ದಾವಣಗೆರೆಯಲ್ಲಿ ಸದ್ದಿಲ್ಲದೇ ಗಣೇಶೋತ್ಸವಕ್ಕೆ ಸಿದ್ಧತೆ ನಡೆಯುತ್ತಿದೆ. ಸರ್ಕಾರ ಕೊನೇ ಕ್ಷಣದಲ್ಲಿ ಸಾರ್ವಜನಿಕವಾಗಿ ಗಣೇಶನ ಹಬ್ಬ ನಡೆಸಲು ಷರತ್ತುಬದ್ಧ ಅವಕಾಶ ನೀಡಿದೆ. ಅವಕಾಶ ಸಿಕ್ಕಿಯೇ ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿ ಅನೇಕ ಸಂಘ–ಸಂಸ್ಥೆಗಳು ಗಣೇಶೋತ್ಸವಕ್ಕೆ ಸಿದ್ಧತೆ ಮಾಡಿಕೊಂಡಿದ್ದವು. ಜತೆಗೆ ಮನೆ ಮನೆಯಲ್ಲಿ ಗಣಪತಿ ಕೂರಿಸಲು ಜನ ತಯಾರಾಗಿದ್ದಾರೆ.