ಪ್ರಪಂಚದಲ್ಲಿರುವ ಜೀವಿಗಳಲ್ಲಿ ಮನುಷ್ಯನು ಅತ್ಯಂತ ಶ್ರೇಷ್ಠನೆಂದು ಪರಿಗಣಿಸಲ್ಪಟ್ಟಿದ್ದಾನೆ. ಇಂತಹ ಮನುಷ್ಯ ಜನ್ಮವನ್ನು ಪ್ರತಿಯೊಬ್ಬರೂ ಸಾರ್ಥಕಪಡಿಸಿಕೊಳ್ಳಬೇಕು. ಧರ್ಮಾಚರಣೆಯಿಮದ ಮಾತ್ರವೇ ಇದು ಸಾರ್ಥಕವಾಗುತ್ತದೆ. ಹಾಗಾಗಿ, ಎಲ್ಲರೂ ಧರ್ಮಾಚರಣೆ ಮಾಡಬೇಕು. ಅಧರ್ಮ ಮಾರ್ಗಕ್ಕೆ ಹೋಗಬಾರದು. ದೇವರಲ್ಲಿ ನಂಬಿಕೆಯನ್ನಿಟ್ಟುಕೊಂಡಿರಬೇಕು. ಸತ್ಪುರುಷರ ಸಹವಾಸ ಮಾಡಬೇಕು. ತಂದೆ– ತಾಯಿ ಮತ್ತು ಗುರುಗಳನ್ನು ದೇವರಂತೆ ಕಾಣಬೇಕು. ತಮ್ಮ ತಮ್ಮ ಕರ್ತವ್ಯಗಳನ್ನು ನಿಷ್ಠೆಯಿಂದ ನಿರ್ವರ್ತಿಸಬೇಕು. ಯಾರಿಗೂ ಯಾವತ್ತೂ ತೊಂದರೆ ಮಾಡಬಾರದು.