'ಕೋವಿಡ್–19 ಕಾರಣದಿಂದ ಸರ್ಕಾರದ ಮಾರ್ಗಸೂಚಿಯಂತೆ ಕಾರ್ಯಕ್ರಮಗಳು ನಡೆಯಲಿವೆ. ನಮ್ಮ ದೈವಭಕ್ತಿ, ನಿಷ್ಠೆ, ಅರ್ಪಣಾ ಮನೋಭಾವಗಳನ್ನು ಪುನರುಜ್ಜೀವನಗೊಳಿಸುವ ಮೂಲಕ ಭಗವಂತನ ಕೃಪೆಗೆ ಪಾತ್ರರಾಗಲು ಇದೊಂದು ಉತ್ತಮ ಅವಕಾಶವಾಗಿದೆ. ಚಾತುರ್ಮಾಸ್ಯದಲ್ಲಿ ನಡೆಯುವ ಹಲವಾರು ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಭಕ್ತಾದಿಗಳು ಧರ್ಮಪೀಠ, ಧರ್ಮಗುರುಗಳಿಗೆ ಭಕ್ತಿಯನ್ನು ಸಮರ್ಪಿಸಬೇಕು’ ಎಂದು ಸಂಯಮೀಂದ್ರತೀರ್ಥ ಸ್ವಾಮೀಜಿ ಹೇಳಿದ್ದಾರೆ.