ಗ್ರಾಮದ ಪ್ರಮುಖ ಬೀದಿಗಳಲ್ಲಿ ಜರುಗಿತು. ಕಲಶ ಹೊತ್ತ ಮಹಿಳೆಯರು, ವಾದ್ಯಮೇಳ ಕಲಾ ತಂಡದವರು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260522-26-1652553970</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಡಚಣ: ‘ಪರೋಪಕಾರವೇ ಮಾನವ ಜೀವನದ ಉನ್ನತಿಗೆ ರಹದಾರಿ. ಅದುವೇ ನಿಜವಾದ ಧರ್ಮ. ತಾನು ಎಲ್ಲರಿಗಾಗಿ ಅನ್ನುವುದೇ ಧರ್ಮ ಮಾರ್ಗ’ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ಪ್ರಸನ್ನ ರೇಣುಕ ವೀರಸೋಮೇಶ್ವರ ಶಿವಾಚಾರ್ಯ ಶ್ರೀ ಹೇಳಿದರು.</p>.<p>ಸಮೀಪದ ಹಾವಿನಾಳ ಗ್ರಾಮದ ಚರಮೂರ್ತಿ ಮಠದ ಪೀಠಾಧ್ಯಕ್ಷ ಗುರು ವಿಜಯಮಹಾಂತೇಶ್ವರ ಶಿವಾಚಾರ್ಯರ ದ್ವಾದಶ ಪಟ್ಟಾಧಿಕಾರ ವರ್ಧಂತಿ ಮಹೋತ್ಸವ, ತುಲಾಭಾರ ಮತ್ತು ಪುರಾಣ ಮಹಾಮಂಗಲ ಸಮಾರಂಭದ ಅಂಗವಾಗಿ ಬುಧವಾರ ನಡೆದ ಅಡ್ಡಪಲ್ಲಕ್ಕಿ ಮಹೋತ್ಸವ, ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.</p>.<p>‘ಭಾರತ ಭೂಮಿಯಲ್ಲಿನ ಎಲ್ಲ ಧರ್ಮಗಳು ಮಾನವೀಯ ಮೌಲ್ಯಗಳನ್ನು ಸರಿದಾರಿಯಲ್ಲಿರಿಸಿ ಜನಮನಕ್ಕೆ ಬೆಳಕನ್ನು ನೀಡಿ ಉದ್ಧರಿಸಿವೆ. ಮಾನವ ಧರ್ಮ ಪರಿಪಾಲನೆಯಿಂದ ಎಲ್ಲ ಧರ್ಮಗಳು ಉಳಿದು ಬೆಳೆಯಲು ಸಾಧ್ಯ’ ಎಂದು ಹೇಳಿದರು.</p>.<p>ಚರಮೂರ್ತಿ ಮಠದಲ್ಲಿ ಗುರುಕುಲ ತೆರೆದರೆ ಬಾಳೆಹೊನ್ನೂರಿನ ರಂಭಾಪುರಿ ಪೀಠದಿಂದ ₹1 ಲಕ್ಷ ನೀಡುವುದಾಗಿ ಅವರು ಘೋಷಣೆ ಮಾಡಿದರು.</p>.<p>ವಿಜಯಮಹಾಂತೇಶ್ವರ ಶಿವಾಚಾರ್ಯರು ನೇತೃತ್ವ ವಹಿಸಿದ್ದರು. ಚಿಟಗುಪ್ಪಾದ ಗುರುಲಿಂಗ ಶಿವಾಚಾರ್ಯ, ಹಿರೂರ-ತಾಳಿಕೋಟ ಹಿರೇಮಠದ ಜಯಸಿದ್ಧೇಶ್ವರ ಶೀವಾಚಾರ್ಯ, ಆಲಮೇಲದ ಚಂದ್ರಶೇಖರ ಶಿವಾಚಾರ್ಯ, ತಡವಲಗಾದ ರಾಚೋಟೇಶ್ವರ ಶಿವಾಚಾರ್ಯ, ರಾಣೆಬೆನ್ನೂರಿನ ಶಿವಯೋಗಿ ಶಿವಾಚಾರ್ಯ, ಗುಡ್ಡಾಪೂರದ ಗುರುಪಾದ ಶಿವಾಚಾರ್ಯ ಆಶೀರ್ವಚನ ನೀಡಿದರು.</p>.<p>ಧರ್ಮ ಸಭೆಗೂ ಮುನ್ನ ಬಾಳೆಹೊನ್ನೂರು ರಂಭಾಪುರಿ ಪೀಠದ ಜಗದ್ಗುರು ಪ್ರಸನ್ನ ರೇಣುಕ ವೀರಸೋಮೇಶ್ವರ ಶಿವಾಚಾರ್ಯರ ಅಡ್ಡ ಪಲ್ಲಕ್ಕಿಮಹೋತ್ಸವ ಗ್ರಾಮದ ಪ್ರಮುಖ ಬೀದಿಗಳಲ್ಲಿ ಜರುಗಿತು. ಕಲಶ ಹೊತ್ತ ಮಹಿಳೆಯರು, ವಾದ್ಯಮೇಳ ಕಲಾ ತಂಡದವರು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260522-26-1652553970</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>