<p>ಸಂತೇಮರಹಳ್ಳಿ: ಸಮೀಪದ ಕುದೇರು ಗ್ರಾಮದ ಡಾ. ಬಿ.ಆರ್.ಅಂಬೇಡ್ಕರ್ ಸೇವಾ ಸಂಘದಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ದಿನವನ್ನು ಈಚೆಗೆ ಆಚರಿಸಲಾಯಿತು.</p>.<p>ಗ್ರಾಮದ ಸಂಘದ ಆವರಣದಲ್ಲಿ ಬೆಳ್ಳಿರಥ ಹಾಗೂ ಎತ್ತಿನ ಗಾಡಿಯಲ್ಲಿ ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಗಳನ್ನು ಇಟ್ಟು ವಿವಿಧ ಬಗೆಯ ಹೂಗಳಿಂದ ಅಲಂಕರಿಸಲಾಗಿತ್ತು. ಗ್ರಾಮದ ಮುಖ್ಯ ರಸ್ತೆಯಲ್ಲಿ ಬ್ಯಾಂಡ್ಸೆಟ್, ವಾದ್ಯಮೇಳಗಳು ಹಾಗೂ ಕಲಾತಂಡಗಳ ಮೂಲಕ ಮೆರವಣಿಗೆ ಮಾಡಲಾಯಿತು.</p>.<p>ಮೆರವಣಿಗೆ ಸಾಗುವ ದಾರಿಯುದ್ದಕ್ಕೂ ಮಹಿಳೆಯರು ಬಣ್ಣದ ರಂಗೋಲಿ ಹಾಕಿ ಸ್ವಾಗತ ಕೋರಿ ಸರತಿ ಸಾಲಿನಲ್ಲಿ ನಿಂತು ಪುಷ್ಪನಮನ ಸಲ್ಲಿಸುವ ಮೂಲಕ ದರ್ಶನ ಪಡೆದರು.</p>.<p>ಗ್ರಾಮದ ಪ್ರಮುಖ ಬೀದಿಗಳನ್ನು ತಳಿರು ತೊರಣ ಹಾಗೂ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಜಯಂತಿ ನಿಮಿತ್ತ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಅನ್ನಸಂತರ್ಪಣೆ ನಡೆಯಿತು.</p>.<p>ಮೆರವಣಿಗೆಯಲ್ಲಿ ಸಂಘದ ಪದಾಧಿಕಾರಿಗಳು, ಯಜಮಾನರು, ಗ್ರಾಮ ಪಂಚಾಯಿತಿ ಮಾಜಿ ಸದಸ್ಯರು ಸೇರಿದಂತೆ ಗ್ರಾಮಸ್ಥರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260418-37-1658929807</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಂತೇಮರಹಳ್ಳಿ: ಸಮೀಪದ ಕುದೇರು ಗ್ರಾಮದ ಡಾ. ಬಿ.ಆರ್.ಅಂಬೇಡ್ಕರ್ ಸೇವಾ ಸಂಘದಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ದಿನವನ್ನು ಈಚೆಗೆ ಆಚರಿಸಲಾಯಿತು.</p>.<p>ಗ್ರಾಮದ ಸಂಘದ ಆವರಣದಲ್ಲಿ ಬೆಳ್ಳಿರಥ ಹಾಗೂ ಎತ್ತಿನ ಗಾಡಿಯಲ್ಲಿ ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಗಳನ್ನು ಇಟ್ಟು ವಿವಿಧ ಬಗೆಯ ಹೂಗಳಿಂದ ಅಲಂಕರಿಸಲಾಗಿತ್ತು. ಗ್ರಾಮದ ಮುಖ್ಯ ರಸ್ತೆಯಲ್ಲಿ ಬ್ಯಾಂಡ್ಸೆಟ್, ವಾದ್ಯಮೇಳಗಳು ಹಾಗೂ ಕಲಾತಂಡಗಳ ಮೂಲಕ ಮೆರವಣಿಗೆ ಮಾಡಲಾಯಿತು.</p>.<p>ಮೆರವಣಿಗೆ ಸಾಗುವ ದಾರಿಯುದ್ದಕ್ಕೂ ಮಹಿಳೆಯರು ಬಣ್ಣದ ರಂಗೋಲಿ ಹಾಕಿ ಸ್ವಾಗತ ಕೋರಿ ಸರತಿ ಸಾಲಿನಲ್ಲಿ ನಿಂತು ಪುಷ್ಪನಮನ ಸಲ್ಲಿಸುವ ಮೂಲಕ ದರ್ಶನ ಪಡೆದರು.</p>.<p>ಗ್ರಾಮದ ಪ್ರಮುಖ ಬೀದಿಗಳನ್ನು ತಳಿರು ತೊರಣ ಹಾಗೂ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಜಯಂತಿ ನಿಮಿತ್ತ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಅನ್ನಸಂತರ್ಪಣೆ ನಡೆಯಿತು.</p>.<p>ಮೆರವಣಿಗೆಯಲ್ಲಿ ಸಂಘದ ಪದಾಧಿಕಾರಿಗಳು, ಯಜಮಾನರು, ಗ್ರಾಮ ಪಂಚಾಯಿತಿ ಮಾಜಿ ಸದಸ್ಯರು ಸೇರಿದಂತೆ ಗ್ರಾಮಸ್ಥರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260418-37-1658929807</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>