<p>ಚಿತ್ರದುರ್ಗ: ‘ಬಸವಣ್ಣನವರ ಜಯಂತಿ ಆಚರಿಸುವುದು ದೊಡ್ಡ ಮಾತಲ್ಲ. ಆದರೆ, ಅವರ ತತ್ವಗಳನ್ನು ಸಂಪೂರ್ಣವಾಗಿ ಅಳವಡಿಸಿಕೊಂಡಾಗ ಜೀವನ ಸಾರ್ಥಕವಾಗುತ್ತದೆ’ ಎಂದು ಎಸ್ಜೆಎಂ ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯ ಬಸವಕುಮಾರ ಸ್ವಾಮೀಜಿ ತಿಳಿಸಿದರು.</p>.<p>ನಗರದ ಈಶ್ವರೀಯ ವಿದ್ಯಾಲಯದಲ್ಲಿ ಬಸವ ಜಯಂತಿ ಅಂಗವಾಗಿ ಶನಿವಾರ ಹಮ್ಮಿಕೊಂಡಿದ್ದ ವಿವಿಧ ಸ್ಪರ್ಧೆಗಳಿಗೆ ಚಾಲನೆ ನೀಡಿ ಮಾತನಾಡಿದರು. ‘ಬಸವೇಶ್ವರರ ಹಾದಿಯಲ್ಲಿ ಬ್ರಹ್ಮಕುಮಾರಿಯರು ಸಾಗುತ್ತಿದ್ದಾರೆ. ಈ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ರವಾನೆ ಮಾಡುತ್ತಿದ್ದಾರೆ’ ಎಂದರು.</p>.<p>‘ಪ್ರತಿಯೊಬ್ಬರನ್ನು ಸಹೋದರತ್ವ ಭಾವನೆಯಿಂದ ನೋಡಬೇಕು. ಈ ಕಾರ್ಯವನ್ನು ಈಶ್ವರೀಯ ವಿದ್ಯಾಲಯ ಮಾಡುತ್ತಿದೆ. ಏಕದೇವೋಪಾಸನೆಯ ತತ್ವವನ್ನು ಜೀವನದಲ್ಲಿ ರೂಢಿಸಿಕೊಳ್ಳಬೇಕು’ ಎಂದು ಹೇಳಿದರು.</p>.<p>‘ವಿಶ್ವದ ನೂರಾರು ದೇಶಗಳಲ್ಲಿ ಸೇವಾ ಕೇಂದ್ರಗಳ ಮೂಲಕ ಜ್ಞಾನ ಮತ್ತು ಧ್ಯಾನದ ಮೂಲಕ ಶಾಂತಿ ಪಸರಿಸುವ ಕಾರ್ಯವನ್ನು ಬ್ರಹ್ಮಕುಮಾರಿಯರು ಮಾಡುತ್ತಿದ್ದಾರೆ. ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಮುಂದಾಗಿದ್ದಾರೆ’ ಎಂದರು.</p>.<p>‘ಬಸವಣ್ಣನವರು 12ನೇ ಶತಮಾನದಲ್ಲಿ ಮಹಿಳೆಯರಿಗೆ ಸಮಾನತೆಯ ಸ್ವಾತಂತ್ರ್ಯ ಕೊಟ್ಟರು. ಆ ಕಾರಣದಿಂದಲೇ 21ನೇ ಶತಮಾನದಲ್ಲಿ ಮಹಿಳೆಯರು ಎಲ್ಲ ರಂಗಗಳಲ್ಲೂ ಸಾಧನೆ ಮಾಡುತ್ತಿದ್ದಾರೆ. ಇದು ಬಸವಣ್ಣನವರ ವಿಶೇಷತೆ’ ಎಂದು ಶಿವಶರಣ ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ತಿಳಿಸಿದರು.</p>.<p>ಶಾರದಾ ರಾಮಕೃಷ್ಣ ಆಶ್ರಮದ ಬ್ರಹ್ಮನಿಷ್ಠಾನಂದ, ಉಜ್ಜಿನಿ ಶಾಖಾಮಠದ ಅಭಿಷೇಕ ದೇವರು, ಬ್ರಹ್ಮಕುಮಾರಿ ಶಿವ ರಶ್ಮಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-44-1679986695</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿತ್ರದುರ್ಗ: ‘ಬಸವಣ್ಣನವರ ಜಯಂತಿ ಆಚರಿಸುವುದು ದೊಡ್ಡ ಮಾತಲ್ಲ. ಆದರೆ, ಅವರ ತತ್ವಗಳನ್ನು ಸಂಪೂರ್ಣವಾಗಿ ಅಳವಡಿಸಿಕೊಂಡಾಗ ಜೀವನ ಸಾರ್ಥಕವಾಗುತ್ತದೆ’ ಎಂದು ಎಸ್ಜೆಎಂ ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯ ಬಸವಕುಮಾರ ಸ್ವಾಮೀಜಿ ತಿಳಿಸಿದರು.</p>.<p>ನಗರದ ಈಶ್ವರೀಯ ವಿದ್ಯಾಲಯದಲ್ಲಿ ಬಸವ ಜಯಂತಿ ಅಂಗವಾಗಿ ಶನಿವಾರ ಹಮ್ಮಿಕೊಂಡಿದ್ದ ವಿವಿಧ ಸ್ಪರ್ಧೆಗಳಿಗೆ ಚಾಲನೆ ನೀಡಿ ಮಾತನಾಡಿದರು. ‘ಬಸವೇಶ್ವರರ ಹಾದಿಯಲ್ಲಿ ಬ್ರಹ್ಮಕುಮಾರಿಯರು ಸಾಗುತ್ತಿದ್ದಾರೆ. ಈ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ರವಾನೆ ಮಾಡುತ್ತಿದ್ದಾರೆ’ ಎಂದರು.</p>.<p>‘ಪ್ರತಿಯೊಬ್ಬರನ್ನು ಸಹೋದರತ್ವ ಭಾವನೆಯಿಂದ ನೋಡಬೇಕು. ಈ ಕಾರ್ಯವನ್ನು ಈಶ್ವರೀಯ ವಿದ್ಯಾಲಯ ಮಾಡುತ್ತಿದೆ. ಏಕದೇವೋಪಾಸನೆಯ ತತ್ವವನ್ನು ಜೀವನದಲ್ಲಿ ರೂಢಿಸಿಕೊಳ್ಳಬೇಕು’ ಎಂದು ಹೇಳಿದರು.</p>.<p>‘ವಿಶ್ವದ ನೂರಾರು ದೇಶಗಳಲ್ಲಿ ಸೇವಾ ಕೇಂದ್ರಗಳ ಮೂಲಕ ಜ್ಞಾನ ಮತ್ತು ಧ್ಯಾನದ ಮೂಲಕ ಶಾಂತಿ ಪಸರಿಸುವ ಕಾರ್ಯವನ್ನು ಬ್ರಹ್ಮಕುಮಾರಿಯರು ಮಾಡುತ್ತಿದ್ದಾರೆ. ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಮುಂದಾಗಿದ್ದಾರೆ’ ಎಂದರು.</p>.<p>‘ಬಸವಣ್ಣನವರು 12ನೇ ಶತಮಾನದಲ್ಲಿ ಮಹಿಳೆಯರಿಗೆ ಸಮಾನತೆಯ ಸ್ವಾತಂತ್ರ್ಯ ಕೊಟ್ಟರು. ಆ ಕಾರಣದಿಂದಲೇ 21ನೇ ಶತಮಾನದಲ್ಲಿ ಮಹಿಳೆಯರು ಎಲ್ಲ ರಂಗಗಳಲ್ಲೂ ಸಾಧನೆ ಮಾಡುತ್ತಿದ್ದಾರೆ. ಇದು ಬಸವಣ್ಣನವರ ವಿಶೇಷತೆ’ ಎಂದು ಶಿವಶರಣ ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ತಿಳಿಸಿದರು.</p>.<p>ಶಾರದಾ ರಾಮಕೃಷ್ಣ ಆಶ್ರಮದ ಬ್ರಹ್ಮನಿಷ್ಠಾನಂದ, ಉಜ್ಜಿನಿ ಶಾಖಾಮಠದ ಅಭಿಷೇಕ ದೇವರು, ಬ್ರಹ್ಮಕುಮಾರಿ ಶಿವ ರಶ್ಮಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-44-1679986695</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>