<p>ಚಾಮರಾಜನಗರ: ಬುದ್ಧ ಧಮ್ಮ ಹಾಗೂ ಡಾ. ಬಿ.ಆರ್.ಅಂಬೇಡ್ಕರ್ ವಿಚಾರಧಾರೆಗಳು ನಾಣ್ಯದ ಎರಡು ಮುಖಗಳಿದ್ದಂತೆ. ಬುದ್ಧರು ಶೀಲ, ಸಮಾಧಿ, ಪ್ರಜ್ಞೆ ತತ್ವಗಳನ್ನು ಪ್ರತಿಪಾದಿಸಿದರೆ, ಅಂಬೇಡ್ಕರ್ ಶಿಕ್ಷಣ, ಸಂಘಟನೆ, ಹೋರಾಟ ಸಿದ್ದಾಂತಗಳನ್ನು ಪ್ರತಿಪಾದನೆ ಮಾಡಿದರು ಎಂದು ಮೈಸೂರು ಕೆ.ಆರ್.ಆಸ್ಪತ್ರೆಯ ತಜ್ಞ ವೈದ್ಯ ಡಾ.ಡಿ.ಜಗನ್ನಾಥ್ ಹೇಳಿದರು.</p>.<p>ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ ಅಂಗವಾಗಿ ನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಚಾರ ಸಂಕಿರಣದ ಗೋಷ್ಠಿಯಲ್ಲಿ ಅವರು ಮಾತನಾಡಿದರು.</p>.<p>ಇಬ್ಬರ ತತ್ವ–ಸಿದ್ಧಾಂತಗಳಿಗೂ ಸಾಮ್ಯತೆ ಇದ್ದು, ನೈತಿಕ ಮೌಲ್ಯಗಳನ್ನು ರೂಢಿಸಿಕೊಳ್ಳುವುದೇ ನಿಜವಾದ ಶಿಕ್ಷಣವಾಗಿದೆ. ಶೀಲವಿಲ್ಲದ ಶಿಕ್ಷಣ ವ್ಯರ್ಥವಾಗಿದ್ದು, ಪ್ರಜ್ಞಾವಂತರು ಹೋರಾಟ ರೂಪಿಸಿ ಜನರನ್ನು ಅಜ್ಞಾನದ ಕೂಪದಿಂದ ಹೊರಬರು ವಂತೆ ಪ್ರೇರೇಪಿಸಬೇಕು ಎಂದರು</p>.<p>ಬುದ್ಧನ ಪಂಚಶೀಲ ತತ್ವಗಳನ್ನು ಎಲ್ಲರೂ ಅನುಸರಿಸಬೇಕು, ದೇಹ ಮತ್ತು ಮನಸ್ಸು ನಿಯಂತ್ರಣದಲ್ಲಿರಬೇಕು, ಬುದ್ಧನ ಚಿಂತನೆಗಳು ಸಾಮಾಜಿಕ ಸಾಮರಸ್ಯಕ್ಕೆ ಕಾರಣವಾಗಲಿವೆ. ಅಂಬೇಡ್ಕರ್ ಚಿಂತನೆಗಳಲ್ಲಿ ಸಾಮಾಜಿಕ ನ್ಯಾಯ ಪ್ರಧಾನವಾಗಿದೆ. ಬುದ್ಧ ಹಾಗೂ ಅಂಬೇಡ್ಕರ್ ಚಿಂತನೆಗಳು ಸ್ವಸ್ಥ ಸಮಾಜ ನಿರ್ಮಾಣ ಮಾಡಲು ದಾರಿದೀಪವಾಗಿವೆ ಎಂದು ತಿಳಿಸಿದರು.</p>.<p>ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆಯ ಭಾಷಾಂತರ ನಿರ್ದೇಶನಾಲಯದ ನಿರ್ದೇಶಕ ಎಂ.ವೆಂಕಟೇಶ್ ಮಾತನಾಡಿ, ಸಂವಿಧಾನ ಭಾರತದ ತಾಯಿಬೇರಾಗಿದ್ದು, ಅಂಬೇಡ್ಕರ್ ಅವರನ್ನು ಅರಿಯುವ ಮೊದಲು ದೇಶದ ಪ್ರತಿಯೊಬ್ಬ ಜವಾಬ್ದಾರಿಯುತ ನಾಗರಿಕ ಸಂವಿಧಾನವನ್ನು ಓದಿ ಅರ್ಥೈಸಿಕೊಳ್ಳಬೇಕು ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260414-37-915908261</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಾಮರಾಜನಗರ: ಬುದ್ಧ ಧಮ್ಮ ಹಾಗೂ ಡಾ. ಬಿ.ಆರ್.ಅಂಬೇಡ್ಕರ್ ವಿಚಾರಧಾರೆಗಳು ನಾಣ್ಯದ ಎರಡು ಮುಖಗಳಿದ್ದಂತೆ. ಬುದ್ಧರು ಶೀಲ, ಸಮಾಧಿ, ಪ್ರಜ್ಞೆ ತತ್ವಗಳನ್ನು ಪ್ರತಿಪಾದಿಸಿದರೆ, ಅಂಬೇಡ್ಕರ್ ಶಿಕ್ಷಣ, ಸಂಘಟನೆ, ಹೋರಾಟ ಸಿದ್ದಾಂತಗಳನ್ನು ಪ್ರತಿಪಾದನೆ ಮಾಡಿದರು ಎಂದು ಮೈಸೂರು ಕೆ.ಆರ್.ಆಸ್ಪತ್ರೆಯ ತಜ್ಞ ವೈದ್ಯ ಡಾ.ಡಿ.ಜಗನ್ನಾಥ್ ಹೇಳಿದರು.</p>.<p>ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ ಅಂಗವಾಗಿ ನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಚಾರ ಸಂಕಿರಣದ ಗೋಷ್ಠಿಯಲ್ಲಿ ಅವರು ಮಾತನಾಡಿದರು.</p>.<p>ಇಬ್ಬರ ತತ್ವ–ಸಿದ್ಧಾಂತಗಳಿಗೂ ಸಾಮ್ಯತೆ ಇದ್ದು, ನೈತಿಕ ಮೌಲ್ಯಗಳನ್ನು ರೂಢಿಸಿಕೊಳ್ಳುವುದೇ ನಿಜವಾದ ಶಿಕ್ಷಣವಾಗಿದೆ. ಶೀಲವಿಲ್ಲದ ಶಿಕ್ಷಣ ವ್ಯರ್ಥವಾಗಿದ್ದು, ಪ್ರಜ್ಞಾವಂತರು ಹೋರಾಟ ರೂಪಿಸಿ ಜನರನ್ನು ಅಜ್ಞಾನದ ಕೂಪದಿಂದ ಹೊರಬರು ವಂತೆ ಪ್ರೇರೇಪಿಸಬೇಕು ಎಂದರು</p>.<p>ಬುದ್ಧನ ಪಂಚಶೀಲ ತತ್ವಗಳನ್ನು ಎಲ್ಲರೂ ಅನುಸರಿಸಬೇಕು, ದೇಹ ಮತ್ತು ಮನಸ್ಸು ನಿಯಂತ್ರಣದಲ್ಲಿರಬೇಕು, ಬುದ್ಧನ ಚಿಂತನೆಗಳು ಸಾಮಾಜಿಕ ಸಾಮರಸ್ಯಕ್ಕೆ ಕಾರಣವಾಗಲಿವೆ. ಅಂಬೇಡ್ಕರ್ ಚಿಂತನೆಗಳಲ್ಲಿ ಸಾಮಾಜಿಕ ನ್ಯಾಯ ಪ್ರಧಾನವಾಗಿದೆ. ಬುದ್ಧ ಹಾಗೂ ಅಂಬೇಡ್ಕರ್ ಚಿಂತನೆಗಳು ಸ್ವಸ್ಥ ಸಮಾಜ ನಿರ್ಮಾಣ ಮಾಡಲು ದಾರಿದೀಪವಾಗಿವೆ ಎಂದು ತಿಳಿಸಿದರು.</p>.<p>ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆಯ ಭಾಷಾಂತರ ನಿರ್ದೇಶನಾಲಯದ ನಿರ್ದೇಶಕ ಎಂ.ವೆಂಕಟೇಶ್ ಮಾತನಾಡಿ, ಸಂವಿಧಾನ ಭಾರತದ ತಾಯಿಬೇರಾಗಿದ್ದು, ಅಂಬೇಡ್ಕರ್ ಅವರನ್ನು ಅರಿಯುವ ಮೊದಲು ದೇಶದ ಪ್ರತಿಯೊಬ್ಬ ಜವಾಬ್ದಾರಿಯುತ ನಾಗರಿಕ ಸಂವಿಧಾನವನ್ನು ಓದಿ ಅರ್ಥೈಸಿಕೊಳ್ಳಬೇಕು ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260414-37-915908261</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>