<p>ಚಿತ್ರದುರ್ಗ: ‘ಬಾಬಾಸಾಹೇಬರ ಜಾತಿವಿನಾಶ ಕೃತಿಯನ್ನು ಸರಿಯಾಗಿ ಅರ್ಥ ಮಾಡಿಕೊಂಡರೆ ಭಾರತದ ಪ್ರಜಾಪ್ರಭುತ್ವದ ಆಶಯಗಳು ಸಾಕಾರಗೊಳ್ಳುತ್ತವೆ’ ಎಂದು ಚಿಂತಕ ವೇದಾಂತ ಏಳಂಜಿ ತಿಳಿಸಿದರು.</p>.<p>ನಗರದ ಮಹಾತ್ಮ ಫುಲೆ ಅಧ್ಯಯನ ಕೇಂದ್ರದಲ್ಲಿ ಬುಧವಾರ ಅಂಬೇಡ್ಕರ್ ಜಯಂತಿ ಅಂಗವಾಗಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘4000 ಜಾತಿಗಳನ್ನು 4 ವರ್ಣದಲ್ಲಿ ಮಾಡಿ ಮೇಲು ಕೀಳು ಪರಿಕಲ್ಪನೆಯಲ್ಲಿ ಹಿಂದೂ ಎಂದರೆ ಯಾವ ಜಾತಿ ಎಂದು ಕೇಳುವ ಧೋರಣೆಯಿದೆ’ ಎಂದರು.</p>.<p>‘ನಿರ್ಬಂಧ ಹೇರುವ ಧರ್ಮದ ಕಟ್ಟಲೆಗಳು ನಿಲ್ಲುವವರೆಗೂ ಹಿಂದೂ ಧರ್ಮ ಆದರ್ಶವಾಗಲಾರದು. ಜಾತಿ ಪದ್ಧತಿ ಅನುಸರಿಸುವ ಜನರದ್ದು ತಪ್ಪಿಲ್ಲ ಆದರೆ, ಜನರಿಗೆ ಜಾತಿ ಕಮ್ಮಟಗಳನ್ನು ಹಾಗೂ ಧರ್ಮ ಬೋಧನೆ ಮಾಡುವುದು ತಪ್ಪು ಎಂದು ಬಾಬಾಸಾಹೇಬರು ಹೇಳಿದ್ದರು’ ಎಂದು ಸ್ಮರಿಸಿದರು.</p>.<p>ಕೃಷಿ ಅಧಿಕಾರಿ ಕಿರಣ್ ಕುಮಾರ್, ಚಿಂತಕ ಶ್ರೀನಿವಾಸರಾಜು ದೊಡ್ಡೇರಿ, ಉಪನ್ಯಾಸಕ ಹನುಮಂತಪ್ಪ ದಡಗೂರು, ಪ್ರಕಾಶ ಯಾದಲಗಟ್ಟೆ, ಪುರುಷೋತ್ತಮ, ಮೋದೂರು ತೇಜ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260417-44-1477856434</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿತ್ರದುರ್ಗ: ‘ಬಾಬಾಸಾಹೇಬರ ಜಾತಿವಿನಾಶ ಕೃತಿಯನ್ನು ಸರಿಯಾಗಿ ಅರ್ಥ ಮಾಡಿಕೊಂಡರೆ ಭಾರತದ ಪ್ರಜಾಪ್ರಭುತ್ವದ ಆಶಯಗಳು ಸಾಕಾರಗೊಳ್ಳುತ್ತವೆ’ ಎಂದು ಚಿಂತಕ ವೇದಾಂತ ಏಳಂಜಿ ತಿಳಿಸಿದರು.</p>.<p>ನಗರದ ಮಹಾತ್ಮ ಫುಲೆ ಅಧ್ಯಯನ ಕೇಂದ್ರದಲ್ಲಿ ಬುಧವಾರ ಅಂಬೇಡ್ಕರ್ ಜಯಂತಿ ಅಂಗವಾಗಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘4000 ಜಾತಿಗಳನ್ನು 4 ವರ್ಣದಲ್ಲಿ ಮಾಡಿ ಮೇಲು ಕೀಳು ಪರಿಕಲ್ಪನೆಯಲ್ಲಿ ಹಿಂದೂ ಎಂದರೆ ಯಾವ ಜಾತಿ ಎಂದು ಕೇಳುವ ಧೋರಣೆಯಿದೆ’ ಎಂದರು.</p>.<p>‘ನಿರ್ಬಂಧ ಹೇರುವ ಧರ್ಮದ ಕಟ್ಟಲೆಗಳು ನಿಲ್ಲುವವರೆಗೂ ಹಿಂದೂ ಧರ್ಮ ಆದರ್ಶವಾಗಲಾರದು. ಜಾತಿ ಪದ್ಧತಿ ಅನುಸರಿಸುವ ಜನರದ್ದು ತಪ್ಪಿಲ್ಲ ಆದರೆ, ಜನರಿಗೆ ಜಾತಿ ಕಮ್ಮಟಗಳನ್ನು ಹಾಗೂ ಧರ್ಮ ಬೋಧನೆ ಮಾಡುವುದು ತಪ್ಪು ಎಂದು ಬಾಬಾಸಾಹೇಬರು ಹೇಳಿದ್ದರು’ ಎಂದು ಸ್ಮರಿಸಿದರು.</p>.<p>ಕೃಷಿ ಅಧಿಕಾರಿ ಕಿರಣ್ ಕುಮಾರ್, ಚಿಂತಕ ಶ್ರೀನಿವಾಸರಾಜು ದೊಡ್ಡೇರಿ, ಉಪನ್ಯಾಸಕ ಹನುಮಂತಪ್ಪ ದಡಗೂರು, ಪ್ರಕಾಶ ಯಾದಲಗಟ್ಟೆ, ಪುರುಷೋತ್ತಮ, ಮೋದೂರು ತೇಜ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260417-44-1477856434</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>