ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಿನ ಭವಿಷ್ಯ ಜೂನ್‌ 27

Last Updated 26 ಜೂನ್ 2020, 19:30 IST
ಅಕ್ಷರ ಗಾತ್ರ

ಶಾರ್ವರಿ ನಾಮ ಸಂವತ್ಸರ ಉತ್ತರಾಯಣ ಗ್ರೀಷ್ಮ ಋತು ಆಷಾಢ ಮಾಸ ಶುಕ್ಲ ಪಕ್ಷ ಮಳೆ ನಕ್ಷತ್ರ ಆದ್ರೆ ಸಪ್ತಮಿ ಗಂ. 50-56 (ರಾ 2-26) ಶನಿವಾರ ನಿತ್ಯ ನಕ್ಷತ್ರ ಪೂರ್ವಫಲ್ಗುಣಿ ಗಂ. 10-59 (ಹ. 10-28) ವ್ಯತೀಪಾತ ನಾಮ ಯೋಗ ಗಂ 44-28 ಗರಜ ಕರಣ ಗಂ 23-45 ವಿಷ ಗಂ. 27-50 ಅಮೃತ ಗಂ. 50-18 ರಾಹುಕಾಲ ಬೆ. ಗಂ. 9-00 ರಿಂದ 10-30 ಗುಳಿಕ ಕಾಲ ಬೆ. ಗಂ 6-00 ರಿಂದ 7-30 ಯಮಗಂಡ ಮ. ಕಾಲ ಗಂ 1-30 ರಿಂದ 3-00 ಸೂರ್ಯೋದಯ: 5-59 ಸೂರ್ಯಾಸ್ತ: 6-45 ಅದೃಷ್ಟ ಸಂಖ್ಯೆ 7

ಮೇಷ: ಮಹತ್ವದ ವಿಷಯಗಳಲ್ಲಿ ನಿಮ್ಮ ದೃಢ ನಿಲುವು ಅಮೂಲ್ಯವಾಗಿ ಪರಿಣಮಿಸುವುದು. ಎಲ್ಲರ ಪ್ರಶಂಸೆಗೆ ಪಾತ್ರರಾಗಲಿದ್ದೀರಿ. ಬೆನ್ನು ನೋವು, ಮಂಡಿನೋವುಗಳು ಕಾಣಿಸಿಕೊಳ್ಳುವ ಸಾಧ್ಯತೆ. ನಿರ್ಲಕ್ಷ್ಯ ಮಾಡದಿರಿ.

ವೃಷಭ: ಕೌಟುಂಬಿಕ ಕಿರಿಕಿರಿಯ ಸಾಧ್ಯತೆ. ಸಂಗಾತಿಯೊಡನೆ ವಾದ ವಿವಾದ ಸಲ್ಲ. ಮಕ್ಕಳ ಸಹಕಾರದಿಂದ ನೆಮ್ಮದಿ ಕಂಡುಕೊಳ್ಳುವಿರಿ. ಗುರುವಿನ ಆರಾಧನೆಯಿಂದ ಉತ್ತಮ ಫಲ ದೊರೆಯುವುದು.

ಮಿಥುನ: ಧಾರ್ಮಿಕ, ಸಾಮಾಜಿಕ ಚಿಂತನೆಗಳತ್ತ ಮನಸ್ಸನ್ನು ಹರಿಯ ಬಿಡುವ ಸಾಧ್ಯತೆ. ಜೀವನದ ಅರ್ಥ, ಮರ್ಮಗಳಿಗಾಗಿ ಹುಡುಕಾಟ ಪ್ರಾರಂಭವಾಗುವುದು. ಅಧ್ಯಯನಶೀಲರಿಗೆ ಯಶಸ್ಸು.

ಕರ್ಕಾಟಕ: ಅಪರಿಚಿತ ವ್ಯಕ್ತಿಗಳಿಂದ ಮೋಸಹೋಗುವ ಸಾಧ್ಯತೆ. ಹಣಕಾಸಿನ ವಿಷಯದಲ್ಲಿ ಅತ್ಯಂತ ಜಾಗರೂಕರಾಗಿರಿ. ಮನೆಯವರ ಸಲಹೆಗೆ ಮನ್ನಣೆ ನೀಡಿ. ಕುಲದೇವತಾ ಪ್ರಾರ್ಥನೆ ಮಾಡಿ.

ಸಿಂಹ: ನೀವು ಯೋಜಿಸಿದ ಮಹತ್ತರ ಯೋಜನೆಗಳ ಬಗ್ಗೆ ಹಿತೈಷಿಗಳೆದುರು ಪ್ರಸ್ತಾಪಿಸಿ. ಉತ್ತಮ ಸಲಹೆ ಸಹಕಾರಗಳು ದೊರೆತು ಯೋಜನೆಗಳಲ್ಲಿ ಯಶಸ್ಸನ್ನು ಕಾಣುವಿರಿ. ಗಣಪತಿಯ ಧ್ಯಾನ ಮಾಡಿ ಮುಂದುವರಿಯಿರಿ.

ಕನ್ಯಾ: ನಿಮ್ಮ ಬಗೆಗೆ ಬೇರೆಯವರ ಮನದಾಳದ ಮಾತುಗಳನ್ನು ಆಲೈಸುವ ಆತುರ. ಉತ್ತಮ ಅಭಿಪ್ರಾಯಗಳಿಂದಾಗಿ ಮನಸ್ಸಿಗೆ ಹಿತಾನುಭವ. ಸ್ನೇಹಿತರ ಬಂಧುವರ್ಗದವರ ಅನಿರೀಕ್ಷಿತ ಭೇಟಿಯ ಸಾಧ್ಯತೆ.

ತುಲಾ: ಕೆಲಸದ ಒತ್ತಡಕ್ಕೆ ಹೆದರಿ ವಿಮುಖರಾಗದಿರಿ. ಸರ್ಕಾರಿ ಕೆಲಸದಲ್ಲಿರುವವರಿಗೆ ರಾಜೀನಾಮೆ ನೀಡುವ ಪರಿಸ್ಥಿತಿ ತಲೆದೋರಬಹುದು. ದುಡುಕದೇ ಧೈರ್ಯವಾಗಿ ಮುನ್ನುಗ್ಗಿ. ಯಶಸ್ಸು ನಿಮ್ಮದಾಗಲಿದೆ.

ವೃಶ್ಚಿಕ: ನಿಮ್ಮ ಮಾತು ಮತ್ತು ಆಕರ್ಷಕ ವ್ಯಕ್ತಿತ್ವದಿಂದಾಗಿ ಇತರರನ್ನು ಮುದಗೊಳಿಸುವಿರಿ. ನಿಮ್ಮ ನಿರ್ಧಾರಗಳು ಸಮರ್ಪಕವಾಗಿದ್ದು ಬಹುಜನರ ಪ್ರಶಂಸೆಗೆ ಪಾತ್ರವಾಗುವುದು. ಯಶಸ್ಸಿನ ಅಮಲು ಉಚಿತವಲ್ಲ.

ಧನು: ಒಂಟಿತನದಿಂದ ಬೇಸತ್ತ ನಿಮಗೆ ಹೊಸ ಜಗತ್ತಿನ ಅರಿವಿನಿಂದಾಗಿ ಮುದಗೊಳ್ಳುವ ಅವಕಾಶ. ಹೊಸ ಸಂಬಂಧ, ಗೆಳೆತನಗಳು ಕೂಡಿಬರುವ ಸಾಧ್ಯತೆ. ಜೀವನಕ್ಕೊಂದು ಹೊಸ ತಿರುವು ಬರುವ ನಿರೀಕ್ಷೆ.

ಮಕರ: ಪ್ರೀತಿ ವಾತ್ಸಲ್ಯ ತುಂಬಿದ ಮಾತಿನಿಂದಾಗಿ ಸಂಗಾತಿಯಲ್ಲಿ ಹೆಚ್ಚಿನ ವಿಶ್ವಾಸ ಹೊಂದುವಿರಿ. ದಾಂಪತ್ಯದಲ್ಲಿ ಮಧುರ ಕ್ಷಣಗಳನ್ನು ಅನುಭವಿಸುವಿರಿ. ದೂರದ ಪ್ರಯಾಣದಿಂದಾಗಿ ಬೇಸರ ಉಂಟಾಗುವ ಸಾಧ್ಯತೆ.

ಕುಂಭ: ವೃತ್ತಿ ಕ್ಷೇತ್ರದಲ್ಲಿ ನಿಮ್ಮ ಗುರಿಯನ್ನು ನಿರಾಯಾಸವಾಗಿ ತಲುಪುವಿರಿ. ಕಾರ್ಯತತ್ಪರತೆಯಿಂದ ಹಿಂಜರಿಯದಿರಿ. ಉನ್ನತಾಧಿಕಾರಿಗಳಿಂದ ಪ್ರಶಂಸೆ. ಸಹೋದ್ಯೋಗಿಗಳಿಂದ ಕೊಂಕು ಮಾತನ್ನು ಎದುರಿಸಬೇಕಾದೀತು.

ಮೀನ: ಸಂಕೋಚ ಸ್ವಭಾವದಿಂದ ಹೊರ ಬಂದು ಕಾರ್ಯ ಮಗ್ನರಾಗಿ ಯಶಸ್ಸು ಸಾಧಿಸಿ. ಮುಲಾಜಿಗೆ ಒಳಗಾಗದೇ ಪಕ್ಕಾ ವ್ಯವಹಾರಸ್ಥರಾಗಿ. ವಿದ್ಯಾರ್ಥಿಗಳಿಗೆ ಸಹಪಾಠಿಗಳಿಂದ ತಗಾದೆಯ ಸಾಧ್ಯತೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT