<p>ದಾವಣಗೆರೆ: ವಿಶ್ವಕರ್ಮ ಸಮಾಜ ಸಂಘದ ವತಿಯಿಂದ 43ನೇ ವರ್ಷದ ಸಾಮೂಹಿಕ ಉಪನಯನ ಹಾಗೂ ವಿವಾಹ ಮಹೋತ್ಸವವನ್ನು ನಗರದ ಕಾಳಿಕಾದೇವಿ ರಸ್ತೆಯ ಕಾಳಿಕಾಂಬಾ ವಿಶ್ವಕರ್ಮ ಕಲ್ಯಾಣ ಮಂಟಪದಲ್ಲಿ ಮೇ 6ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ವಿ.ಎಂ. ಕೊಟ್ರೇಶಾಚಾರ್ ತಿಳಿಸಿದರು.</p>.<p>‘ಆನೆಗುಂದಿ ಮಹಾಸಂಸ್ಥಾನ ಮಠದ ಅಭಿನವ ಶ್ರೀಕಂಠಸ್ವಾಮಿ ಸಾನ್ನಿಧ್ಯದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಮೇ 5ರಂದು ಸಂಜೆ 5.30ಕ್ಕೆ ವಧು-ವರರು ಮತ್ತು ವಟುಗಳು ಕಲ್ಯಾಣ ಮಂಟಪಕ್ಕೆ ಆಗಮಿಸಲಿದ್ದಾರೆ. ಅಂದು ಸಂಜೆ 6.30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ’ ಎಂದು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು.</p>.<p>‘ಮೇ 6ರಂದು ಬ್ರಹ್ಮೋಪದೇಶ ಹಾಗೂ ಸಾಮೂಹಿಕ ವಿವಾಹ ಜರುಗಲಿದೆ. ಅಂದು ಬೆಳಿಗ್ಗೆ 6.30ರಿಂದ 8.25ರವರೆಗೆ ಉಪನಯನ ಹಾಗೂ 8.30ರಿಂದ ಸಾಮೂಹಿಕ ವಿವಾಹ ನೆರವೇರಲಿದೆ. ಪುರವರ್ಗ ಹಿರೇಮಠದ ಓಂಕಾರ ಶಿವಾಚಾರ್ಯ ಸ್ವಾಮೀಜಿ, ಜವಳಿ ಉದ್ಯಮಿ ಬಿ.ಸಿ. ಉಮಾಪತಿ ಪಾಲ್ಗೊಳ್ಳಲಿದ್ದಾರೆ’ ಎಂದರು.</p>.<p>ವಿಶ್ವಕರ್ಮ ಸಮಾಜ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಆರ್.ವಿಜಯ್ ಕುಮಾರ್, ಉಪಾಧ್ಯಕ್ಷರಾದ ಕೆ.ಎ. ಮನೋಹರ, ಸಿ.ಪಿ.ಪೂರ್ವಾಚಾರ್, ಸಹಕಾರ್ಯದರ್ಶಿ ಎಂ.ಡಿ.ಮೌನೇಶ್ವರಾಚಾರ್, ಖಜಾಂಚಿ ಬಿ.ವಿ.ರಾಜಶೇಖರ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-43-1461136330</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾವಣಗೆರೆ: ವಿಶ್ವಕರ್ಮ ಸಮಾಜ ಸಂಘದ ವತಿಯಿಂದ 43ನೇ ವರ್ಷದ ಸಾಮೂಹಿಕ ಉಪನಯನ ಹಾಗೂ ವಿವಾಹ ಮಹೋತ್ಸವವನ್ನು ನಗರದ ಕಾಳಿಕಾದೇವಿ ರಸ್ತೆಯ ಕಾಳಿಕಾಂಬಾ ವಿಶ್ವಕರ್ಮ ಕಲ್ಯಾಣ ಮಂಟಪದಲ್ಲಿ ಮೇ 6ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ವಿ.ಎಂ. ಕೊಟ್ರೇಶಾಚಾರ್ ತಿಳಿಸಿದರು.</p>.<p>‘ಆನೆಗುಂದಿ ಮಹಾಸಂಸ್ಥಾನ ಮಠದ ಅಭಿನವ ಶ್ರೀಕಂಠಸ್ವಾಮಿ ಸಾನ್ನಿಧ್ಯದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಮೇ 5ರಂದು ಸಂಜೆ 5.30ಕ್ಕೆ ವಧು-ವರರು ಮತ್ತು ವಟುಗಳು ಕಲ್ಯಾಣ ಮಂಟಪಕ್ಕೆ ಆಗಮಿಸಲಿದ್ದಾರೆ. ಅಂದು ಸಂಜೆ 6.30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ’ ಎಂದು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು.</p>.<p>‘ಮೇ 6ರಂದು ಬ್ರಹ್ಮೋಪದೇಶ ಹಾಗೂ ಸಾಮೂಹಿಕ ವಿವಾಹ ಜರುಗಲಿದೆ. ಅಂದು ಬೆಳಿಗ್ಗೆ 6.30ರಿಂದ 8.25ರವರೆಗೆ ಉಪನಯನ ಹಾಗೂ 8.30ರಿಂದ ಸಾಮೂಹಿಕ ವಿವಾಹ ನೆರವೇರಲಿದೆ. ಪುರವರ್ಗ ಹಿರೇಮಠದ ಓಂಕಾರ ಶಿವಾಚಾರ್ಯ ಸ್ವಾಮೀಜಿ, ಜವಳಿ ಉದ್ಯಮಿ ಬಿ.ಸಿ. ಉಮಾಪತಿ ಪಾಲ್ಗೊಳ್ಳಲಿದ್ದಾರೆ’ ಎಂದರು.</p>.<p>ವಿಶ್ವಕರ್ಮ ಸಮಾಜ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಆರ್.ವಿಜಯ್ ಕುಮಾರ್, ಉಪಾಧ್ಯಕ್ಷರಾದ ಕೆ.ಎ. ಮನೋಹರ, ಸಿ.ಪಿ.ಪೂರ್ವಾಚಾರ್, ಸಹಕಾರ್ಯದರ್ಶಿ ಎಂ.ಡಿ.ಮೌನೇಶ್ವರಾಚಾರ್, ಖಜಾಂಚಿ ಬಿ.ವಿ.ರಾಜಶೇಖರ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-43-1461136330</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>